ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 21ರಂದು ರಾಜ್ಯಾದ್ಯಂತ ಮಳೆ ಸಾಧ್ಯತೆ

|
Google Oneindia Kannada News

Recommended Video

ಏಪ್ರಿಲ್ 21 ರಂದು ಭಾರೀ ಮಳೆ | ಭಾರತೀಯ ಹವಾಮಾನ ಇಲಾಖೆ ವರದಿ| Oneindia Kannada

ಬೆಂಗಳೂರು, ಏಪ್ರಿಲ್ 19: ರಾಜ್ಯದಲ್ಲಿ ದಟ್ಟ ಮೋಡಗಳ ಸಾಲು ಟ್ರಫ್ ಮುಂದುವರಿದಿದ್ದು, ಏ.21ರಂದು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವರ್ಷ ಉತ್ತಮ ಮುಂಗಾರು: ಮೇ ಕೊನೆ ವಾರದಲ್ಲಿ ಮಳೆ ನಿರೀಕ್ಷೆ ಈ ವರ್ಷ ಉತ್ತಮ ಮುಂಗಾರು: ಮೇ ಕೊನೆ ವಾರದಲ್ಲಿ ಮಳೆ ನಿರೀಕ್ಷೆ

ಟ್ರಫ್ ಪರಿಣಾಮದಿಂದಾಗಿ ಏಪ್ರಿಲ್ ಆರಂಭದಿಂದಲೇ ಅಲ್ಲಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡು ಹಾಗೂ ಕರಾವಳಿಗೂ ಮಳೆ ವ್ಯಾಪಿಸಿದ್ದು, ಕಳೆದ ಒಂದು ದಿನದಿಂದ ಮಳೆ ಕಡಿಮೆಯಾಗಿದೆ. ಟ್ರಫ್‌ ತೀವ್ರತೆ ಇನ್ನೂ ಇರುವುದರಿಂದ ಏ.21ರಂದು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಉತ್ತರ ಒಳನಾಡಿನ ಕೆಲವೆಡೆ ಹಾಗೂ ಕರಾವಳಿಯಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬುಧವಾರ ಜಮಖಂಡಿಯಲ್ಲಿ 4 ಸೆಂ.ಮೀ., ಅಥಣಿ, ಖಜೂರಿ, ಅಫಜಲಪುರ, ಕಲಬುರ್ಗಿಯಲ್ಲಿ 2 ಸೆಂ.ಮೀ., ಹುಬ್ಬಳ್ಳಿ, ಕುಂದರಗಿ, ಇಂಡಿ, ಭಾಗಮಂಡಲ, ನಾಪೋಕ್ಲು, ಶೃಂಗೇರಿ, ಲೋಕಾಪುರದಲ್ಲಿ 1 ಸೆಂ.ಮೀ. ಮಳೆಯಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಕೆಲ ಜಿಲ್ಲೆಗಳಲ್ಲಿ ತಾಪಮಾನ ಸ್ವಲ್ಪ ಏರಿಕೆಯಾಗಿದೆ.

IMD indicates heavy rain on April 21 in south interior

ಕಲಬುರಗಿಯಲ್ಲಿ ಗರಿಷ್ಠ 41.4 ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಗರಿಷ್ಠ 34.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.5 ಡಿಗ್ರಿ ಸೆಲ್ಸಿಯಸ್, ಕೆಐಎಎಲ್ ನಲ್ಲಿ ಗರಿಷ್ಠ 35.8ಡಿಗ್ರಿ ಸೆಲ್ಸಿಯಸ್ ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್, ಎಚ್‌ ಎಎಲ್ ನಲ್ಲಿ ಗರಿಷ್ಠ 35.1ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.4ಡಿಗ್ರಿ ಸಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Continuing trough consolidated in the state heavy rain fall expected in south interior of Karnataka on April 21, Indian Meteorological Department has said in a report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X