Karnataka Rains: ಒಂದು ದಿನ ರಾಜ್ಯಾದ್ಯಂತ ಭಾರೀ ಮಳೆ?, ಯೆಲ್ಲೋ ಅಲರ್ಟ್: ಗರಿಷ್ಠ ತಾಪಮಾನ 33.7 °c.
Karnataka Weather Forecast: ಸಮುದ್ರ ಮೇಲ್ಮೈ ಹಾಗೂ ಭೂ ಮೇಲ್ಮೈನಲ್ಲಿ ಉಂಟಾಗಿರುವ ವೈಪರೀತ್ಯಗಳ ಪ್ರಭಾವದಿಂದಾಗಿ ವಿವಿಧೆಡೆ ಮಳೆ ಆಗಲಿದೆ. ಆದರೆ ಕರ್ನಾಟಕದ ಮಟ್ಟಿಗೆ ಅದರ ಪ್ರಭಾವ ಆಗದು. ಕೆಲವೆಡೆ ಮಳೆ, ಹಲವೆಡೆ ಭರ್ಜರಿ ಬಿಸಿಲಿನ ಮುನ್ಸೂಚನೆ ಸಿಕ್ಕಿದೆ. ನಿರಂತರ ಮಳೆಗೆ ಕಂಗಾಲಾದ ರಾಜ್ಯದ ಜನರಿಗೆ ಬಿಸಿಲಿನ ಕಾವು ನೆನ್ನೆ ಶನಿವಾರದಿಂದಲೇ ತಟ್ಟಲು ಶುರುವಾಗಿದೆ.
ಹೌದು, ಶನಿವಾರ ನವೆಂಬರ್ 1ರಂದು ಅತೀವ ಬಿಸಿಲು ಕಾಣಿಸಿಕೊಂಡಿತು. ಸ್ವಚ್ಛ ನೀಲಿ ಆಕಾಶದಲ್ಲಿ ಹಿಂಗಾರು ಮಳೆ ಸುರಿಸುವ ಮಾರುತಗಳು ಅದೃಶ್ಯವಾಗಿದ್ದವು. ಎಲ್ಲೆಲ್ಲೂ ಬಿಸಿಲಿನ ಹವೆ ಹೆಚ್ಚಾಯಿತು. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗಿದೆ. ಮುಂದಿನ ಐದು ದಿನಗಳಲ್ಲಿ ಈ ಉಷ್ಣಾಂಶ ಪ್ರಮಾಣ ಹೀಗೆ ಮುಂದುವರಿಯಲಿದೆ. ಒಂದಷ್ಟು ಕಡೆಗಳಲ್ಲಿ ಮಳೆ ಸಹ ಆಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ
ನವೆಂಬರ್ 04 ರಿಂದ ವಿವಿಧ ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಒಳನಾಡು, ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಇಂದಿನ ಮುನ್ಸೂಚನೆ ಪ್ರಕಾರ, ನವೆಂಬರ್ 05ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಮತ್ತೆ ವರುಣಾರ್ಭಟ ಕಂಡು ಬರಲಿದೆ. ಅಂದು ಸಾಧಾರಣದಿಂದ ಭಾರೀ ಮಳೆ ಆಗಲಿದ್ದು, ಎಲ್ಲ ಜಿಲ್ಲೆಗಳಿಗೂ 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಆವತ್ತು ಕನಿಷ್ಠ 65ರಿಂದ 115 ಮಿಲಿ ಮೀಟರ್ವರೆಗೆ ಮಳೆ ಆಗುವ ಲಕ್ಷಣ ಇದೆ ಎಂದು ಐಎಂಡಿ ಮುನ್ಸೂಚನಾ ವರದಿ ತಿಳಿಸಿದೆ.
ಕರಾವಳಿ ಕರ್ನಾಟಕ ಭಾಗದಲ್ಲೂ ಈಗಾಗಲೇ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ. ವಿವಿಧ ಭಾಗಗಳಲ್ಲಿ 30 ಡಿಗ್ರಿ ಸೆಲ್ಸಿಯಸ್ ದಾಟಿದೆ. ಒಣಹವೆಯ ವಾತಾವರಣ ಸೃಷ್ಟಿಯಾಗಿದೆ. ಒಂದೇ ದಿನದಲ್ಲಿ ಮಬ್ಬು ವಾತಾವರಣ ಹೋಗಿ, ಅಧಿಕ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ ಮತ್ತು ಸಂಜೆ ಹೆಚ್ಚು ಚಳಿ, ತಂಪು ವಾತಾವರಣ ನಿರ್ಮಾಣವಾಗುತ್ತಿದೆ. ಈ ಮಧ್ಯೆ ಒಂದು ದಿನ ಭರ್ಜರಿ ಮಳೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಗರಿಷ್ಠ ತಾಪಮಾನ 33.7 ಡಿ.ಸೆ.
ಶನಿವಾರ ರಾಜ್ಯದ ಗರಿಷ್ಠ ತಾಪಮಾನ ನೋಡುವುದಾರೆ, ಕಾರವಾರದಲ್ಲಿ 33.7 ಡಿಗ್ರಿ ಸೆಲ್ಸಿಯಸ್, ಹೊನ್ನವಾರದಲ್ಲಿ 32 ಡಿಗ್ರಿ ಸೆಲ್ಸಿಯಸ್, ಮಂಗಳೂರು ವಿಮಾನ ನಿಲ್ದಾಣ & ಶಕ್ತಿ ನಗರದಲ್ಲಿ 32 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ 32 ಡಿಗ್ರಿ ಸೆಲ್ಸಿಯಸ್, ವಿಜಯಪುರ 31 ಡಿಗ್ರಿ ಸೆಲ್ಸಿಯಸ್, ರಾಯಚೂರು 31 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ 30 ಡಿಗ್ರಿ ಸೆಲ್ಸಿಯಸ್, ಹಾವೇರಿ 30 ಡಿಗ್ರಿ ಸೆಲ್ಸಿಯಸ್ 29 ಡಿಗ್ರಿ ಸೆಲ್ಸಿಯಸ್, ಬೀದರ್ 29 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 29 ಡಿಗ್ರಿ ಸೆಲ್ಸಿಯಸ್, ಧಾರವಾಡ 29 ಡಿಗ್ರಿ ಸೆಲ್ಸಿಯಸ್, ಗದಗ, 29 ಡಿಗ್ರಿ ಸೆಲ್ಸಿಯಸ್ ಚಿತ್ರದುರ್ಗ 29 ಡಿಗ್ರಿ ಸೆಲ್ಸಿಯಸ್, ದಾವಣಗೆರೆ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಈ ತಾಪಮಾನದ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications