ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಎಂಎ ಹಗರಣ : 300 ಕೆಜಿ ಚಿನ್ನದ ಬಿಸ್ಕತ್ ಬಗ್ಗೆ ವರದಿ ಕೇಳಿದ ಕೋರ್ಟ್

|
Google Oneindia Kannada News

ಬೆಂಗಳೂರು, ಆಗಸ್ಟ್ 29 : ಐಎಂಎ ಹಗರಣದ ತನಿಖೆ ವೇಳೆ ವಶಕ್ಕೆ ಪಡೆದಿರುವ ಚಿನ್ನದ ಬಿಸ್ಕತ್‌ಗಳ ಕುರಿತು ವರದಿ ನೀಡುವಂತೆ ಎಸ್‌ಐಟಿಗೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಒಟ್ಟು 303 ಕೆಜಿ ತೂಕದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಐಎಂಎ ಹಗರಣದ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರಿಗೆ ವಿಭಾಗೀಯ ಪೀಠ ಆದೇಶ ನೀಡಿದೆ.

ಐಎಂಎ ಹಗರಣ: ಚಿನ್ನದ ಬಿಸ್ಕೆಟ್‌ ವಶಐಎಂಎ ಹಗರಣ: ಚಿನ್ನದ ಬಿಸ್ಕೆಟ್‌ ವಶ

IMA Scam : HC Directs SIT To Submit Detailed Report On Gold Biscuit

ತನಿಖೆಯ ವೇಳೆ ವಶಕ್ಕೆ ಪಡೆದಿರುವ 303 ಕೆಜಿ ತೂಕದ 5008 ಬಂಗಾರದ ಬಿಸ್ಕತ್‌ಗಳ ಬಗ್ಗೆ ಸಮಗ್ರವಾದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ ಎಂದು ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ ಕೊಟ್ಟಿದೆ.

ದುಬೈಗೆ ಹಾರುವ ಮುನ್ನ 38 ಕೆಜಿ ಚಿನ್ನ ಕರಗಿಸಿದ್ದ ಮನ್ಸೂರ್ ಖಾನ್ದುಬೈಗೆ ಹಾರುವ ಮುನ್ನ 38 ಕೆಜಿ ಚಿನ್ನ ಕರಗಿಸಿದ್ದ ಮನ್ಸೂರ್ ಖಾನ್

ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, "ಎಸ್‌ಐಟಿ ತನಿಖೆ ನಡೆಸುವಾಗ ಮನ್ಸೂರ್ ಖಾನ್ ಬಳಿಯಿಂದ ಚಿನ್ನದ ಬಿಸ್ಕತ್ ವಶಪಡಿಸಿಕೊಂಡಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ. ಈ ಕುರಿತು ಎಸ್‌ಐಟಿ ನ್ಯಾಯಾಲಯಕ್ಕೆ ವಿವರಣೆ ನೀಡಬೇಕು" ಎಂದು ವಾದ ಮಂಡಿಸಿದರು.

ಐಎಂಎ ಹಗರಣ; ಕೋಲಾರದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಹಣ ಪತ್ತೆ!ಐಎಂಎ ಹಗರಣ; ಕೋಲಾರದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಹಣ ಪತ್ತೆ!

ಆದ್ದರಿಂದ, ಎಸ್‌ಐಟಿಗೆ ಚಿನ್ನದ ಬಿಸ್ಕತ್ ಕುರಿತು ವರದಿ ನೀಡುವಂತೆ ಮುಖ್ಯ ನ್ಯಾಯಮೂರ್ತಿಗಳು ಸೂಚನೆ ನೀಡಿದರು. ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಲಾಗಿದೆ.

ಮತ್ತೊಂದು ಕರ್ನಾಟಕ ಸರ್ಕಾರ ಐಎಂಎ ಹಗರಣದ ತನಿಖೆಯನ್ನು ಸಿಬಿಐಗೆ ನೀಡುವುದಾಗಿ ಘೋಷಣೆ ಮಾಡಿದೆ. ಮುಖ್ಯ ನ್ಯಾಯಮೂರ್ತಿಗಳು ಸಿಬಿಐ ತನಿಖೆ ಆರಂಭವಾಗಿದೆಯೇ? ಎಂದು ಪ್ರಶ್ನಿಸಿದರು. ಸಿಬಿಐ ತನಿಖೆ ಆರಂಭವಾಗಿಲ್ಲ ಎಂದು ವಕೀಲ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

English summary
Karnataka High Court directed SIT to submit detail report on Ggold biscuit sized during the probe of IMA scam. 5008 gold biscuit sized from the building belongs to Mansoor Khan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X