ಐಎಂಎ ಹಗರಣ: ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ರೋಷನ್ ಬೇಗ್
ಬೆಂಗಳೂರು,ಜು.18. ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮಾಜಿ ಸಚಿವ ಆರ್.ರೋಷನ್ ಬೇಗ್ ತಮ್ಮ ವಿರುದ್ಧದ ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ರೋಷನ್ ಬೇಗ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಸೋಮವಾರ ವಿಚಾರಣೆ ನಡೆಸಿತು.
ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿ ಸಿಬಿಐ, ಕಮರ್ಶಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ಅಧಿಕಾರಿ ಹಾಗೂ ದೂರುದಾರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರ ರೋಷನ್ ಬೇಗ್ ಪರ ಹಿರಿಯ ವಕೀಲರು, ಅರ್ಜಿದಾರರ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್ ನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದರು.
ಆರೋಪದ ಹಿನ್ನೆಲೆ ಏನು?
ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ತಿಯಾಕ್ ಎಂಬುವರು ಪೊಲೀಸರ ಮುಂದೆ ನೀಡಿದ್ದ ಹೇಳಿಕೆಯಲ್ಲಿ, ಮನ್ಸೂರ್ ಖಾನ್ 2018ರ ವಿಧಾನಸಭೆ ಚುನಾವಣೆಯಲ್ಲಿ ರೋಷನ್ ಬೇಗ್ ಅವರಿಗೆ 2 ಕೋಟಿಗೂ ಹೆಚ್ಚು ಹಣ ನೀಡಿದ್ದಾರೆಂದು ತಿಳಿಸಿದ್ದಾರೆ. ಅದರ ಅನುಸಾರ ಅವರನ್ನು ಪ್ರಕರಣದ ಸಾಕ್ಷಿ ಎಂದು ಪರಿಗಣಿಸಲಾಗಿದೆ.
ಹಾಗಾಗಿ, ಬೇಗ್ ಐಎಂಎ ಕಂಪನಿ ಪ್ರವರ್ತಕರಾಗಿ ಸಂಸ್ಥೆಯ ವಾಣಿಜ್ಯ ಚಟುವಟಿಕೆ ಫಲಾನುಭವಿ ಎಂದು ಸಿಬಿಐ ಅರೋಪಿಸಿದೆ. ಹಗರಣದಲ್ಲಿ ಬೇಗ್ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 406, 409 ಮತ್ತು 120 ಬಿ ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆದಾರರ ಹಿತರಕ್ಷಣಾ (ಕೆಪಿಐಡಿಇಎಫ್) ಕಾಯ್ದೆ-2004ರ ಅನ್ವಯ 2019ರ ಅಕ್ಟೋಬರ್ ನಲ್ಲಿ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಹಾಗಾಗಿ ವಿಶೇಷ ನ್ಯಾಯಾಲಯ ಬೇಗ್ ವಿರುದ್ಧ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಅದನ್ನು ಪ್ರಶ್ನಿಸಿ ಬೇಗ್ ವಿಚಾರಣೆ ಗೆ ತಡೆ ಕೋರಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications