Karnataka rain: ಭಾರೀ ಮಳೆ ಮುನ್ಸೂಚನೆ; ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು, ಜೂನ್. 25: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಮತ್ತು ಇತರ ದಕ್ಷಿಣ ಒಳನಾಡಿನ ಕರ್ನಾಟಕದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜೂನ್ 26 ರವರೆಗೆ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಗುಜರಾತ್ ಕರಾವಳಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಭಾರೀ ಮಳೆಯಾಗುತ್ತಿದೆ. ಮಾನ್ಸೂನ್ ಆರಂಭವಾದಾಗಿನಿಂದ ಸರಾಸರಿಗಿಂತ ಕಡಿಮೆ ಮಳೆಯಾಗಿರುವ ಮಲೆನಾಡು ಪ್ರದೇಶ ಮತ್ತು ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಸಿಂಚನವಾಗಲಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

IMD issued Orange alert for Bengaluru surrounding districts

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಕೊರತೆ

ನೈಋತ್ಯ ಮಾನ್ಸೂನ್‌ನ ಮೊದಲ ಮೂರು ವಾರಗಳು ರಾಜ್ಯದಲ್ಲಿ ಮಳೆ ಕೊರತೆಯನ್ನು ದಾಖಲಿಸಿದ್ದವು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಪ್ರದೇಶದಲ್ಲಿ ವಾಡಿಕೆಗಿಂತ ಎರಡು ಪಟ್ಟು ಮಳೆಯಾಗಿದ್ದರೆ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಕೊರತೆಯನ್ನು ಎದುರಿಸುತ್ತಿವೆ.

ಇನ್ನು, ಬೆಂಗಳೂರು ಬೀಳುವ ದಕ್ಷಿಣ ಒಳನಾಡಿನ ಕರ್ನಾಟಕ ಪ್ರದೇಶದಲ್ಲಿ ಜೂನ್ 1 ಮತ್ತು 24 ರ ನಡುವೆ ಸರಾಸರಿ 98 ಮಿಮೀ ಮಳೆಯಾಗಿದೆ, ಇದು ಶೇಕಡಾ 70 ಕ್ಕಿಂತ ಹೆಚ್ಚು ಎಂದು ವರದಿಯಾಗಿದೆ. ಅವಧಿಗೆ ಸಾಮಾನ್ಯ 57 ಮಿಮೀ ಮಳೆಯಾಗಿದೆ. ಬೆಂಗಳೂರು ನಗರವು 135.3 ಮಿಮೀ ಮಳೆಯನ್ನು ಪಡೆದಿದೆ. ಇದು ಈ ಅವಧಿಯಲ್ಲಿ ನಗರದ ಸರಾಸರಿ 64 ಮಿಮೀ ಮಳೆಗಿಂತ ಎರಡು ಪಟ್ಟು ಹೆಚ್ಚು ಎಂದು ವರದಿಯಾಗಿದೆ.

ರಾಜಧಾನಿ ಬೆಂಗಳೂರಿಗೆ ಹೋಲಿಸಿದರೆ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಸರಾಸರಿ ಶೇಕಡ 42ರಷ್ಟು ಮಳೆ ಕೊರತೆಯನ್ನು ದಾಖಲಿಸಿವೆ. ಸಾಮಾನ್ಯ 266 ಮಿಮೀ ಮಳೆಯಾಗಬೇಕಿದ್ದ ಪ್ರದೇಶದಲ್ಲಿ ಕೇವಲ 154 ಮಿಮೀ ಮಳೆಯಾಗಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಲ್ಲಿ ಶೇ.31ರಷ್ಟು ಕೊರತೆಯಿದ್ದು, ಈ ಪ್ರದೇಶದಲ್ಲಿ ವಾಡಿಕೆ ಮಳೆ 619 ಮಿ.ಮೀ ಆಗಿದ್ದರೇ, ಈ ಬಾರಿ 429 ಮಿ.ಮೀ. ಮಳೆಯಾಗಿದೆ.

IMD issued Orange alert for Bengaluru surrounding districts

ಕರಾವಳಿ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್

ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗಕ್ಕೂ ಐಎಂಡಿ ಆರೆಂಜ್​ ಅಲರ್ಟ್​ ನೀಡಿದೆ.

ಇನ್ನು, ಮುಂಗಾರು ಆರಂಭಗೊಂಡಿರುವುದರಿಂದ ರಾಜ್ಯದ ಜಲಾಶಯಗಳಲ್ಲಿ ಕಳೆದ ವರ್ಷ ಇದೇ ಅವಧಿಯಲ್ಲಿ ಇದ್ದ ನೀರಿಗಿಂತ ಹೆಚ್ಚಿನ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟಿನಲ್ಲಿ 9.81 ಟಿಎಂಸಿ ನೀರಿತ್ತು ಈ ವರ್ಷ 14.59 ಟಿಎಂಸಿ (ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ) ನೀರಿದೆ. ಇದೇ ರೀತಿ ಹಲವು ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗಿದ್ದು ನೀರು ಸಂಗ್ರಹ ಹೆಚ್ಚಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+