ಕರ್ನಾಟಕಕ್ಕೆ ಈ ಬಾರಿ ಸಾಧಾರಣ ಮುಂಗಾರು ಮಳೆ
ಅವಧಿಗೆ ಮುನ್ನ ನೈಋತ್ಯ ಮುಂಗಾರು ಕೇರಳ ಪ್ರವೇಶಿಸಿದೆ. ಆದರೆ, ಕರ್ನಾಟಕಕ್ಕೆ ಮುಂಗಾರು ಮಳೆ ವಿಳಂಬವಾಗಿದೆ. ವಾಡಿಕೆಗಿಂತ ತಡವಾಗಿ ಮುಂಗಾರು ಮಳೆ ಆಗಮಿಸುವ ಲಕ್ಷಣಗಳು ಕಂಡು ಬಂದಿವೆ.
ಬೆಂಗಳೂರು, ಜೂನ್ 05: 'ಕವಿದುಕೊಂಡು ಕುಳಿತ ಮೋಡ ಮಳೆ ಸುರಿಯುವಲ್ಲಿ ಯಾಕೋ ವಿಳಂಬ ಮಾಡುತ್ತಿದೆ', ಇಷ್ಟು ಹೊತ್ತಿಗೆ ಮುಂಗಾರು ಮಳೆಯಲ್ಲಿ ನೈಋತ್ಯ ಮಾರುತಗಳ ಜತೆಯಲ್ಲಿ ಸಂಭ್ರಮಿಸಬೇಕಿದ್ದ ಕರ್ನಾಟಕ ಜನತೆಗೆ ನಿರಾಶೆಯಾಗಿದೆ. ಜತೆಗೆ ಇನ್ನೊಂದು ನಿರಾಶೆಯ ಸುದ್ದಿಯೂ ಸಿಕ್ಕಿದೆ. ಈ ಬಾರಿ ಮುಂಗಾರು ಸಾಧಾರಣವಾಗಿ ಸುರಿಯಲಿದೆ ಎಂದು ಮುನ್ಸೂಚನೆ ಸಿಕ್ಕಿದೆ.
ಹವಾಮಾನ ತಜ್ಞರ ಮುನ್ಸೂಚನೆ ಹುಸಿಯಾಗಿದೆ. ಮುಂಗಾರು ಮಳೆ ಎಂಟ್ರಿಗೆ ಈಗ ಹೊಸ ದಿನಾಂಕ ನಿಗದಿಪಡಿಸಿದ್ದಾರೆ. ಜೂನ್ 10ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿದೆ.
ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸಬೇಕಿದ್ದ ಮುಂಗಾರು, ಅವಧಿಗೆ ಮುನ್ನ ಪ್ರವೇಶ ಪಡೆದಿತ್ತು. ಹೀಗಾಗಿ, ಕನಿಷ್ಟ ನಾಲೈದು ದಿನ ಮುಂಚಿತವಾಗಿ ಕರ್ನಾಟಕದಲ್ಲಿ ಮುಂಗಾರು ಆರಂಭವಾಗಲಿದೆ ಎಂಬ ನಿರೀಕ್ಷೆಯಿತ್ತು. ಆದರೆ, ಈಗ ವಾಡಿಕೆಗಿಂತ ತಡವಾಗಿ ಮುಂಗಾರು ಮಳೆ ಆಗಮಿಸುವ ಲಕ್ಷಣಗಳು ಕಂಡು ಬಂದಿದೆ.

ಕರಾವಳಿ ಭಾಗದಲ್ಲಿ ಮಾತ್ರ ಮಳೆಯಾಗುತ್ತಿದ್ದು, ಒಳನಾಡಿಗೆ ಮಳೆ ಬಂದಿಲ್ಲ. ಹೀಗಾಗಿ ಈ ಬಾರಿಯ ಮುಂಗಾರು ವಾಡಿಕೆಗಿಂತ ಎರಡು-ಮೂರು ದಿನ ತಡವಾಗುತ್ತಿದೆ ಎಂದು ಎಂದು ಹವಾಮಾನ ತಜ್ಞ ವಿ.ಎಸ್.ಪ್ರಕಾಶ್ ಹೇಳಿದ್ದಾರೆ.
Moderate to heavy rain will continue over #Kerala, Coastal #Karnataka, Andaman and Nicobar Islands. https://t.co/2JXRGWs2jY @KeralaTourism
— SkymetWeather (@SkymetWeather) June 5, 2017
ಜೂ.7ರಿಂದ 10ರವರೆಗೆ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದ ಮುಂಗಾರು ಮಾರುತಗಳಲ್ಲಿ ವ್ಯತ್ಯಾಸ ಉಂಟಾಗಿ ಅವಧಿಗೂ ಮುನ್ನ ಬರಬೇಕಾಗಿದ್ದ ಮುಂಗಾರು ವಿಳಂಬವಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ಹೇಳಿದ್ದಾರೆ.
24Hrs.☔ Map of #Karnataka ending @ 8.30 a.m.of 05.06.2017, Highest 82mm ☔@Bijapur_Sindgi_Bammanahalli pic.twitter.com/FzIIrqhvql
— KSNDMC (@KarnatakaSNDMC) June 5, 2017
ಮೇ ತಿಂಗಳ ಕೊನೆಯಲ್ಲಿ ಸುರಿದ ಪೂರ್ವ ಮುಂಗಾರು ಮಳೆ ರೈತ ಸಮುದಾಯದಲ್ಲಿ ಸಂತಸ ಮೂಡಿಸಿತ್ತು. ಇದೇ ಖುಷಿಯಲ್ಲಿ ನೆಲಮಂಗಲ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಕೃಷಿ ಚಟುವಟಿಕೆಗಳು ಆರಂಭವಾಗಿತ್ತು. ಈಗ ಇನ್ನೊಂದು ವಾರವಾದರೂ ಮಳೆಗಾಗಿ ಕಾಯಬೇಕಾಗಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications