ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 10ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 07 : ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Recommended Video

Coronaಗೆ ಜನರು ಹಿಂದೆ ಕೊಡುತ್ತಿದ್ದ ಮರ್ಯಾದೆ ಈಗ ಕೊಡುತ್ತಿಲ್ಲ | Oneindia Kannada

ಹವಾಮಾನ ಇಲಾಖೆ ಸೆಪ್ಟೆಂಬರ್ 10ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ಸೋಮವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆ ಅಬ್ಬರ, ಎಷ್ಟಾಗಿದೆ ಅಣೆಕಟ್ಟಿನ ನೀರಿನ ಪ್ರಮಾಣ ರಾಜ್ಯದಲ್ಲಿ ಮಳೆ ಅಬ್ಬರ, ಎಷ್ಟಾಗಿದೆ ಅಣೆಕಟ್ಟಿನ ನೀರಿನ ಪ್ರಮಾಣ

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 10ರ ತನಕ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚಿನ ಮಳೆಯಾಗಲಿದೆ.

ಕೊಡಗು ಜಿಲ್ಲೆ ತಾಲೂಕುವಾರು ಎಷ್ಟು ಮಳೆ ಸುರಿದಿದೆ? ಕೊಡಗು ಜಿಲ್ಲೆ ತಾಲೂಕುವಾರು ಎಷ್ಟು ಮಳೆ ಸುರಿದಿದೆ?

Rain

ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 6 ರಿಂದ 8ರ ತನಕ ಚಾಮರಾಜನಗರ, ಮೈಸೂರು, ತುಮಕೂರು, ದಾವಣಗೆರೆ, ಚಿತ್ರದುರ್ಗದಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿತ್ರದುರ್ಗ; ಮಳೆ ನೀರಿನಲ್ಲಿ ಕೊಚ್ಚಿ ಹೋದ ಈರುಳ್ಳಿ ಬೆಳೆಚಿತ್ರದುರ್ಗ; ಮಳೆ ನೀರಿನಲ್ಲಿ ಕೊಚ್ಚಿ ಹೋದ ಈರುಳ್ಳಿ ಬೆಳೆ

ಶಿವಮೊಗ್ಗ ನಗರದಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದೆ. ಹೊಸಮನೆಯ ರಾಜಕಾಲುವೆ ತುಂಬಿ ಹರಿದಿದೆ. ಹಲವು ಪ್ರದೇಶಗಳಲ್ಲಿ ನೀರು ಮನೆಗೆ ನುಗ್ಗುವ ಭೀತಿಯಲ್ಲಿ ಜನರು ರಾತ್ರಿ ಕಳೆದಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ 8, ಬ್ರಹ್ಮವಾರ ಮತ್ತು ಆಗುಂಬೆಯಲ್ಲಿ 4, ಕಾರ್ಕಳ ಮತ್ತು ಬೆಳ್ತಂಗಡಿಯಲ್ಲಿ 3, ಪುತ್ತೂರು ಮತ್ತು ಸುಳ್ಯ, ಮೂಡುಬಿದಿರೆಯಲ್ಲಿ ತಲಾ 1 ಸೆಂ. ಮೀ. ಮಳೆಯಾಗಿದೆ.

English summary
The India Meteorological Department (IMD) has issued heavy rain fall alert in various districts of Karnataka till September 10, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X