Karnataka Rains: ಚಂಡಮಾರುತ ಪ್ರಸರಣ: ಮೇ 6 ವರೆಗೆ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ ಹಲವೆಡೆ ತಾಪಮಾನದ ತೀವ್ರತೆ ಹೆಚ್ಚಾದ ಬೆನ್ನಲ್ಲೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಚಂಡಮಾರುತದ ಪ್ರಸರಣ ಉಂಟಾಗಿದೆ. ಇದರ ಪ್ರಭಾವದಿಂದ ರಾಜ್ಯ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೇ 6 ಭರ್ಜರಿ ಮಳೆ ಆಗುವ ನಿರೀಕ್ಷೆಗಳು ಇವೆ. ತಾಪಮಾನದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

ಚಂಡಮಾರುತದ ಪ್ರಸರಣದ ಅಪ್ಡೇಟ್ ಮಾಹಿತಿ ನೋಡುವುದಾದರೆ ವಾಯುವ್ಯ ಮಧ್ಯಪ್ರದೇಶ ಮತ್ತು ನೆರೆಹೊರೆಗಳ ಪ್ರದೇಶ, ತಮಿಳುನಾಡಿನ ದಕ್ಷಿಣ ಭಾಗ, ಮರಾಠವಾಡ, ಕರ್ನಾಟಕದ ಒಳನಾಡಿಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಉಂಟಾಗಿರುವ ಚಂಡಮಾರುತದ ಪರಿಚಲನೆಯ ಪ್ರಭಾವ ಬೀರಿದೆ.

IMD Issues Heavy Rain Alert in These Districts of Karnataka until May 6th Weather Forecast

ಇದಷ್ಟೇ ಅಲ್ಲದೇ ಲಕ್ಷದ್ವೀಪ ಹಾಗೂ ಅದರ ಆಸುಪಾಸಿನಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಮೇಲೆ ಚಂಡಮಾರುತ ಪ್ರಸರಣವಿದೆ. ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಸಹ ತೀವ್ರ ಬಿರುಗಾಳಿ ಬೀಸುತ್ತಿದೆ. ಇದರ ಪ್ರಭಾವದಿಂದ ದಕ್ಷಿಣ ರಾಜ್ಯಗಳ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ.

ಮುಂದಿನ ಐದಾರು ದಿನಗಳ ಪೈಕಿ ಮುಂದಿನ 03 ದಿನ (ಮೇ 1-3) ಬೆಂಗಳೂರು ನಗರ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಬರಬಹುದು ಎನ್ನಲಾಗಿದೆ. ನಂತರ ಮೂರು ದಿನ ಭರ್ಜರಿ ಮಳೆ ಆರ್ಭಟ ಕಂಡು ಬರಲಿದೆ. ಗುಡುಗು ಮಿಂಚು ಸಹಿತ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಸುರಿಯಲಿದೆ ಎಂದು ಅಂದಾಜಿಸಲಾಗಿದೆ.

ದಕ್ಷಿಣ ಒಳನಾಡಿಗೆ ಭಾರೀ ಮಳೆ ಎಚ್ಚರಿಕೆ

ಮೇ 6ರವರೆಗೆ ಬೆಂಗಳೂರು ನಗರ ಸೇರಿದಂತೆ ಬೆಂಗಳುರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಮಂಡ್ಯ ಸೇರಿದಂತೆ ಈ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಆಗಲಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

IMD Issues Heavy Rain Alert in These Districts of Karnataka until May 6th Weather Forecast

ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಗದಗ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆಗಳಲ್ಲಿ ಆಗಾಗ ಲಘು ಮಳೆ ಬರುವ ಲಕ್ಷಣಗಳು ಇವೆ. ಉಳಿದಂತೆ ಈ ಭಾಗದಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡು, ಮಲೆನಾಡು ಭಾಗದಲ್ಲಿ ತಾಪಮಾನದಲ್ಲಿ ಆದ ಇಳಿಕೆ, ಬದಲಾವಣೆಯಂತೆ ಉತ್ತರ ಒಳನಾಡಿನಲ್ಲಿ ಆಗದು. ಇಲ್ಲಿ ಶುಷ್ಕ ವಾತಾವರಣ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ.

ಈ ಜಿಲ್ಲೆಯಲ್ಲಿ 41 ಡಿ.ಸೆ.ತಾಪಮಾನ

ಹವಾಮಾನ ಇಲಾಖೆ ಪ್ರಕಾರ, ರಾಜ್ಯದ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಉಳಿದಂತೆ ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹ ಗರಿಷ್ಠ ತಾಪಮಾನ ಕಂಡು ಬಂದಿದೆ. ಮಳೆ ಬೀಳುವ ಪ್ರದೇಶಗಳಲ್ಲಿ ಮುಂದಿನ ಒಂದೆರಡು ದಿನಗಳ ಕಾಲ ತಾಪಮಾನ ಕೊಂಚ ಇಳಿಕೆ ಆಗುವ ಸಂಭವವಿದೆ. ಅದರ ಹೊರತು ತಾಪಮಾನದಲ್ಲಿ ತೀವ್ರ ರೂಪದ ಬದಲಾವಣೆ ಇಲ್ಲ ಎಂದು ಮುನ್ಸೂಚನೆ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+