ಪಶ್ಚಿಮ ಘಟ್ಟಗಳಿಗೆ ಅಪಾಯ ತಂದಿಡುತ್ತಿವೆ ಅಕ್ರಮ ಹೋಂಸ್ಟೇಗಳು
ಉತ್ತರಕನ್ನಡ, ಮಾರ್ಚ್ 28: ಕರ್ನಾಟಕ ನೈಸರ್ಗಿಕ ಸೌಂದರ್ಯದ ಗಣಿಗಳಾಗಿರುವ ಉತ್ತರ ಕನ್ನಡದಲ್ಲಿ ಅಕ್ರಮ ರೆಸಾರ್ಟ್ಗಳು ಮತ್ತು ಹೋಂಸ್ಟೇಗಳು ಪರಿಸರ ಸೂಕ್ಷ್ಮವಾಗಿರುವ ಪಶ್ಚಿಮ ಘಟ್ಟಗಳಿಗೆ ಅಪಾಯವನ್ನುಂಟು ಮಾಡುವುದರ ಜೊತೆಗೆ ರಾಜ್ಯದ ಬೊಕ್ಕಸಕ್ಕೆ ನಷ್ಟವನ್ನುಂಟುಮಾಡುತ್ತಿವೆ ಎಂದು ಡಿಎಚ್ ವರದಿ ಮಾಡಿದೆ.
ಕಾರವಾರದ ಪ್ರವಾಸೋದ್ಯಮ ಉಪನಿರ್ದೇಶಕರ (ಡಿಡಿಒಟಿ) ಕಚೇರಿಯ ಪ್ರಕಾರ, ಜೊಯಿಡಾ, ದಾಂಡೇಲಿ ಮತ್ತು ಹಳಿಯಾಳದ ಸುಂದರವಾದ ತಾಲೂಕುಗಳಲ್ಲಿ 200 ಕ್ಕೂ ಹೆಚ್ಚು ಹೋಂಸ್ಟೇಗಳು ಮತ್ತು 14 ರೆಸಾರ್ಟ್ಗಳು ಕಾರ್ಯನಿರ್ವಹಿಸುತ್ತಿವೆ. ಇಲಾಖೆಯಲ್ಲಿ ನೋಂದಣಿ ಮಾಡದ ಹಲವಾರು ಅಕ್ರಮ ಹೋಂಸ್ಟೇಗಳು ಜಾಲ್ತಿಯಲ್ಲಿವೆ. ಅಲ್ಲದೆ ಇವು ರಾಜ್ಯ ಸರ್ಕಾರಕ್ಕೆ ಯಾವುದೇ ತೆರಿಗೆ ಪಾವತಿಸುತ್ತಿಲ್ಲ ಎಂದು ಅಧಿಕಾರಿಗಳೇ ಒಪ್ಪಿಕೊಳ್ಳುತ್ತಾರೆ.

ಜೋಯಿಡಾ ಮತ್ತು ದಾಂಡೇಲಿಯಲ್ಲಿ 500ಕ್ಕೂ ಹೆಚ್ಚು ಹೋಂಸ್ಟೇಗಳು ಮತ್ತು 45 ರೆಸಾರ್ಟ್ಗಳಿವೆ ಎಂದು ಸ್ಥಳೀಯರು ಮತ್ತು ಕಾರ್ಯಕರ್ತರು ಹೇಳುತ್ತಾರೆ. ಹಲವಾರು ಹೋಮ್ಸ್ಟೇಗಳು ನಿಸರ್ಗಕ್ಕೆ ಹಾನಿ ಮಾಡುವ ಮೂಲಕ ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆಬ್ರವರಿ ಅಧಿವೇಶನದಲ್ಲಿ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಅವರು ವಿಧಾನ ಪರಿಷತ್ತಿನಲ್ಲಿ ನೀಡಿದ ಲಿಖಿತ ಉತ್ತರದೊಂದಿಗೆ ಕಾರವಾರದ ಡಿಡಿಒಟಿ ಒದಗಿಸಿದ ಡೇಟಾ ಹೊಂದಾಣಿಕೆಯಾಗುತ್ತಿಲ್ಲ. ಎಂಎಲ್ಸಿ ಎನ್. ರವಿಕುಮಾರ್ ಅವರ ಚುಕ್ಕೆ ಹಾಕದ ಪ್ರಶ್ನೆಗೆ ಅವರು ನೀಡಿದ ಉತ್ತರದ ಪ್ರಕಾರ, ಸರ್ಕಾರದಿಂದ ನಿರ್ವಹಿಸಲ್ಪಡುವ ಓಲ್ಡ್ ಮ್ಯಾಗಜೀನ್ ಹೌಸ್, ಕಾಳಿ ಮತ್ತು ಅಂಶಿ ಪ್ರಕೃತಿ ಶಿಬಿರಗಳು ಸೇರಿದಂತೆ ಇಲಾಖೆಯಲ್ಲಿ ಕೇವಲ ಎಂಟು ರೆಸಾರ್ಟ್ಗಳು ನೋಂದಾಯಿತವಾಗಿವೆ. ಇಲಾಖೆಯು ಈ ಪ್ರದೇಶದಲ್ಲಿ ಅನಧಿಕೃತ ರೆಸಾರ್ಟ್ಗಳ ಯಾವುದೇ ಮಾಹಿತಿಯನ್ನು ಹೊಂದಿಲ್ಲ ಮತ್ತು ಅಂತಹ ಆಸ್ತಿಗಳ ವಿರುದ್ಧ ಕಾರ್ಯನಿರ್ವಹಿಸುವ ಅಧಿಕಾರವನ್ನು ಹೊಂದಿಲ್ಲ ಎಂದು ಮಾಹಿತಿ ನೀಡಿದ್ದರು.

ಆದಾಗ್ಯೂ, ಪ್ರವಾಸೋದ್ಯಮ ಉಪನಿರ್ದೇಶಕರು ಹೋಂಸ್ಟೇಗಳಿಗೆ ಅನುಮತಿಯನ್ನು ಅನುಮೋದಿಸುವ ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಸಮಿತಿಯ ಪದನಿಮಿತ್ತ (ಕಾರ್ಯದರ್ಶಿ) ಆಗಿರುತ್ತಾರೆ. ಜಿಲ್ಲೆಯಲ್ಲಿ ಅನಧಿಕೃತ ಹೋಂಸ್ಟೇಗಳ ಬಗ್ಗೆ ನಮಗೆ ತಿಳಿದಿದೆ ಮತ್ತು ಅವುಗಳನ್ನು ನೋಂದಾಯಿಸಲು ಮಾಲೀಕರಿಗೆ ನೋಟಿಸ್ ನೀಡಿದ್ದೇವೆ. ಹೆಚ್ಚಿನವರು ಮುಂದೆ ಬಂದಿಲ್ಲ. ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಡಿಡಿಒಟಿ ಬೇಬಿ ಮೊಗೇರ್ ಹೇಳಿದ್ದಾರೆ.
ಜೊಯಿಡಾದ ಗಣೇಶಗುಡಿಯಲ್ಲಿರುವ ಮಾನ್ಯತೆ ಪಡೆದ ರೆಸಾರ್ಟ್ ಮಾಲೀಕರೊಬ್ಬರು, ದಾಂಡೇಲಿ ಮತ್ತು ಜೋಯಿಡಾದಲ್ಲಿ ಹೋಂಸ್ಟೇಗಳು ಪ್ರವಾಸೋದ್ಯಮದ ಪರಿಕಲ್ಪನೆಯನ್ನು ಉಲ್ಲಂಘಿಸಲಾಗಿದೆ. ಸಂದರ್ಶಕರಿಗೆ ಈ ಪ್ರದೇಶದ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಬದಲು, ಹೋಂಸ್ಟೇಗಳು ಮದ್ಯವನ್ನು ಪೂರೈಸುವ ಉದ್ಯಮವಾಗಿ ಮಾರ್ಪಟ್ಟಿವೆ. ಅವರು ಜೂಜಿನ ಅಡ್ಡೆಯಾಗಿ ಕಾರ್ಯನಿರ್ವಹಿಸುತ್ತಾರೆ. 3ರಿಂದ 4 ಕುಟುಂಬಗಳನ್ನು ಹೊತ್ತೊಯ್ಯುವ ಸಾಮರ್ಥ್ಯವಿದ್ದರೂ ವಾರಾಂತ್ಯದಲ್ಲಿ 200 ಅತಿಥಿಗಳೊಂದಿಗೆ ಅನೇಕ ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಈ ರೆಸಾರ್ಟ್ಗಳಿಂದ ಪ್ರತಿ ವಾರ ಟ್ರಕ್ಗಟ್ಟಲೆ ಮದ್ಯದ ಬಾಟಲಿಗಳು ಮತ್ತು ಕೋಳಿ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ. ಇಲ್ಲಿ ಜನಸಂದಣಿ ಮತ್ತು ನಿರ್ಮಾಣ ಚಟುವಟಿಕೆಗಳು ಕಾಡುಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ಮತ್ತೊಂದು ಅಧಿಕೃತ ರೆಸಾರ್ಟ್ ಮಾಲೀಕರು ಹೇಳಿದರು.
ವನ್ಯಜೀವಿ ಸಂವಾದಕ ಗಿರಿಧರ್ ಕುಲಕರ್ಣಿ ಮಾತನಾಡಿ, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದ 10 ಕಿಲೋಮೀಟರ್ ವ್ಯಾಪ್ತಿಯಲ್ಲಿ ಅನೇಕ ರೆಸಾರ್ಟ್ಗಳು ಮತ್ತು ಹೋಂಸ್ಟೇಗಳು ಸ್ಥಾಪನೆಗೊಂಡಿವೆ. ಅವುಗಳಲ್ಲಿ ಹೆಚ್ಚಿನವು ಅರಣ್ಯ ಇಲಾಖೆ ಮತ್ತು ಇತರ ಸರ್ಕಾರಿ ಸಂಸ್ಥೆಗಳಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದಿಲ್ಲ ಎಂದು ತಿಳಿಸಿದರು.
ಈ ರೆಸಾರ್ಟ್ಗಳು ಟ್ರೆಕ್ಕಿಂಗ್, ಪಕ್ಷಿ ವೀಕ್ಷಣೆ, ಪ್ರಕೃತಿ ನಡಿಗೆ, ಜಲ ಕ್ರೀಡೆ ಮುಂತಾದ ಚಟುವಟಿಕೆಗಳನ್ನು ನೀಡುವುದರಿಂದ ಅವುಗಳಿಗೆ ಅರಣ್ಯ ಇಲಾಖೆಯಿಂದ ಅನುಮತಿ ಅಗತ್ಯವಿದೆ. ಮಾಲೀಕರು ಅರಣ್ಯ ವಸಾಹತು ಕಾಯ್ದೆಯನ್ನು ಉಲ್ಲಂಘಿಸಿ ತಮ್ಮ ಜಮೀನನ್ನು ರೆಸಾರ್ಟ್ ಮತ್ತು ಹೋಂಸ್ಟೇ ನಿರ್ಮಾಣಕ್ಕೆ ಗುತ್ತಿಗೆಗೆ ನೀಡುತ್ತಿದ್ದಾರೆ. ಈ ಕುರಿತು ನ್ಯಾಯಾಲಯದ ಹಲವು ಆದೇಶಗಳು ಸ್ಪಷ್ಟವಾಗಿದ್ದು ಅರಣ್ಯ ಇಲಾಖೆಯ ಪರವಾಗಿಯೇ ಇದ್ದರೂ ಅಧಿಕಾರಿಗಳು ಅದರ ವಿರುದ್ಧ ಕ್ರಮಕೈಗೊಳ್ಳುತ್ತಿಲ್ಲ ಎಂದು ಗಿರಿಧರ್ ಹೇಳಿದರು.
ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅವರಿಗೆ ಆರ್ಟಿಐ ಉತ್ತರದಲ್ಲಿ ಈ ಮೂರು ತಾಲ್ಲೂಕುಗಳಲ್ಲಿ ರೆಸಾರ್ಟ್ಗಳನ್ನು ನಿರ್ಮಿಸಲು ಭೂಪರಿವರ್ತನೆಗೆ ಬಂದ 48 ಅರ್ಜಿಗಳ ಪೈಕಿ 15 ಅರ್ಜಿಗಳಿಗೆ ವಿವಿಧ ಕಾರಣಗಳಿಗಾಗಿ ಅನುಮತಿ ತಿರಸ್ಕರಿಸಲಾಗಿದೆ ಎಂದು ತಿಳಿಸಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಗಳು ಅವರು ಅಕ್ರಮ ರೆಸಾರ್ಟ್ಗಳು/ಹೋಮ್ಸ್ಟೇಗಳ ವಿರುದ್ಧ ನಿಧಾನವಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ. ಏಕೆಂದರೆ ಇದು ಪ್ರದೇಶದ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ತಿಳಿಸಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications