ಸೂಕ್ತ ಅಭ್ಯರ್ಥಿ ಸಿಗದಿದ್ದರೆ ನೋಟಾಕ್ಕೆ ಮತ ಚಲಾಯಿಸಿ: ಸ್ಪೀಕರ್
ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಗಳನ್ನು ಮತದಾರರು ಆಯ್ಕೆ ಮಾಡಬೇಕು. ಅವರಿಗೆ ಕಣದಲ್ಲಿರುವ ಯಾರೂ ಉತ್ತಮರು ಎಂದು ಕಾಣದಿದ್ದರೆ, ಅವರು ನೋಟಾ ಹಾಕಬಹುದು ಎಂದು ಕಾಗೇರಿ ತಿಳಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 2: ಕರ್ನಾಟಕ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ ಮತದಾರರಿಗೆ ಯಾವುದೇ ಅಭ್ಯರ್ಥಿಗಳು ಸೂಕ್ತವಲ್ಲದಿದ್ದಲ್ಲಿ ಮೇಲಿನ ಯಾವುದೂ ಇಲ್ಲ (ನೋಟಾ) ಆಯ್ಕೆ ಮಾಡುವಂತೆ ತಿಳಿಸಿದರು.
ಕಾಗೇರಿ ಅವರು ಬೆಂಗಳೂರು ನಗರ ಜಿಲ್ಲಾಡಳಿತವು ಚುನಾವಣಾ ಸುಧಾರಣೆಗಳ ಕುರಿತು ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡುವಾಗ ಈ ಮೇಲಿನಂತೆ ಹೇಳಿದರು. ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಗಳನ್ನು ಮತದಾರರು ಆಯ್ಕೆ ಮಾಡಬೇಕು. ಅವರಿಗೆ ಕಣದಲ್ಲಿರುವ ಯಾರೂ ಉತ್ತಮರು ಎಂದು ಕಾಣದಿದ್ದರೆ, ಅವರು ನೋಟಾ ಹಾಕಬಹುದು ಎಂದು ಅವರು ಹೇಳಿದರು.
ನನ್ನ ಮತ ಮಾರಾಟಕ್ಕಿಲ್ಲ. ಈ ಘೋಷವಾಕ್ಯವು ಜನಾಂದೋಲನವಾಗಬೇಕು ಮತ್ತು ನೋಟುಗಳಿಗೆ ಮತವನ್ನು ಮಾರಿಕೊಳ್ಳುವುದಿಲ್ಲ ಎಂದು ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದರು. ಪ್ರತಿ ಮತಕ್ಕೆ 6,000 ರೂಪಾಯಿ ನೀಡುವುದಾಗಿ ಹೇಳಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸುತ್ತಿರುವಾಗಲೇ ಸ್ಪೀಕರ್ ಈ ಸ್ಪಷ್ಟನೆ ನೀಡಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ.

ಜಾತಿ, ಹಣಬಲ ಮತ್ತು ತೋಳ್ಬಲವು ಮತದಾನದ ಮಾನದಂಡವಾದಾಗ ಯುವಕರು ಮಾತ್ರ ಬದಲಾವಣೆಯನ್ನು ತರಲು ಸಾಧ್ಯ. ಮತದಾರನ ಮನಸ್ಥಿತಿ ಬದಲಾಗಬೇಕು ಎಂದ ಅವರು ರಾಜಕಾರಣಿಗಳು ಮತದಾರರಿಗೆ ಹಣ ನೀಡಬೇಡಿ ಎಂದು ಸಲಹೆ ನೀಡಿದರು. ಇಂದು ಕೆಟ್ಟ ಪರಿಸ್ಥಿತಿಯಲ್ಲಿ ಇದ್ದೇವೆ. ನಾವು ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದಾಗಲೂ (ಜನರು) ಹಣಕ್ಕೆ ಬೇಡಿಕೆ ಇಡುತ್ತಾರೆ. ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವ ಬದಲು ಕ್ರೀಡಾಕೂಟಗಳನ್ನು ಆಯೋಜಿಸಿ, ಹಬ್ಬಗಳನ್ನು ಆಚರಿಸಲು ಜನರು ಕೇಳಲು ಪ್ರಾರಂಭಿಸಿದ್ದಾರೆ ಎಂದು ಹೇಳಿದರು.
ಹಣ ಸಂಪಾದನೆಗಾಗಿ ರಾಜಕೀಯಕ್ಕೆ ಬರುತ್ತಿರುವ ಬಗ್ಗೆ ವಿದ್ಯಾರ್ಥಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಾಗೇರಿ, ಯುವಕರು, ಒಳ್ಳೆಯವರು ರಾಜಕೀಯಕ್ಕೆ ಬಂದರೆ ಪರಿಸ್ಥಿತಿ ಬದಲಾಗಬಹುದು ಎಂದರು. ರಾಜಕೀಯ ಪಕ್ಷಗಳು ಭ್ರಷ್ಟರನ್ನು ಏಕೆ ಬಿಂಬಿಸುತ್ತವೆ ಎಂಬ ಇನ್ನೊಂದು ಪ್ರಶ್ನೆಗೆ, ನೀವು ಭ್ರಷ್ಟರನ್ನು ಚುನಾವಣೆಯಲ್ಲಿ ಗೆಲ್ಲಲು ಬಿಡಬೇಡಿ ಎಂದು ಸ್ಪೀಕರ್ ಹೇಳಿದರು.

ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಸರ್ಕಾರಿ ನೌಕರಿ ಪಡೆಯುವುದನ್ನು ನಿರ್ಬಂಧಿಸಿರುವಾಗ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಿರುವ ಕುರಿತು ಕೇಳಿದಾಗ ಕಾನೂನು ಮತ್ತು ವ್ಯವಸ್ಥೆಯನ್ನು ಬದಲಾಯಿಸಲು ಪ್ರಯತ್ನಿಸಲು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸುವಂತೆ ಕಾಗೇರಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications