ಅಕ್ರಮ ಭೂ ಮಂಜೂರು: ಬಂಗಾರಪೇಟೆ ಶಾಸಕರಿಗೆ ಟ್ರಬಲ್
ಬೆಂಗಳೂರು, ಜೂ.18. ಅಕ್ರಮ ಭೂ ಮಂಜೂರು ಪ್ರಕರಣದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ತಮ್ಮ ತಾಯಿ ಹೆಸರಿಗೆ ಅಕ್ರಮ ಭೂಮಿಯನ್ನು ಮಂಜೂರಾತಿ ಮಾಡಲಾಗಿದೆ ಎಂದು ಹೂಡಿದ್ದ ಖಾಸಗಿ ದೂರಿನ ಸಂಬಂಧ ನಗರದ ಜನಪ್ರತಿನಿಧಿಗಳ ವಿಶೇಷ ಕೊರ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶ ನೀಡಿದೆ.
ಕೋಲಾರ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಸಲ್ಲಿಸಿದ ಖಾಸಗಿ ದೂರನ್ನು ಆಲಿಸಿದ 82ನೇ ವಿಶೇಷ ನ್ಯಾಯಾಲಯದ ನ್ಯಾಯಾಶ ಬಿ.ಜಯಂತ್ ಕುಮಾರ್ ಈ ಆದೇಶ ನೀಡಿದ್ದಾರೆ.
ಅರ್ಜಿದಾರರ ವಾದ ಆಲಿಸಿದ ಬಳಿಕ ದೂರುದಾರರು ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸದೆ ಇರುವುದನ್ನು ಗಮನಹಿಸಿದ ನ್ಯಾಯಾಲಯ, ಕೂಡಲೇ ಎಫ್ ಐಆರ್

ದಾಖಲಿಸಿಕೊಂಡು ಜು.8ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಎಸಿಬಿಯ ಕೋಲಾರ ಪೋಲೀಸ್ ಉಪಾಧೀಕ್ಷಕರಿಗೆ ನಿರ್ದೇಶನ ನೀಡಿದೆ.
ಬಂಗಾರಪೇಟೆ ಕಾಂಗ್ರೆಸ್ ಶಾಸಕರು ಮಾತ್ರವಲ್ಲದೆ ಈ ಪ್ರಕರಣದಲ್ಲಿ ಅವರ ತಾಯಿ ಮುನಿಯಮ್ಮ, ಪ್ರಸ್ತುತ ಮಳವಳ್ಳಿ ತಹಸಿಲ್ದಾರ್ ಆಗಿರುವ ವಿಜಯಣ್ಣ, ಭೂ ಮಂಜೂರಾತಿ ಸಮಿತಿಯ ಸದಸ್ಯ ರಾಗಿದ್ದ ತಿಮ್ಮರಾಯಪ್ಪ, ಸುಜಾತ, ಚಲಪತಿ ಮತ್ತಿರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅವರೂ ಸಹ ಇದೀಹ ತನಿಖೆಯನ್ನು ಎದುರಿಸಲೇಬೇಕಾಗಿದೆ. ಶಾಸಕರ ಜೊತೆ ಅವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಶಾಸಕರು ವಿಶೇಷ ಕೋರ್ಟ್ ವಿರುದ್ಧ ತನಿಖೆಗೆ ತಡೆಯಾಜ್ಞೆ ಪಡೆಯಬೇಕು, ಇಲ್ಲವಾದರೆ ತನಿಖೆ ಎದುರಿಸಬೇಕಾಗುತ್ತದೆ.
ಏನಿದು ಪ್ರಕರಣ:
ಶಾಸಕ ನಾರಾಯಣಸ್ವಾಮಿ 2018 ರಲ್ಲಿ ತಮ್ಮ ತಾಯಿ ಮುನಿಯಮ್ಮರವರಿಗೆ ಕಸಬಾ ಹೋಬಳಿ ಹುದುಕುಳು ಗ್ರಾಮದ ಸ.ನಂ.256 ರ ಪೈಕಿ 3.10 ಎಕರೆ ಜಮೀನು ಮಂಜೂರು ಮಾಡಿ ಅಕ್ರಮ ಎಸಗಿದ್ದಾರೆ ಎಂದು ಕೋಲಾರ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ 2022 ರ ಫೆ.23ರಂದು ಎಸಿಬಿಗೆ ದೂರು ನೀಡಿದ್ದರು. ಆದರೆ ಎಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ. ಹಾಗಾಗಿ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿ ಎಫ್ ಐಆರ್ ದಾಖಲಿಸಲು ಕೋರಿ ಎಸಿಬಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications