Illegal Bangladeshi: ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಪ್ರಜೆಗಳು: ಎಸ್.ಐ.ಟಿ. ರಚಿಸಲು ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ
Illegal Bangladeshi Migrants: ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ ಎನ್ನುವ ಆರೋಪಗಳ ನಡುವೆ ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಪ್ರಜೆಗಳ ಪತ್ತೆಗೆ ಎಸ್.ಐ.ಟಿ. ರಚಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.
ಅಕ್ರಮ ಬಾಂಗ್ಲಾ ಪ್ರಜೆಗಳು ಬೆಂಗಳೂರು ಸೇರಿದಂತೆ ಅನೇಕ ಕಡೆ ನೆಲಸಬಹುದು. ಅವರನ್ನು ಗಡಿಪಾರು ಮಾಡುವ ಆತುರತೆ ರಾಜ್ಯ ಸರ್ಕಾರಕ್ಕಿಲ್ಲ. ಸಣ್ಣ ಪುಟ್ಟ ಘಟನೆಗಳಿಗೆ 'ಸತ್ಯ ಶೋಧನಾ ಸಮಿತಿ' ರಚಿಸುವ ಸರ್ಕಾರ, ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲು ಎಸ್.ಐ.ಟಿ. ರಚಿಸಲು ಆಸಕ್ತಿಇಲ್ಲ. ಒಂದಷ್ಟು ನಿರುದ್ಯೋಗಿಗಳು, ಬಾಡಿಗೆ ಹೋರಾಟಗಾರರು, ಎಡಪಂಕ್ತೀಯರು ದೂರು ಕೊಟ್ಟಿದ್ದಕ್ಕೆ ಧರ್ಮಸ್ಥಳ ಪ್ರಕರಣದಲ್ಲಿ SIT ರಚಿಸಿದ ಕಾಂಗ್ರೆಸ್ ಸರ್ಕಾರಕ್ಕೆ, ರಾಷ್ಟ್ರಕ್ಕೆ ಹಾಗೂ ರಾಜ್ಯಕ್ಕೆ ಕಂಟಕವಾಗಿರುವ ಬಾಂಗ್ಲಾದೇಶದವರನ್ನು ಒದ್ದೋಡಿಸಲು ಆಗುತ್ತಿಲ್ಲ ಎಂದು ದೂರಿದ್ದಾರೆ.

ಆದರೆ, ಎಲ್ಲಿ ಹಿಂದೂಗಳು ಸಭೆ, ಸಮಾರಂಭ, ಶೋಭಾ ಯಾತ್ರೆ ನಡೆಸುತ್ತಾರೋ ಅಲ್ಲಿನ ಆಯೋಜಕರಿಗೆ ರಾತ್ರೋ ರಾತ್ರಿ ನೋಟೀಸು, ಕಿರುಕುಳ, ಮನೆಗೆ ಬಂದು ಬೆದರಿಕೆ, ಕಾನೂನು ರೀತ್ಯ ಕ್ರಮ ಆಗುತ್ತದೆ. ಅತ್ಯಂತ ಶಾಂತವಾಗಿ ನಡೆಯುವ ಹಿಂದೂ ಕಾರ್ಯಕ್ರಮ ಸರ್ಕಾರಕ್ಕೆ ಮುಜುಗುರ ತರುತ್ತದೆ, ಅದೇ ರೀತಿ ಬಾಂಗ್ಲಾದವರು ತಮ್ಮ ಸಂತತಿ ಹೆಚ್ಚು ಮಾಡಿಕೊಂಡರೆ ತಮ್ಮ 'ವೋಟ್ ಬ್ಯಾಂಕ್' ಸುಭದ್ರವಾಗುತ್ತೆ ಎಂಬ ಎಲ್ಲಿಲ್ಲದ ಸಂತೋಷ. ಹಿಂದೂ ಮುಖಂಡರಿಗೆ, ಆಯೋಜಕರಿಗೆ ನೀಡಿರುವ ನೋಟೀಸನ್ನು ಸರ್ಕಾರ ತಕ್ಷಣಕ್ಕೆ ಜಾರಿಗೆ ಬರುವಂತೆ ಹಿಂಪಡೆಯಬೇಕು ಹಾಗೂ ಅನಾವಶ್ಯಕವಾಗಿ ಕಿರುಕುಳ ನೀಡಬಾರದೆಂದು ಆಗ್ರಹಿಸುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ ಎಂದು ಈಚೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದ್ದರು.
ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ. ರಾಜ್ಯದೆಲ್ಲೆಡೆ ಬಾಂಗ್ಲಾ ನಿವಾಸಿಗಳು ಅಕ್ರಮವಾಗಿ ನೆಲೆಸಿದ್ದಲ್ಲದೆ ಆಧಾರ್ ಕಾರ್ಡ್ ಸೇರಿದಂತೆ ಅನೇಕ ಗುರುತಿನ ಚೀಟಿಯನ್ನು ಪಡೆದು ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾಗಿದ್ದ ಸಂಪನ್ಮೂಲಗಳನ್ನು ಬಳಸುತ್ತಿರುವುದು ದುರದೃಷ್ಟಕರ. ಇಲ್ಲಿ ದುಡಿಯುವ ಹಣವನ್ನು ಬಾಂಗ್ಲಾದೇಶಕ್ಕೆ ರವಾನಿಸಿ ಭಾರತವನ್ನು ಅಭದ್ರಗೊಳಿಸಲು ಉಗ್ರ ಸಂಘಟನೆಗಳಿಗೆ ನೆರವು ನೀಡುತ್ತಿರುವ ಬಗ್ಗೆಯೂ ಗೊತ್ತಾಗಿದೆ.
ಕಾಫಿ ತೋಟ, ತ್ಯಾಜ್ಯ ನಿರ್ವಹಣಾ ಘಟಕ, ಮನೆ ಹಾಗೂ ಅಪಾರ್ಟ್ಮೆಂಟ್ಗಳಲ್ಲಿ ಮನೆಗೆಲಸ, ಚಾಲಕ, ಚಿಂದಿ ಆಯುವ ಕೆಲಸವನ್ನು ಮಾಡಿಕೊಂಡು ಭಾರತವನ್ನೇ ತಮ್ಮ ನೆಲೆಯನ್ನಾಗಿ ಮಾಡಿಕೊಂಡಿರುವುದನ್ನು ಮಾಧ್ಯಮಗಳು, ಹಿಂದೂ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಯಲಿಗೆಳಿದಿದ್ದಾರೆ. ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಸಹ ಅಕ್ರಮ ಬಾಂಗ್ಲಾದೇಶಿ ವಾಸಿಗಳನ್ನು ಹುಡುಕಿಕೊಟ್ಟ ಮಾಧ್ಯಮ, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಸರ್ಕಾರ ಪರೋಕ್ಷವಾಗಿ ಅವರ ಪರವೇ ನಿಂತಿದೆ.
ರಾಜ್ಯದಲ್ಲಿರುವ ಪ್ರತಿಯೊಬ್ಬ ಬಾಂಗ್ಲಾದೇಶೀಯರನ್ನು SIR ಮಾದರಿಯಂತೆ Detect, Delete & Deport [ಪತ್ತೆ ಮಾಡುವುದು, ಅವರ ದಾಖಲಾತಿಯನ್ನು ಅಳಿಸುವುದು ಹಾಗೂ ಅವರ ದೇಶಕ್ಕೆ ಗಡಿಪಾರು ಮಾಡುವುದು] ಮಾದರಿಯಲ್ಲಿ ಹುಡುಕಿ ಅವರನ್ನು ಗಡಿಪಾರು ಮಾಡುವಂತೆ ಕೇಂದ್ರ ಗೃಹ ಮಂತ್ರಿಗಳಾದ ಶ್ರೀ ಅಮಿತ್ ಶಾ ಜಿ ಅವರಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ.
ಅಕ್ರಮ ಬಾಂಗ್ಲಾ ಪ್ರಜೆಗಳು ಬೆಂಗಳೂರು ಸೇರಿದಂತೆ ಅನೇಕ ಕಡೆ ನೆಲಸಬಹುದು. ಅವರನ್ನು ಗಡಿಪಾರು ಮಾಡುವ ಆತುರತೆ ರಾಜ್ಯ ಸರ್ಕಾರಕ್ಕಿಲ್ಲ. ಸಣ್ಣ ಪುಟ್ಟ ಘಟನೆಗಳಿಗೆ 'ಸತ್ಯ ಶೋಧನಾ ಸಮಿತಿ' ರಚಿಸುವ ಸರ್ಕಾರ, ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲು ಎಸ್.ಐ.ಟಿ. ರಚಿಸಲು ಆಸಕ್ತಿಇಲ್ಲ.
— Basanagouda R Patil (Yatnal) (@BasanagoudaBJP) January 28, 2026
ಒಂದಷ್ಟು ನಿರುದ್ಯೋಗಿಗಳು, ಬಾಡಿಗೆ ಹೋರಾಟಗಾರರು,… pic.twitter.com/Ilujr7G0Dh
ದೇಶದ ಐಕ್ಯತೆಗೆ, ಒಗ್ಗಟ್ಟಿಗೆ ಹಾಗೂ ಸಮಗ್ರತೆಗೆ ಬಾಂಗ್ಲಾ ನಿವಾಸಿಗಳನ್ನು ಕೂಡಲೇ ಗಡಿಪಾರುಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಮಾನ್ಯ ಗೃಹ ಸಚಿವರಿಗೆ ಕೋರಿದ್ದೇನೆ ಎಂದೂ ಅವರು ಹೇಳಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications