ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಇಷ್ಟೆಲ್ಲಾ ಲಾಭಗಳು ಆಗುತ್ತವಂತೆ
Recommended Video

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 2ರಂದು ಉತ್ತರ ಕರ್ನಾಟಕ ಜಿಲ್ಲೆಗಳ ಬಂದ್ಗೆ ಕರೆ ನೀಡಲಾಗಿದೆ.
ಕೆಲವು ವರ್ಷಗಳಿಂದ ಗುಪ್ತಗಾಮಿನಿಯಂತಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಹೊರ ಬಂದಿದ್ದು. ರಾಜಕಾರಣಿಗಳು ಹಾಗೂ ಸ್ವಾಮೀಜಿಗಳ ಬೆಂಬಲವೂ ದೊರೆತಿರುವುದು ಹೋರಾಟಕ್ಕೆ ಬಲ ಹೆಚ್ಚಿಸಿದೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಏನೇನು ಲಾಭಗಳಾಗುತ್ತವೆ ಎಂದು ಪತ್ಯೇಕ ರಾಜ್ಯ ಹೋರಾಟಗಾರರು ಕರಪತ್ರ ಹೊರ ತಂದಿದ್ದು, ಅವರು ನೀಡಿರುವ ಲಾಭಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ, ವಿಮರ್ಶಿಸಿ.

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್
ಈ ಬಾರಿ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಧ್ವನಿ ಕೇಳಿಬಂದಿದೆ. ಬಜೆಟ್ ನಂತರವೇ ಉತ್ತರ ಕರ್ನಾಟಕ ಪ್ರತ್ಯೇಕವಾಗಬೇಕೆಂಬ ಹೊರಾಟ ತೀವ್ರವಾಗಿದೆ. ಒಂದು ವೇಳೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಅದಕ್ಕೆ ಪ್ರತ್ಯೇಕ ಬಜೆಟ್ ದೊರಕಲಿದೆ. ಕೇಂದ್ರವು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಅನುದಾನ ಬಿಡುಗಡೆ ಮಾಡಲಿದೆ.

ರಾಜಧಾನಿ ಸಮೀಪ
ಉತ್ತರ ಕರ್ನಾಟಕದ ಜನರ ಪ್ರಮುಖ ದೂರೆಂದರೆ ರಾಜ್ಯ ರಾಜಧಾನಿಯಿಂದ ಬಹಳ ದೂರ ಉಳಿದಿರುವುದು. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಿ ವರ್ಷಕ್ಕೊಮ್ಮೆ ಆಡಳಿತವನ್ನು ಬೆಳಗಾವಿಗೆ ವರ್ಗಾಯಿಸಿದರೂ ಕೂಡ ಅದು ತಾತ್ಕಾಲಿಕವಷ್ಟೆ. ರಾಜಧಾನಿಗೆ ಹತ್ತಿರವಿರುವ ಜಿಲ್ಲೆಗಳು ಅಭಿವೃದ್ಧಿಯಲ್ಲಿ ನೇರವಾಗಿ ಪಾಲ್ಗೊಳ್ಳುತ್ತವೆ ಆದರೆ ದೂರ ಇರುವವ ಅಭಿವೃದ್ಧಿಯಲ್ಲಿ ಹಿಂದುಳಿಯುತ್ತವೆ. ಉ.ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ರಾಜಧಾನಿ ಹತ್ತಿರದಲ್ಲೇ ದೊರಕುತ್ತದೆ ಎಂಬುದು ಪ್ರತ್ಯೇಕತಾವಾದಿಗಳ ಕೂಗು.

ಚಿಕ್ಕ ರಾಜ್ಯ-ಚೊಕ್ಕ ಆಡಳಿತ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಚಿಕ್ಕದಾದ ರಾಜ್ಯ ನಿರ್ಮಾಣವಾಗುತ್ತದೆ. ಆಗ ಆಡಳಿತ ಸುಲಭವಾಗುತ್ತದೆ ಹಾಗೂ ಸುಗಮವಾಗುತ್ತದೆ. ಚಿಕ್ಕ ರಾಜ್ಯದ ಆಡಳಿತವನ್ನು ಚೊಕ್ಕವಾಗಿ ಮಾಡಬಹುದು ಎಂಬುದು ಅವರ ವಾದ. ಇದಕ್ಕೆ ಅಂಬೇಡ್ಕರ್ ಅವರು ಹೇಳಿದ್ದ ಚಿಕ್ಕ-ಚಿಕ್ಕ ರಾಜ್ಯಗಳ ನಿರ್ಮಾಣದ ಅವಶ್ಯಕತೆಯನ್ನು ಉದಾಹರಣೆಯಾಗಿ ನೀಡುತ್ತಾರೆ.

