ಪ್ರಜ್ವಲ್ ಎಂಪಿ ಸೀಟ್ ರದ್ದಾದರೆ, ಭವಾನಿ ರೇವಣ್ಣ ಸ್ಪರ್ಧೆ... Prajwal Revanna
ರಾಜ್ಯ ರಾಜಕಾರಣದಲ್ಲಿ ದೊಡ್ಡಗೌಡರು ಎಂದು ಕರೆಸಿಕೊಂಡಿರುವ ಮಾಜಿ ಪ್ರಧಾನಿ, ಜೆಡಿಎಸ್ ನೇತಾರ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಮಹಿಳೆಯ ಮೇಲಿನ ಅತ್ಯಾಚಾರ ಕೇಸ್ನಲ್ಲಿ ಅಪರಾಧಿಯಾಗಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಸಂಸದರಾಗಿದ್ದ ಪ್ರಜ್ವಲ್ ಕಳೆದ ಚುನಾವಣೆಯಲ್ಲಿ ಇದೇ ಆರೋಪಗಳಿಂದಾಗಿ ಸೋಲುಂಡರು ಎನ್ನುವ ಮಾತಿದೆ. ಚುನಾವಣೆ ಸಂದರ್ಭದಲ್ಲೇ ಪ್ರಜ್ವಲ್ ಅವರ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಎಲ್ಲೆಡೆ ಹರಿದಾಡಿತ್ತು. ಜೆಡಿಎಸ್ ಭದ್ರಕೋಟೆಯಾದ ಹಾಸನದಲ್ಲೇ ಪ್ರಜ್ವಲ್ ಸೋಲು ಕಂಡರು. ಬಳಿಕ ಈ ಕೇಸ್ನಲ್ಲಿ ಅರೆಸ್ಟ್ ಆಗಿ ಜೈಲು ಸೇರಿದರು. ಆದರೆ ಕೋರ್ಟ್ ಈ ಕೇಸ್ನಲ್ಲಿ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದ್ದು, ಭಾರೀ ಪ್ರಮಾಣದ ಶಿಕ್ಷೆ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಪ್ರಜ್ವಲ್ ಬದಲಿಗೆ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಎಂಪಿ ಟಿಕೆಟ್ ಸಿಗಲಿದೆ ಎಂಬ ಚರ್ಚೆಗಳು ಶುರುವಾಗಿವೆ.
ತಮ್ಮ ಮೊಮ್ಮಗನ ರಾಜಕೀಯ ಭವಿಷ್ಯಕ್ಕಾಗಿ ದೇವೇಗೌಡರು ಹಾಸನದ ಎಂಪಿ ಸೀಟನ್ನು ಬಿಟ್ಟುಕೊಟ್ಟಿದ್ದರು. ಬಳಿಕ ಪ್ರಜ್ವಲ್ ಗೆದ್ದು ಲೋಕಸಭೆಯಲ್ಲೂ ಅಬ್ಬರಿಸಿದ್ದರು. ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಹಾಸನದಿಂದಲೇ ಕಣಕ್ಕಿಳಿದಿದ್ದರು. ಆದರೆ ಅದೇ ವೇಳೆ ಪ್ರಜ್ವಲ್ ರೇವಣ್ಣ ಮೇಲೆ ಗಂಭೀರ ಆರೋಪ ಕೇಳಿಬಂತು. ಹಲವು ಮಹಿಳೆಯರ ಮೇಲೆ ಪ್ರಜ್ವಲ್ ಬಲಾತ್ಕಾರ, ಲೈಂಗಿಕ ಕಿರುಕುಳ, ದೌರ್ಜನ್ಯ ಎಸಗಿದ್ದಾರೆ ಎನ್ನುವುದು ಮಾತ್ರವಲ್ಲದೆ ಇದಕ್ಕೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಬಳಿಕ ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಲೋಕಸಭೆ ಚುನಾವಣೆಯ ಸಂದರ್ಭದಲ್ಲೇ ಪ್ರಜ್ವಲ್ ರಾಸಲೀಲೆ ಎನ್ನುವ ವಿಡಿಯೋಗಳುಳ್ಳ ಪೆನ್ಡ್ರೈವ್ಗಳು ಹಾಸನ ಮತದಾರರ ಕೈಸೇರಿತ್ತು. ಇದನ್ನು ಜನ ಬೆಚ್ಚಿಬಿದ್ದಿದ್ದರು. ಇದು ಆಗ ಎದುರಾಳಿ ಪಕ್ಷದವರು ಮಾಡಿದ ಕೃತ್ಯ ಎಂಬ ಆರೋಪವೂ ಕೇಳಿಬಂತು. ಹಾಸನದಲ್ಲಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಜೆಡಿಎಸ್ಗೆ ಪ್ರಜ್ವಲ್ ವಿಚಾರದಿಂದಾಗಿ ಸೋಲು ಕಾಣುವಂತಾಯಿತು. ಕೊನೆಗೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಸಂಸದರಾಗುವಲ್ಲಿ ಯಶಸ್ವಿಯಾದರು.
ಪ್ರಜ್ವಲ್ ಮೇಲೆ ಈ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಜೆಡಿಎಸ್ನಿಂದ ಉಚ್ಛಾಟನೆ ಮಾಡಲಾಯಿತು. ಹಾಗಾಗಿ ಚುನಾವಣೆಯಲ್ಲಿ ಸೋಲು ಕಂಡಿದ್ದು, ಒಂದೆಡೆಯಾದರೆ ಜೆಡಿಎಸ್ನ ಅಭ್ಯರ್ಥಿಯೂ ಇಲ್ಲವಾಯ್ತು. ಒಂದು ವೇಳೆ ಪ್ರಜ್ವಲ್ ಈ ಪ್ರಕರಣದಿಂದ ಹೊರಬಂದರೆ ಮುಂದಿನ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ನಿಂದ ನಿಲ್ಲಿಸಿ, ಸಂಸದರನ್ನಾಗಿ ಮಾಡಬೇಕು ಎಂದುಕೊಂಡಿತ್ತು ಜೆಡಿಎಸ್. ಆದರೆ ಪ್ರಜ್ವಲ್ ಈಗ ಅತ್ಯಾಚಾರ ಕೇಸ್ನಲ್ಲಿ ದೋಷಿ ಎಂದು ತೀರ್ಪು ಬಂದಿದೆ. ಹೀಗಾಗಿ ಪ್ರಜ್ವಲ್ ಇನ್ನೂ ಹಲವು ವರ್ಷಗಳ ಕಾಲ ಜೈಲಿನಿಂದ ಹೊರಬರಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ಮುಂದೆ ಹಾಸನದಿಂದ ದೇವೇಗೌಡರ ಸೊಸೆ ಹಾಗೂ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರನ್ನೇ ಎಂಪಿ ಅಭ್ಯರ್ಥಿಯಾಗಿ ನಿಲ್ಲಿಸಲು ತಯಾರಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಹಾಸನದ ಮೇಲೆ ಮತ್ತೆ ಹಿಡಿತ?
ಹಾಸನ ಕ್ಷೇತ್ರದಲ್ಲಿ ಹೆಚ್.ಡಿ.ರೇವಣ್ಣ ಹಾಗೂ ದೇವೇಗೌಡರ ಹಿಡಿತ ಇರುವುದರಿಂದ ಪ್ರಜ್ವಲ್ ಅವರು ಸುಲಭವಾಗಿ ಗೆದ್ದು ಸಂಸದರಾಗಿದ್ದರು ಎನ್ನುವ ಮಾತಿದೆ. ಇದೀಗ ಹಾಸನ ಎಂಪಿ ಸ್ಥಾನ ಕಾಂಗ್ರೆಸ್ನ ಪಾಲಾಗಿದೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ ಅನ್ನು ಅಧಿಕಾರಕ್ಕೆ ತರಬೇಕು ಎನ್ನುವ ರಣತಂತ್ರ ಮಾಡಲಾಗುತ್ತಿದೆ. ಸದ್ಯ ರೇವಣ್ಣ ಶಾಸಕರಾಗಿದ್ದಾರೆ, ದೇವೇಗೌಡರು ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಇತ್ತ ಪ್ರಜ್ವಲ್ ರೇವಣ್ಣಗೆ ಜೈಲುವಾಸ ಮುಂದುವರಿಯುವುದರಿಂದ ಭವಾನಿ ರೇವಣ್ಣ ಅವರೇ ಮುಂದಿನ ಹಾಸನ ಎಂಪಿ ಅಭ್ಯರ್ಥಿ ಎಂದು ಲೆಕ್ಕಚಾರ ಮಾತುಗಳು ರಾಜ್ಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications