ವಿಜ್ಞಾನಿಗಳಿಂದ ಗೌರಿಬಿದನೂರಿನಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆ
ಬಂಜರು ಭೂಮಿಗಳನ್ನು ಹಸಿರಾಗಿಸಲು ಐಐಎಸ್ ಸಿ ವಿಜ್ಞಾನಿಗಳಿಂದ ಹೊಸ ತಂತ್ರಗಾರಿಕೆ. ಡ್ರೋನ್ ಮೂಲಕ ಬೀಜ ಬಿತ್ತನೆಯ ಹೊಸ ಪ್ರಯೋಗ. ಆರಂಭಿಕ ಹಂತದಲ್ಲಿ ಗೌರಿಬಿದನೂರಿನಲ್ಲಿ ಈ ಪ್ರಯೋಗ ಜಾರಿ.
ಬೆಂಗಳೂರು, ಜೂನ್ 24: ಬರಡು ನೆಲಗಳಲ್ಲಿ ಏಕ ಕಾಲಕ್ಕೆ ಅತಿ ಹೆಚ್ಚು ಬೀಜಗಳನ್ನು ಬಿತ್ತುವ ಮೂಲಕ, ಅರಣ್ಯ ಬೆಳೆಸುವ ಹೊಸ ಪ್ರಯೋಗಾತ್ಮಕ ಕೈಂಕರ್ಯಕ್ಕೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ ಸಿ) ವಿಜ್ಞಾನಿಗಳು ಕೈ ಹಾಕಿದ್ದಾರೆ. ಈ ಯೋಜನೆಗೆ 'ಸೀಡ್ ಬಾಂಬಿಂಗ್' ಎಂದು ಹೆಸರಿಡಲಾಗಿದೆ.
ಐಐಎಸ್ ಸಿ, ರಾಜ್ಯ ಸರ್ಕಾರ ಹಾಗೂ ಎಚ್ ಎನ್ ಸೆಂಟರ್ (ವೈಜ್ಞಾನಿಕ ಕೇಂದ್ರ) ಗಳ ಪರಸ್ಪರ ಸಹಕಾರದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಇದರ ಪ್ರಾಥಮಿಕ ಹೆಜ್ಜೆಯಾಗಿ, ಗೌರಿಬಿದನೂರಿನಲ್ಲಿ ಡ್ರೋನ್ ಗಳ ಮೂಲಕ ನಿರ್ದಿಷ್ಟ ಪ್ರದೇಶದಲ್ಲಿ ಏಕಕಾಲದಲ್ಲಿ ಬೀಜ ನೆಡುವ ಕಾರ್ಯಕ್ರಮವನ್ನು ವಿಶ್ವ ಪರಿಸರ ದಿನವಾದ ಜೂನ್ 2ರಂದು ಹಮ್ಮಿಕೊಳ್ಳಲಾಗಿತ್ತು. ಆನಂತರ ಕೊಂಚ ಮಳೆ ಬಂದಿದ್ದರಿಂದ ಈ ಪ್ರಯೋಗಕ್ಕೆ ಹೊಸ ಯಶಸ್ಸು ತರುವ ನಿರೀಕ್ಷೆ ಹುಟ್ಟಿಸಿದೆ.
ಇನ್ನು, ಈ ಪ್ರದೇಶಕ್ಕೆ ಬೋರ್ ವೆಲ್ ಗಳ ಮೂಲಕ ನೀರು ಹಾಯಿಸಿದರೆ, ಆ ಬರಡು ನೆಲಗಳು ಕೆಲವೇ ತಿಂಗಳುಗಳಲ್ಲಿ ಹಸಿರಾಗಿ ಕೆಲವೇ ವರ್ಷಗಳಲ್ಲಿ ಪುಟ್ಟ ಅರಣ್ಯಗಳಾಗಿ ಮಾರ್ಪಾಟು ಹೊಂದುತ್ತವೆ. ಇದರಿಂದ ಆ ಪ್ರದೇಶಗಳಲ್ಲಿನ ಹವಾಮಾನ, ನೀರಿನ ವ್ಯವಸ್ಥೆಗೆ ಹೊಸ ಆಯಾಮ ಕೊಟ್ಟಂತಾಗುತ್ತದೆ ಎಂಬುದು ವಿಜ್ಞಾನಿಗಳ ತರ್ಕ.
ಈ ನ್ಯೂಸ್ ಮಿನಟ್ ಗೆ ನೀಡಿರುವ ಹೇಳಿಕೆಯಲ್ಲಿ, ವಿಜ್ಞಾನಿಗಳ ತಂಡದಲ್ಲೊಬ್ಬರಾದ ಪ್ರೊಫೆಸರ್ ರೆಡ್ಡಿಯವರು, ಗೌರಿ ಬಿದನೂರು ಬಳಿಯ ಬಂಜರು ನೆಲವು ನಿಜ ಅರ್ಥದಲ್ಲಿ ಫಲವತ್ತಾಗಿದೆ. ಆದರೆ, ನೀರಿನ ಕೊರತೆ ಇರುವ ಕಾರಣದಿಂದಾಗಿ ಅದು ಬರಡಾಗಿದೆ. ಈ ಪ್ರದೇಶದಲ್ಲಿ ನೀರು ಬೇಕೆಂದರೆ ಸುಮಾರು 1000 ಅಡಿಗಳಷ್ಟು ಭೂಮಿಯನ್ನು ಕೊರೆಯಬೇಕಿದೆ ಎಂದಿದ್ದಾರೆ.
ಹಾಗಾಗಿ, ಸೀಡ್ ಬಾಂಬಿಂಗ್ ಆದ ನಂತರ, ಬೋರ್ ವೆಲ್ ಗಳನ್ನು ಕೊರೆಯಿಸಿ ಈ ಪ್ರದೇಶಗಳಲ್ಲಿ ನೀರನ್ನು ಹರಿಯಿಸಿ, ಇಲ್ಲಿ ಅರಣ್ಯ ಬೆಳವಣಿಗೆಗೆ ಪ್ರಾಶಸ್ತ್ರ್ಯವಾದ ವಾತಾವರಣ ಕಲ್ಪಿಸಲಾಗುವುದು ಎಂದು ರೆಡ್ಡಿ ತಿಳಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications