ನ್ಯಾಯ ಬೆಲೆ ಅಂಗಡಿಯಲ್ಲಿ ಮೈಸೂರು ಸ್ಯಾಂಡಲ್ ಸೋಪು
ಬೆಂಗಳೂರು, ಫೆಬ್ರವರಿ 27: ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ನೂತನ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.
ಅರ್ಹರಲ್ಲದವರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಯನ್ನು ಹಿಂತಿರುಗಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ ಪಡಿತರ ಚೀಟಿ ವಾಪಸ್ ಮಾಡದ ಅನರ್ಹರಿಗೆ ದಂಡ ವಿಧಿಸಲಾಗುವುದು ಎಂದು ಗೋಪಾಲಯ್ಯ ಹೇಳಿದ್ದಾರೆ.
ಅಕ್ರಮ ಪಡಿತರ ಚೀಟಿಗಳನ್ನು ಎರಡು ತಿಂಗಳ ಒಳಗೆ ವಾಪಸ್ ಮಾಡದಿದ್ದರೆ ಪಡಿತರ ಪಡೆದ ದಿನಾಂಕದಿಂದ ಇಂದಿನವರೆಗೆ ಪಡೆದ ಪಡಿತರದ ಪ್ರಮಾಣದ ದಂಡವನ್ನು ಪಾವತಿ ಮಾಡಬೇಕಾಗುತ್ತದೆ. ಎರಡು ತಿಂಗಳ ನಂತರ ಅನರ್ಹರು ಪಡಿತರ ಚೀಟಿ ಹೊಂದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಗತ್ಯವಿಲ್ಲದವರು ಪಡಿತರವನ್ನು ಪಡೆಯಬಾರದು ಎಂದು ಮನವಿ ಮಾಡಿದ ಸಚಿವರು, ಹಸಿವಿನಿಂದ ಯಾರೂ ಇರಬಾರದು ಎಂಬ ಕಾರಣಕ್ಕೆ ಪಡಿತರ ವಿತರಿಸಲಾಗುತ್ತಿದೆ ಆದರೆ ಪಡಿತರವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆದು ಮಾರಾಟ ಮಾಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಮಾರಾಟ ಮಾಡುವ ಚಿಂತನೆ ಇದೆ ಎಂದು ಘೊಷಿಸಿದ ಸಚಿವರು, ಮಾರ್ಚ್ 5ರಂದು ಮಂಡನೆಯಾಗುವ ರಾಜ್ಯ ಬಜೆಟ್ ನಂತರ ಅನ್ನಭಾಗ್ಯ ಯೋಜನೆಯಲ್ಲಾಗುವ ಬದಲಾವಣೆ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
2019-20ನೇ ಸಾಲಿನಲ್ಲಿ ಜನವರಿ ಅಂತ್ಯದವರೆಗೂ 32,29,87,817 ಸತ್ಯಾಪನಾ ಶುಲ್ಕವನ್ನು ವಸೂಲಿ ಮಾಡಲಾಗಿದೆ. 43,842 ತಪಾಸಣೆ ಕೈಗೊಂಡಿದ್ದು, 17,883 ಮೊಕದ್ದಮೆ ಹೂಡಲಾಗಿದೆ. 4,72, 27,300 ಅಭಿಸಂಧಾನದ ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ಮಂಜುಳಾ ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications