CM Siddaramaiah: ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಅಕ್ಟೋಬರ್ 05: ರ್ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಈ ಕುರಿತು ಗುರುವಾರ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ತಿಂಗಳಿಗೊಮ್ಮೆ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯ ಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.

ಹೊಸ ಮರಳು ನೀತಿ 2020 ನ್ನು 1.12.2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್ ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿ ಯನ್ನೂ ಕಾಪಾಡಬೇಕಿದೆ . ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.
Non CRZ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್ ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್ ಗಳಿಗ ಮರುಹಾರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.
8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪುಕಲ್ಲಿನ ಸಮಸ್ಯೆ ಇದೆ. ಮಂಗಳೂರು, ಉಡುಪಿಯಲ್ಲಿನ ಹವಾಗುಣಕ್ಕಾಗಿ ಗೃಹನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಇದನ್ನು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ.
ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

ಕೆಂಪುಕಲ್ಲಿನ( Laterite) ಗಣಿಗಾರಿಕೆ ಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್ ಆಗಿ ವಿಂಗಡಿಸಿರುವುದರಿಂದ 17.03.2023 ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994 ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.
ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. Laterite ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications