ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; ಕಡಿಮೆಯಾದ ಮಳೆ, ಉಷ್ಣಾಂಶದಲ್ಲಿ ಏರಿಕೆ

|
Google Oneindia Kannada News

ಬೆಂಗಳೂರು, ನವೆಂಬರ್ 04 : ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. 30 ರಿಂದ 40 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗುಡುಗು, ಸಿಡಿಲಿನ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆ ನವೆಂಬರ್ 4 ಮತ್ತು 5 ರಂದು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹೇಳಿದೆ. ಗುಡುಗು ಮತ್ತು ಸಿಡಿಲು ಮಾತ್ರ ಇರಲಿದ್ದು, ಮಳೆ ಇರುವುದಿಲ್ಲ.

ಕರ್ನಾಟಕ; ನವೆಂಬರ್‌ನಲ್ಲಿ ಮಳೆ ಕಡಿಮೆಯಾಗಲಿದೆಕರ್ನಾಟಕ; ನವೆಂಬರ್‌ನಲ್ಲಿ ಮಳೆ ಕಡಿಮೆಯಾಗಲಿದೆ

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ನವೆಂಬರ್ 6ರ ತನಕ ಕಡಿಮೆ ಇರಲಿದೆ. ಕಳೆದ ಮೂರು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಉಷ್ಣಾಂಶ ಏರಿಕೆಯಾಗಿದೆ.

 ಮೈಕೊಡವಿಕೊಳ್ಳುತ್ತಿದ್ದ ಮಲೆನಾಡಿನಲ್ಲಿ ಮತ್ತೆ ಮಳೆ; ಎಲ್ಲೆಲ್ಲಿ ಏನಾಗಿದೆ? ಮೈಕೊಡವಿಕೊಳ್ಳುತ್ತಿದ್ದ ಮಲೆನಾಡಿನಲ್ಲಿ ಮತ್ತೆ ಮಳೆ; ಎಲ್ಲೆಲ್ಲಿ ಏನಾಗಿದೆ?

rain

ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಭಾನುವಾರ 1 ಸೆಂ.ಮೀ. ಮಳೆಯಾಗಿದೆ. ಬೀದರ್‌ನಲ್ಲಿ ನವೆಂಬರ್ 3ರಂದು 17.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.

ಕರ್ನಾಟಕ; 49 ಬರ ಪೀಡಿತ ತಾಲೂಕುಗಳ ಪಟ್ಟಿಕರ್ನಾಟಕ; 49 ಬರ ಪೀಡಿತ ತಾಲೂಕುಗಳ ಪಟ್ಟಿ

ಈ ಬಾರಿಯ ಮುಂಗಾರು ಋತುವಿನಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ 23ರಷ್ಟು ಹೆಚ್ಚು ಮಳೆಯಾಗಿದೆ. ಆಗಸ್ಟ್ ತಿಂಗಳಿನಲ್ಲಿ 10 ದಿನ ಸುರಿದ ಮಳೆಗೆ ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಅಕ್ಟೋಬರ್ ಅಂತ್ಯದ ತನಕವೂ ಮಳೆ ಮುಂದುವರೆದಿತ್ತು.

ಕರ್ನಾಟಕದಲ್ಲಿ ಹೆಚ್ಚು ಮಳೆಯಾದರೂ 18 ಜಿಲ್ಲೆಗಳ 49 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಆಗಸ್ಟ್ 30ರ ತನಕ ಸುರಿದ ಮಳೆಯ ಆಧಾರದ ಮೇಲೆ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದೆ.

English summary
The India Meteorological Department (IMD) issued thunder and lightning alert in various districts of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X