Karnataka rain: ಶುಕ್ರವಾರದವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹಳದಿ ಅಲರ್ಟ್
ಬೆಂಗಳೂರು, ಜುಲೈ. 17: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕರಾವಳಿ ಪ್ರದೇಶಗಳಿಗೆ ಈ ವಾರ ಶುಕ್ರವಾರದವರೆಗೆ ಭಾರತೀಯ ಹವಾಮಾನ ಇಲಾಖೆ (IMD) "ಹಳದಿ" ಎಚ್ಚರಿಕೆಯನ್ನು ನೀಡಿದೆ. ಐದು ದಿನಗಳು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
ಭಾನುವಾರದಿಂದ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಕುಂದಾಪುರದಲ್ಲಿ ಶನಿವಾರದವರೆಗೆ ಏಳು ಸೆಂಟಿಮೀಟರ್ (ಸೆಂ) ಮಳೆಯಾಗಿದ್ದರೆ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಕೋಟಾ ಮತ್ತು ಉಪ್ಪಿನಂಗಡಿಯಲ್ಲಿ ತಲಾ ನಾಲ್ಕು ಸೆಂಟಿಮೀಟರ್, ಮಂಗಳೂರು, ಮಾಣಿ ಮತ್ತು ಉಡುಪಿಯಲ್ಲಿ ತಲಾ ಮೂರು ಸೆಂಟಿಮೀಟರ್ ಮಳೆಯಾಗಿದೆ ಎಂದು ಸಂಸ್ಥೆ ತಿಳಿಸಿದೆ.

ವಿದ್ಯುದಾಘಾತ, ಚರಂಡಿ ಮತ್ತು ಮೋರಿಗಳಲ್ಲಿ ಕೊಚ್ಚಿಹೋಗುವುದು ಮತ್ತು ಭೂಕುಸಿತ ಮತ್ತು ಮಣ್ಣು ಕುಸಿತದ ಘಟನೆಗಳು ಸೇರಿದಂತೆ ಮಳೆ ಸಂಬಂಧಿತ ಘಟನೆಗಳಲ್ಲಿ ದಕ್ಷಿಣ ರಾಜ್ಯದಲ್ಲಿ ಜುಲೈ ಆರಂಭದಿಂದ ಐದು ಜನರು ಸಾವನ್ನಪ್ಪಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದ್ದು, ಪ್ರವಾಹ, ಜಲಾವೃತ ಮತ್ತು ಪ್ರವಾಹದಿಂದ ಜನಜೀವನ ಅಸ್ತವ್ಯಸ್ತತಗೊಂಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಬೆಳಗಾವಿ, ವಿಜಯಪುರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ.

ಇತ್ತ, ರಾಜ್ಯದ ಹಲವು ಭಾಗಗಳು ಭಾರೀ ಮಳೆಗೆ ಸಾಕ್ಷಿಯಾಗಿದ್ದರೂ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ದಾಖಲಾಗಿದೆ. ಜೂನ್ 1 ಮತ್ತು ಜುಲೈ 16 ರ ನಡುವಿನ ವಿಶ್ಲೇಷಣೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ 62% ನಷ್ಟು "ದೊಡ್ಡ ಕೊರತೆಯನ್ನು" ಕೇಂದ್ರವು ಕಂಡಿದೆ. ಆದರೆ 20 ಇತರ ಜಿಲ್ಲೆಗಳು 20 ರಿಂದ 59% ವರೆಗೆ ಮಳೆ ಕೊರತೆಯನ್ನು ಕಂಡಿದೆ. ಬೆಂಗಳೂರು ಗ್ರಾಮಾಂತರ ಮತ್ತು ನಗರ ಸೇರಿದಂತೆ 10 ಜಿಲ್ಲೆಗಳಲ್ಲಿ "ಸಾಮಾನ್ಯ" ಮಳೆಯಾಗಿದೆ.












Click it and Unblock the Notifications