ನಮ್ಮ ತೆರಿಗೆ-ನಮ್ಮ ಅಭಿವೃದ್ಧಿ
ಉ.ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಆ ರಾಜ್ಯಕ್ಕೆ ಒಳಪಡುವ 13 ಜಿಲ್ಲೆಗಳಲ್ಲಿ ಕ್ರೂಡೀಕೃತವಾಗುವ ತೆರಿಗೆ ಹಣವನ್ನು ರಾಜ್ಯದ ಅಭಿವೃದ್ಧಿಗೆ ಬಳಸಬಹುದು ಎಂಬ ವಾದವನ್ನು ಪ್ರತ್ಯೇಕ ರಾಜ್ಯ ಕೂಗಿನ ನಾಯಕರು ಮುಂದಿಟ್ಟಿದ್ದಾರೆ. ನಮ್ಮ ತೆರಿಗೆ ಹಣದಲ್ಲಿ ಬೆಂಗಳೂರು, ಮೈಸೂರು ಅಭಿವೃದ್ಧಿ ಆಗುವುದು ಬೇಡ ಎಂಬುದು ಅವರ ವಾದ.

ಪ್ರಾದೇಶಿಕ ಸ್ವಾತಂತ್ರ್ಯತೆ
ಪ್ರತ್ಯೇಕ ರಾಜ್ಯವಾದರೆ ಪ್ರಾದೇಶಿಕ ಸ್ವಾತಂತ್ರ್ಯತೆ ದೊರಕುತ್ತದೆ. ಅಭಿವೃದ್ಧಿ ಬಗ್ಗೆ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ದಕ್ಷಿಣದಿಂದ ಉತ್ತರಕ್ಕೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಬಹುದು. ಅಲ್ಲದೆ ಒಂದೇ ಭಾಷೆಯ ಎರಡು ರಾಜ್ಯಗಳ ಉಗಮ ಸಹ ಆಗುತ್ತದೆ ಎನ್ನುತ್ತಾರೆ ಹೊರಾಟಗಾರರು.

ರಾಜಕೀಯ ಬಲವರ್ಧನೆ
ಉತ್ತರ ಕರ್ನಾಟಕದ ರಾಜಕಾರಣಿಗಳು ದಕ್ಷಿಣ ಕರ್ನಾಟಕ ಪ್ರಬಲ ರಾಜಕಾರಣಿಗಳ ಪ್ರಭಾವದಿಂದ ಹೊರಬಂದು ತಮ್ಮದೇ ಅಸ್ಥಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ತಮ್ಮ ಭಾಗದ ಬೇಕು ಬೇಡಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಮತ್ತೊಬ್ಬರ ಮರ್ಜಿ ಕೇಳುವ ಅವಶ್ಯಕತೆ ಇರುವುದಿಲ್ಲ.

ಉದ್ಯೋಗ ಸೃಷ್ಠಿ
ಉತ್ತರ ಕರ್ನಾಟಕ ಭಾಗದಲ್ಲಿಯೂ ಸಹ ಐಐಟಿಗಳ ಸ್ಥಾಪನೆ ಮಾಡಬಹುದು, ಐಟಿ, ಬಿಟಿ ಸಂಸ್ಥೆಗಳನ್ನು ಸ್ಥಾಪನೆ ಮಾಡಿ ನಮ್ಮ ಯುವಕರು ದಕ್ಷಿಣಕ್ಕೆ ವಲಸೆ ಹೋಗುವುದನ್ನು ತಡೆಯಬಹುದು. ನಮ್ಮ ಯುವಕರಿಗೆ ಇಲ್ಲಿಯೇ ಉದ್ಯೋಗ ಒದಗಿಸಬಹುದು ಎಂದು ಹೇಳುತ್ತಾರೆ ಪ್ರತ್ಯೇಕ ರಾಜ್ಯ ಹೋರಾಟಗಾರರು.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications