ಬ್ಲೋ ಅಪ್ ಸಿಲಬಸ್ ಆಧಾರದಲ್ಲೇ ಪಿಯುಸಿ ಪರೀಕ್ಷೆ
ಬೆಂಗಳೂರು, ಜ. 7 : ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಗೆ ಸರ್ಕಾರ ಮಣಿದಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ 2015ನೇ ಸಾಲಿನಲ್ಲಿ ರಾಜ್ಯಮಟ್ಟದ 'ಬ್ಲೋ ಅಪ್ ಸಿಲಬಸ್' ಆಧಾರದಲ್ಲೇ ಪರೀಕ್ಷೆ ನಡೆಸುವುದಾಗಿ ಪಿಯು ಮಂಡಳಿ ಆದೇಶ ಹೊರಡಿಸಿದೆ.
ಡಿ.31ರಂದು ಆದೇಶ ಹೊರಡಿಸಿದ್ದ ಪಿಯುಸಿ ಮಂಡಳಿ 2015ರ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಪಠ್ಯಕ್ರಮದ ಅನುಸಾರ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಆದೇಶ ಹೊರಡಿಸಿತ್ತು. ಮಂಡಳಿಯ ಈ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತೊಂದರೆಯಾಗುತ್ತದೆ ಎಂದು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. [2015ರ ಪಿಯುಸಿ ಪರೀಕ್ಷೆ ವೇಳಾಪಟ್ಟಿ]

ವಿದ್ಯಾರ್ಥಿ ಸಂಘಟನೆಗಳ ಹೋರಾಟಕ್ಕೆ ಮಣಿದಿರುವ ಮಂಡಳಿ ಜನವರಿ 6ರಂದು ಬ್ಲೋ ಅಪ್ ಸಿಲಬಸ್ ಪ್ರಕಾರವೇ ಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಉಂಟಾಗಿದ್ದ ಆತಂಕ ದೂರವಾಗಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ರಾಷ್ಟ್ರೀಯ ಪಠ್ಯಕ್ರಮದ ಅನುಸಾರದಲ್ಲೇ ಪರೀಕ್ಷೆ ನಡೆಸುವುದಾಗಿ ಹೇಳಿದೆ.
ವಿದ್ಯಾರ್ಥಿಗಳು ಹೇಳುವುದೇನು? : ವಿದ್ಯಾರ್ಥಿಗಳು ಹೇಳುವ ಪ್ರಕಾರ ಈ ಶೈಕ್ಷಣಿಕ ವರ್ಷದ ಆರಂಭದಿಂದಲೂ ರಾಜ್ಯಮಟ್ಟದ 'ಬ್ಲೋ ಅಪ್ ಸಿಲಬಸ್' ಅನ್ನು ಬೋಧಿಸಲಾಗುತ್ತಿತ್ತು. ಅದಕ್ಕೆ ಅನುಗುಣವಾಗಿಯೇ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕಿತ್ತು.
ಆದರೆ, ಡಿ.31ರಂದು ಹೊರಡಿಸಿದ ಆದೇಶದ ಪ್ರಕಾರ ಪಿಯು ಮಂಡಳಿಯು ರಾಷ್ಟ್ರೀಯ ಪಠ್ಯಕ್ರಮದ ಅನುಸಾರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿತ್ತು. ಹೊಸ ನೀತಿಯನ್ನು ಜಾರಿಗೊಳಿಸಬೇಕೆಂದರೆ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಜಾರಿಗೆ ತರಬೇಕು, ಪರೀಕ್ಷೆಗೆ ಕೆಲವು ದಿನಗಳು ಇರುವಾಗ ಇಂತಹ ನೀತಿ ಜಾರಿಗೆ ತರಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದೆವು ಎಂದು ಹೇಳಿದ್ದಾರೆ.
ಅಂದಹಾಗೆ ಪದವಿಪೂರ್ವ ಶಿಕ್ಷಣ ಇಲಾಖೆ 2015ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಮಾರ್ಚ್ 12 ರಿಂದ 27ರವರೆಗೆ ಪರೀಕ್ಷೆಗಳು ನಡೆಯಲಿವೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications