ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ.8ರ ತನಕ 23 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 06 : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರಿಂದ 8ರ ತನಕ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 23 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಆಗಸ್ಟ್ ಕೊನೆಯ ವಾರದಿಂದಲೇ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದೆ. ವಿವಿಧ ಜಿಲ್ಲೆಗಳಲ್ಲಿ ಆಗಾಗ ಭಾರಿ ಮಳೆಯಾಗುತ್ತಿದೆ. ಕರಾಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8ರ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಚಿತ್ರದುರ್ಗ; ಮಳೆ ನೀರಿನಲ್ಲಿ ಕೊಚ್ಚಿ ಹೋದ ಈರುಳ್ಳಿ ಬೆಳೆಚಿತ್ರದುರ್ಗ; ಮಳೆ ನೀರಿನಲ್ಲಿ ಕೊಚ್ಚಿ ಹೋದ ಈರುಳ್ಳಿ ಬೆಳೆ

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಹೇಳಿದೆ.

ಶಿವಮೊಗ್ಗದಲ್ಲಿ ಮಳೆ ಪ್ರಮಾಣ; ಜಲಾಶಯಗಳ ಇಂದಿನ ಮಟ್ಟ ಎಷ್ಟಿದೆ?ಶಿವಮೊಗ್ಗದಲ್ಲಿ ಮಳೆ ಪ್ರಮಾಣ; ಜಲಾಶಯಗಳ ಇಂದಿನ ಮಟ್ಟ ಎಷ್ಟಿದೆ?

IMD

ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ದಾವಣಗೆರೆ ತಾಲೂಕುವಾರು ಮಳೆ ಪ್ರಮಾಣ, ಲಕ್ಷಾಂತರ ಆಸ್ತಿ ನಷ್ಟದಾವಣಗೆರೆ ತಾಲೂಕುವಾರು ಮಳೆ ಪ್ರಮಾಣ, ಲಕ್ಷಾಂತರ ಆಸ್ತಿ ನಷ್ಟ

ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ 6 ಸೆಂ. ಮೀ. ಮಳೆಯಾಗಿದೆ. ಹಾಸನದಲ್ಲಿ 5, ಹೊಸನಗರ ಮತ್ತು ಚಾಮರಾಜನಗರದಲ್ಲಿ 4 ಸೆಂ. ಮೀ. ಮಳೆಯಾಗಿದೆ.

ಕಾರವಾರ, ಭಾಗಮಂಡಲ, ಶಿಕಾರಿಪುರದಲ್ಲಿ 2 ಸೆಂ. ಮೀ., ಬೆಳ್ತಂಗಡಿ, ಸುಳ್ಯ, ಧಾರವಾಡ, ತೀರ್ಥಹಳ್ಳಿಯಲ್ಲಿ 1 ಸೆಂ. ಮೀ. ಮಳೆಯಾಗಿದೆ.

English summary
The India Meteorological Department (IMD) has issued yellow alert for 23 districts in Karnataka. District may witnessed for heavy rain till September 8, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X