Rain: ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು, ಮಾರ್ಚ್ 23: ಅಂಡಮಾನ್‌ ಮತ್ತು ನಿಕೋಬಾರ್ ಸಮುದ್ರದಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದರಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಕಳೆದ ಮೂರು ದಿನಗಳಿಂದ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಈ ಜಿಲ್ಲೆಗಳಲ್ಲಿ ಇಂದು ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ.

Recommended Video

      ಅಸಾನಿ ಚಂಡಮಾರುತದಿಂದ ಬೆಂಗಳೂರಿನ ವೆದರ್ ಮೇಲಾಗೋ ಎಫೆಕ್ಟ್ ಏನು? | Oneindia Kannada

      ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಆಳವಾದ ಖಿನ್ನತೆಯ ಉಪಸ್ಥಿತಿಯು ಈ ಹವಾಮಾನ ಪರಿಸ್ಥಿತಿಗಳಿಗೆ ಕಾರಣ ಎನ್ನಲಾಗಿದೆ. ಗುಡುಗು ಸಹಿತ ಚಂಡಮಾರುತದ ಕಾರಣದಿಂದ ಮಾರ್ಚ್ 24ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದಾದ್ಯಂತ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಿಸಿದೆ.

      IMD Issues Yellow Alert In Coastal Karnataka And Malnad Region including Bengaluru for Next 48 hours

      ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ 24ರ ತನಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

      ಅದೇ ರೀತಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಇಂದು (ಬುಧವಾರ) ಮತ್ತು ಮೈಸೂರು, ಮಂಡ್ಯ, ರಾಮನಗರದಲ್ಲಿ ನಾಳೆ (ಮಾರ್ಚ್ 24) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

      ಬೆಂಗಳೂರಿನಲ್ಲಿ ಸುರಿಯುತ್ತಿರುವ ತುಂತುರು ಮಳೆಯಿಂದ ಸತತ ಬಿಸಿಲಿನಿಂದ ಉದ್ಯಾನನಗರಿ ತಂಪಾಗಿದೆ. ಕರ್ನಾಟಕದಲ್ಲಿ ಮಾರ್ಚ್ ತಿಂಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಮಾರ್ಚ್​ ತಿಂಗಳಲ್ಲಿ ರಾಜ್ಯಗಳಲ್ಲಿ ಕೇವಲ 3.6 ಮಿಮೀ ಮಳೆಯಾಗಿದೆ.

      ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಪ್ರಸ್ತುತ ಮಳೆಯ ಚಟುವಟಿಕೆಯು ಬೆಂಗಳೂರು ಮತ್ತು ನೈಋತ್ಯ ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ 2 ದಿನಗಳವರೆಗೆ ಅಂದರೆ ಮಾರ್ಚ್ 24ರವರೆಗೆ ಮುಂದುವರಿಯುತ್ತದೆ. ಈ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚುಗಳ ಸಹಿತ ಚದುರಿದ ಮಳೆಯಾಗಲಿದೆ. ಮುಂದಿನ 4 ದಿನಗಳ ಕಾಲ ಇಡೀ ದಕ್ಷಿಣ ಭಾರತದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

      IMD Issues Yellow Alert In Coastal Karnataka And Malnad Region including Bengaluru for Next 48 hours

      ಗುರುವಾರದವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಆರ್ದ್ರ ವಾತಾವರಣವಿದ್ದು, ಉತ್ತರ ಕರ್ನಾಟಕ ಜಿಲ್ಲೆಗಳಾದ ಗದಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ರಾಯಚೂರು ಗುರುವಾರ ಮತ್ತು ಶುಕ್ರವಾರ ಮಳೆಯಾಗಲಿದೆ.

      ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ಕೋಲಾರದಲ್ಲಿಯೂ ಮಳೆಯಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+