ಅಕ್ಕಿ ಸಿಗಲಿಲ್ಲವೆಂದರೆ ರಾಗಿ, ಜೋಳ ನೀಡಿ: ಕೃಷಿ ಅರ್ಥಶಾಸ್ತ್ರಜ್ಞ
ಬೆಂಗಳೂರು, ಜೂನ್ 21: ಕರ್ನಾಟಕ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ತಲಾ 10 ಕೆಜಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂಬ ಆರೋಪಗಳ ಮಧ್ಯೆ ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ನೀಡಿ ಉಳಿದ 5 ಕೆಜಿಯನ್ನು ರಾಗಿ ಹಾಗೂ ಜೋಳವನ್ನು ನೀಡುವಂತೆ ಕೃಷಿ ಅರ್ಥಶಾಸ್ತ್ರಜ್ಞ ಸಲಹೆ ನೀಡಿದ್ದಾರೆ.
ಅಕ್ಕಿಯನ್ನು ನೀಡಲು ನಿರಾಕರಿಸುವ ಕೇಂದ್ರ ಸರ್ಕಾರದ ನಿರ್ಧಾರದಿಂದ ತಿಂಗಳಿಗೆ 2.28 ಲಕ್ಷ ಟನ್ಗಳ ಬೇಡಿಕೆಯ ಅಕ್ಕಿಯನ್ನು ಸರಿದೂಗಿಸಲು ರಾಜ್ಯ ಸರ್ಕಾರವು ಇತರ ರಾಜ್ಯಗಳಿಂದ ಅಕ್ಕಿಯನ್ನು ಆಮದು ಮಾಡಿಕೊಳ್ಳುವ ಬದಲು ಸ್ಥಳೀಯ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಮೂಲಕ ರಾಗಿ ಮತ್ತು ಜೋಳದ ಖರೀದಿ ಮಾಡಬೇಕು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರು ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕೃಷಿ ಅರ್ಥಶಾಸ್ತ್ರಜ್ಞ ಪ್ರಕಾಶ್ ಕಮ್ಮರಡಿ ಅವರು, ಸರ್ಕಾರಕ್ಕೆ ಅಗತ್ಯವಿರುವಷ್ಟು ರಾಗಿ ಮತ್ತು ಜೋಳವನ್ನು ತಕ್ಷಣವೇ ಪಡೆಯಲು ಸಾಧ್ಯವಾಗದಿರಬಹುದು. ಆದರೆ ಅಕ್ಕಿ ಬದಲು ರಾಗಿ ಜೋಳ ನೀಡಬಹುದು ಎಂದು ಹೇಳಿದ್ದಾರೆ.
ರೈತರು ಈಗ ಬಿತ್ತನೆ ಆರಂಭಿಸಿದ್ದು, ಎರಡು ಬೆಳೆಗಳನ್ನು ಇನ್ಪುಟ್ ವೆಚ್ಚಕ್ಕಿಂತ ಶೇ.50ಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಸುವುದಾಗಿ ಸರ್ಕಾರ ಭರವಸೆ ನೀಡಿದರೆ, ಉತ್ಪನ್ನ ಹೆಚ್ಚಲಿದೆ. ಆಯೋಗವು 2014 ರಲ್ಲಿ ನಡೆಸಿದ ವಿಸ್ತೃತ ಅಧ್ಯಯನವನ್ನು ಉಲ್ಲೇಖಿಸಿ, ಸರ್ಕಾರವು ರಾಗಿಗೆ ರೂ 50/ಕೆಜಿ ಮತ್ತು ಜೋಳಕ್ಕೆ ರೂ 43/ಕೆಜಿ ನೀಡಬೇಕಾಗಬಹುದು ಎಂದು ಹೇಳಿದ್ದಾರೆ.
ಆದಾಗ್ಯೂ, ಕೇಂದ್ರದಿಂದ ಖರೀದಿಸಿದ ಅಕ್ಕಿಯ ನೈಜ ಆರ್ಥಿಕ ವೆಚ್ಚವು ಕೆಜಿಗೆ 43 ರೂ.ಗಳನ್ನು ಪರಿಗಣಿಸಿ ಇದು ದುಬಾರಿ ವ್ಯವಹಾರವಲ್ಲ. ಜತೆಗೆ ಸಾರಿಗೆ ವೆಚ್ಚವನ್ನು ಕರ್ನಾಟಕ ಭರಿಸಬೇಕಿದೆ. ಸಾರ್ವಜನಿಕ ವಿತರಣಾ ಯೋಜನೆಯಡಿ (ಪಿಡಿಎಸ್) ವಿತರಿಸುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕಮ್ಮರಡಿ ಅವರು ತಿಳಿದಸಿದ್ದಾರೆ.
ರಾಜ್ಯದಲ್ಲಿ ಹಸಿವಿಗಿಂತ ಅಪೌಷ್ಟಿಕತೆಯೇ ದೊಡ್ಡ ಸಮಸ್ಯೆಯಾಗಿದ್ದು, ಈ ಬಗ್ಗೆ 2011ರಲ್ಲಿ ಹೈಕೋರ್ಟ್ ಸೂಚನೆ ನೀಡಿತ್ತು. ಈ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ದಕ್ಷಿಣ ಕರ್ನಾಟಕಕ್ಕೆ 5 ಕೆಜಿ ರಾಗಿ ಮತ್ತು ಉತ್ತರ ಕರ್ನಾಟಕಕ್ಕೆ 5 ಕೆಜಿ ಜೋಳವನ್ನು ವಿತರಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.
ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCI ನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications