ಸಂಡೂರಿನಲ್ಲಿ ಮತ್ತೆ ಅಕ್ರಮ ಗಣಿಗಾರಿಕೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜನವರಿ 06; ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಪುರಾತನ ಮತ್ತು ಸಂರಕ್ಷಿತ ಸ್ಮಾರಕವಾಗಿರುವ ಕುಮಾರಸ್ವಾಮಿ ದೇವಸ್ಥಾನ ಸುತ್ತಲಿನ ಸ್ವಾಮಿಮಲೈ ಬೆಟ್ಟದಲ್ಲಿ ಮತ್ತೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯರೇ ಅಕ್ರಮ ಗಣಿಗಾರಿಕೆ ವಿರುದ್ಧ ಮತ್ತೆ ಹೋರಾಟ ಆರಂಭಿಸಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಅವ್ಯಾವಹತವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಡೆಯಲು ಆದೇಶಿಸುವಂತೆ ಕೋರಿ ಸಂಡೂರಿನ ಶ್ರೀಶೈಲ ಆಳದಹಳ್ಳಿ ಸೇರಿದಂತೆ ಐವರು ನಿವಾಸಿಗಳು ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಬಗೆಗಿನ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಕೇಂದ್ರ ಸಂಸ್ಕೃತಿ ಸಚಿವಾಲಯ, ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರು, ಭಾರತೀಯ ಸರ್ವೇಕ್ಷಣಾ ಇಲಾಖೆ ಹಾಗೂ ಐದು ಗಣಿ ಕಂಪನಿಗಳಿಗೆ ಸೇರಿದಂತೆ ಒಟ್ಟು 12 ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ನಾಲ್ಕು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ.

ಸಂರಕ್ಷಿತ ಪ್ರದೇಶಕ್ಕೆ ಧಕ್ಕೆ: ಅರ್ಜಿದಾರರ ಪರ ವಕೀಲರು, ಏಳು ಮತ್ತು ಎಂಟನೇ ಶತಮಾನದ ಬಾದಾಮಿ ಚಾಲುಕ್ಯರ ಅವಧಿಯಲ್ಲಿ ಕುಮಾರಸ್ವಾಮಿ ದೇವಸ್ಥಾನ ನಿರ್ಮಿಸಲಾಗಿದೆ. ದೇವಸ್ಥಾನದ ಸುತ್ತಲು ಜೀವ ವೈವಿದ್ಯ ಮತ್ತು ಔಷಧೀಯ ಗುಣವುಳ್ಳ ಸಸಿಗಳನ್ನು ಹೊಂದಿರುವ ಸ್ವಾಮಿಮೈಲೈ ವೈವಿಧ್ಯ ಕಾಡಿದೆ.
ಸ್ವಾಮಿಮಲೈ ಬೆಟ್ಟದ 2.5 ಎಕರೆ ಜಾಗದಲ್ಲಿ ಈ ಕುಮಾರಸ್ವಾಮಿ ದೇವಸ್ಥಾನವನ್ನು ರಾಷ್ಟ್ರೀಯ ಸಂರಕ್ಷಿತ ಮತ್ತು ಪುರಾತನ ಸ್ಮಾರಕವಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ದಕ್ಷಿಣ ಪ್ರಸ್ಥಭೂಮಿಯ ಪಶ್ಚಿಮಘಟ್ಟವೆಂದೇ ಸ್ವಾಮಿಮಲೈ ಬೆಟ್ಟವು ಖ್ಯಾತಿ ಪಡೆದಿದೆ ಎಂದರು.
ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಸ್ವಾಮಿಮಲೈ ಕಾಡಿನಲ್ಲಿ ಗಣಿಗಾರಿಕೆ ಅವ್ಯಾವಹತವಾಗಿ ನಡೆಯುತ್ತಿದೆ. ಸದ್ಯ ದೇವಸ್ಥಾನದ ಬಾಗಿಲ ಸಮೀಪದವರೆಗೂ ಗಣಿಗಾರಿಕೆ ಬಂದಿದೆ. ನಿರಂತರ ಗಣಿ ಚಟುವಟಿಕೆಯಿಂದಾಗಿ ದೇವಸ್ಥಾನದ ರಚನೆಗಳಿಗೆ ಗಂಭೀರ ಸ್ವರೂಪದ ಹಾನಿ ಉಂಟು ಮಾಡುತ್ತಿದೆ. ದೇವಸ್ಥಾನದ ಹಲವು ಭಾಗಗಳು ದುಸ್ಥಿತಿಗೆ ತಲುಪಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಜತೆಗೆ ಅರ್ಜಿದಾರರು ಗಣಿ ಸ್ಫೋಟದಿಂದ ದೇವಸ್ಥಾನದ ಕಲ್ಲಿನ ಕಂಬಗಳಲ್ಲಿ ಬಿರುಕು ಮೂಡಿದ್ದು, ಗೋಪುರ ವಾಲಿದೆ. ಸ್ಥಳೀಯ ಗ್ರಾಮಗಳ ಕುಡಿಯುವ ನೀರಿನ ಮೂಲ ಕಲುಷಿತವಾಗಿವೆ. ಕಬ್ಬಿಣದ ಅದಿರು ಕಣಗಳಿಂದ ವಾಯು ಮಾಲಿನ್ಯ ಪ್ರಮಾಣ ಹೆಚ್ಚುತಿದೆ. ಗಣಿದೂಳಿನಿಂದ ದೇವಸ್ಥಾನ ಸಂಪೂರ್ಣವಾಗಿ ಮುಚ್ಚುಹೋಗಿದೆ ಎಂದು ಹೇಳಿದೆ.
ಸ್ವಾಮಿಮಲೈ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ನಿಲ್ಲಿಸಬೇಕು. ದೇವಸ್ಥಾನವನ್ನು ಸಂರಕ್ಷಣೆ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
New Airports: ಬಳ್ಳಾರಿ, ವಿಜಯನಗರ, ಕೊಪ್ಪಳದ ಜನರಿಗಾಗಿ ಹೊಸ ವಿಮಾನ ನಿಲ್ದಾಣ; ಎಂಬಿ ಪಾಟೀಲ್ ಬಿಗ್ ಅಪ್ಡೇಟ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ











Click it and Unblock the Notifications