ಅಕ್ರಮ ಆದಾಯ ಕೇಸ್: ಡಿಸಿಎಂ ಡಿಕೆಶಿಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು, ಜೂನ್ 13: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಮತ್ತು ನ್ಯಾ. ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಅಕ್ರಮ ಆಸ್ತಿಗಳಿಕೆ ಕೇಸ್ ಸಂಬಂಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ತನಿಖೆ ನಡೆಸಲು ಸಿಬಿಐಗೆ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಮತಿಸಿದ್ದ ಆದೇಶ ವಜಾ ಮಾಡಲು ನಿರಾಕರಿಸಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ಮುಂದಿನ ವಿಚಾರಣೆಯವರೆಗೆ ಸೋಮವಾರ ವಿಭಾಗೀಯ ಪೀಠ ತಡೆ ನೀಡಿದೆ. ಏಕಸದಸ್ಯ ಪೀಠವು 2023ರ ಏಪ್ರಿಲ್ 20ರಂದು ವಜಾ ಮಾಡಿರುವ ಆದೇಶಕ್ಕೆ ಮುಂದಿನ ವಿಚಾರಣೆ ತಡೆ ನೀಡಲಾಗಿದೆ ಎಂದು ಆದೇಶಿಸಿದ ನ್ಯಾಯಾಲಯವು ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ.

ಡಿಕೆಶಿ ವಾದವೇನು?; ಡಿ. ಕೆ. ಶಿವಕುಮಾರ್ ಪರ ಹಿರಿಯ ವಕೀಲರು ವಾದ ಮಂಡಿಸಿ, 'ಶಿವಕುಮಾರ್ ಸಂಬಂಧಿ ಹಾಗೂ ಎಚ್ಎಎಲ್ ಉದ್ಯೋಗಿಯಾಗಿರುವ ಶಶಿಕುಮಾರ್ ಸಿಬಿಐ ತನಿಖೆಗೆ ಅನುಮತಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ಮತ್ತೊಂದು ಪೀಠ ವಜಾ ಮಾಡಿರುವುದು ಈ ಪ್ರಕರಣದ ಮೇಲೆ ಪರಿಣಾಮ ಉಂಟು ಮಾಡುವುದಿಲ್ಲ' ಎಂದರು.
'ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯಿದೆ 1946ರ ಅಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿಸುವುದು ಆಡಳಿತಾತ್ಮಕ ಆದೇಶವೇ ವಿನಾ ಇದನ್ನು ವ್ಯಾಪಕವಾಗಿ ಎಳೆದಾಡುವ ಅವಶ್ಯತೆ ಇಲ್ಲ ಎಂದಿತ್ತು. ಅರ್ಜಿದಾರರು ಆರೋಪಿಯಾದರೆ ಈ ಪ್ರಕರಣವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುತ್ತದೆ ಎಂದು ಪೀಠ ಹೇಳಿದೆ' ಎಂದು ವಾದಿಸಿದ್ದರು.
ಅಲ್ಲದೆ, ಡಿ. ಕೆ. ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು 2019ರ ಸೆ.25ರಂದು ಅನುಮತಿಸಿತ್ತು. ರಾಜ್ಯ ಗೃಹ ಇಲಾಖೆಯ ಆದೇಶವನ್ನು ವಜಾ ಮಾಡಬೇಕು ಎಂದು ಕೋರಿ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 2023ರ ಏಪ್ರಿಲ್ 20ರಂದು ನ್ಯಾ. ಆರ್ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ ವಜಾ ಮಾಡಿತ್ತು. ಈಗ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಡಿ. ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಡಿ. ಕೆ. ಶಿವಕುಮಾರ್ ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮ ಸೇರಿದಂತೆ ಹಲವು ತೊಡಗಿಕೊಂಡಿದ್ದು, ಅವರಿಗೆ ಸೇರಿದ ದೆಹಲಿ ಸೇರಿದಂತೆ ವಿವಿಧ ಸ್ಥಳಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ 8.59 ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು.
ಡಿ. ಕೆ. ಶಿವಕುಮಾರ್ ಅವರಿಗೆ ಸೇರಿದ ಸ್ಥಳದಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಇದರ ಬೆನ್ನಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದರ ಬಳಿಕ ಜಾರಿ ನಿರ್ದೇಶನಾಲಯ ಶಿವಕುಮಾರ್ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲು ಮಾಡಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್ 3ರಂದು ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಆನಂತರ 2019ರ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರವು ಅನುಮತಿಸಿತ್ತು.
ಜಾರಿ ನಿರ್ದೇಶನಾಲಯದ ಪತ್ರದಲ್ಲಿನ ಅಂಶಗಳನ್ನು ಉಲ್ಲೇಖಿಸಿ, ವಿವೇಚನೆ ಬಳಸದೇ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿಸಿದೆ. ಇದನ್ನು ಆಧರಿಸಿ ಸಿಬಿಐ, ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಇದಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ಶಿವಕುಮಾರ್ ಪರ ಹಿರಿಯ ವಕೀಲರು ವಾದಿಸಿದ್ದರು. ಇದನ್ನು ಏಕಸದಸ್ಯಪೀಠ ತಿರಸ್ಕರಿಸಿತ್ತು.
ಮತ್ತೊಂದೆಡೆ ಸಿಬಿಐ ತನಿಖೆಗೆ ಹೈಕೋರ್ಟ್ ತಡೆ ನೀಡಿದ್ದು, ಈ ಪ್ರಕರಣವು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. 2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರ ಬಳಿ 74.8 ಕೋಟಿ ಅಕ್ರಮ ಆಸ್ತಿ ಇದ್ದು, ಇದಕ್ಕೆ ಸೂಕ್ತ ದಾಖಲೆಗಳೊಂದಿಗೆ ವಿವರಣೆ ನೀಡಲು ಅವರು ವಿಫಲರಾಗಿದ್ದಾರೆ ಎಂಬುದು ಸಿಬಿಐ ವಾದವಾಗಿದೆ.
-
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications