Get Updates
Get notified of breaking news, exclusive insights, and must-see stories!

Ration Card: ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್‌ ರದ್ದು, ಹುಷಾರ್‌!

Ration Card: ರೇಷನ್ ಕಾರ್ಡ್‌ದಾರರಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಗಂಭೀರವಾದ ಎಚ್ಚರಿಕೆಯೊಂದನ್ನು ಕೊಟ್ಟಿದೆ. ನೀವೇನಾದರೂ ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್‌ ರದ್ದಾಗಲಿದೆ ಎನ್ನುವ ಎಚ್ಚರಿಕೆಯನ್ನು ಕೊಡಲಾಗಿದೆ. ರಾಜ್ಯದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್‌ಗೆ ಸಂಬಂಧಿಸಿದಂತೆ ಮತ್ತೊಂದು ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. ಅನ್ನಭಾಗ್ಯ ಯೋಜನೆಯ ಗುಡ್‌ನ್ಯೂಸ್‌ ಬೆನ್ನಲ್ಲೇ ರೇಷನ್ ಕಾರ್ಡ್‌ಗೆ ಸಂಬಂಧಿಸಿದಂತೆ ಎಚ್ಚರಿಕೆ ನೀಡಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ರೇಷನ್ ಕಾರ್ಡ್‌ಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಮತ್ತೆ ರೇಷನ್ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುವುದಾಗಿಯು ರೇಷನ್ ಕಾರ್ಡ್‌ ಇರುವವರು ಇದಕ್ಕೆ ಸಹಕಾರ ನೀಡಬೇಕು ಎಂದು ಸಚಿವ ಕೆ.ಎಚ್‌ ಮುನಿಯಪ್ಪ ಅವರು ಹೇಳಿದ್ದರು. ಇದೀಗ ಮತ್ತೊಂದು ಗಂಭೀರ ಕ್ರಮವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ತೆಗೆದುಕೊಂಡಿದೆ.

If You Make This Mistake Ration Card will be Canceled Be Careful

ಕರ್ನಾಟಕದಲ್ಲಿ ರಾಜ್ಯ ಸರ್ಕಾರವು 5 ಕೆ.ಜಿ ಅಕ್ಕಿ ಹಾಗೂ ಇನ್ನುಳಿದ 5 ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಹಣವನ್ನು ನೀಡುತ್ತಿದೆ. ಆದರೆ, ಕೆಲವು ರೇಷನ್ ಕಾರ್ಡ್‌ದಾರರು ಅಕ್ಕಿಯನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು. ಇದೀಗ ಸಂಬಧಪಟ್ಟವರ ಮೇಲೆ ಕ್ರಮಕ್ಕೆ ನಿರ್ಧರಿಸಲಾಗಿದೆ.

ಕೆಲವು ರೇಷನ್ ಕಾರ್ಡ್‌ದಾರರು ಅವರಿಗೆ ನೀಡುವ ಆಹಾರ ಧಾನ್ಯಗಳನ್ನು ಕಾಸಿಗೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು. ಈ ವಿಷಯವನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯ ಸಂಗ್ರಹಿಸುವುದು ಹಾಗೂ ಮಾರಾಟ ಮಾಡುವವರ ಮೇಲೆ ಕ್ರಮಕ್ಕೆ ನಿರ್ಧರಿಸಲಾಗಿದ್ದು.

ಈ ರೀತಿ ನಿಯಮ ಉಲ್ಲಂಘನೆ ಮಾಡಿದರೆ ರೇಷನ್‌ ಕಾರ್ಡ್‌ಗಳನ್ನೇ ರದ್ದು ಮಾಡಲಾಗುವುದು. ಅಲ್ಲದೆ ಈ ರೀತಿ ಮಾಡುವವರ ಮೇಲೆ ಅಗತ್ಯ ವಸ್ತುಗಳ ಕಾಯ್ದೆಯ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ರೇಷನ್ ಕಾರ್ಡ್‌ನಿಂದ ಸಿಗುವ ಅಕ್ಕಿಯನ್ನು ಕೆಲವರು ದುಡ್ಡಿಗೆ ಮಾರಾಟ ಮಾಡುತ್ತಿರುವುದನ್ನು ಸರ್ಕಾರ ಗಮನಿಸಿದ್ದು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.

If You Make This Mistake Ration Card will be Canceled Be Careful

ರೇಷನ್ ಕಾರ್ಡ್‌ ಪರಿಷ್ಕರಣೆ: ಇನ್ನು ಸರ್ಕಾರವು ಬಿಪಿಎಲ್‌ ಕಾರ್ಡ್‌ಗಳನ್ನು ಪರಿಷ್ಕರಣೆಗೆ ಒಳಪಡಿಸುವುದಾಗಿ ಹೇಳಿದೆ. ಮತ್ತೆ ರಾಜ್ಯದಲ್ಲಿ ರೇಷನ್ ಕಾರ್ಡ್‌ಗಳ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆಯೇ ಮಾಡಲಾಗುವುದು. ಹೀಗಾಗಿ, ರಾಜ್ಯದಲ್ಲಿ ರೇಷನ್‌ ಕಾರ್ಡ್‌ ಹೊಂದಿರುವವರು ಇದಕ್ಕೆ ಸಹಕಾರ ನೀಡಬೇಕು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದ್ದಾರೆ.

ಸರ್ಕಾರವು ರೇಷನ್ ಕಾರ್ಡ್‌ಗೆ ಸಂಬಂಧಿಸಿದಂತೆ ಹದ್ದಿನ ಕಣ್ಣನ್ನು ಇರಿಸಿದೆ. ಯಾವ ಅನರ್ಹರು ಇಲ್ಲವೇ ಅಕ್ರಮವಾಗಿ ರೇಷನ್‌ ಕಾರ್ಡ್‌ ಪಡೆದಿದ್ದಾರೋ ಅವರನ್ನು ಗುರುತಿಸಿ ಅವರ ಕಾರ್ಡ್‌ಗಳನ್ನು ರದ್ದು ಮಾಡುವುದಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳಿವೆ ಎಂದು ಗುರುತಿಸಲಾಗಿದೆ. ಇದೀಗ ಒಟ್ಟು 1.10 ಕೋಟಿ ಬಿಪಿಎಲ್ ಕಾರ್ಡ್‌ಗಳನ್ನು ಕರ್ನಾಟಕದಲ್ಲಿ ವಿತರಿಸಲಾಗುತ್ತಿದೆ. ಈ ರೀತಿಯ ಕಾರ್ಡ್‌ಗಳಲ್ಲಿ ಅಂದಾಜು 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳಿವೆ ಎಂದು ಸರ್ಕಾರ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+