ಮಳೆ ಮುನ್ಸೂಚನೆ; ಕರಾವಳಿಯ 3 ಜಿಲ್ಲೆಗಳಲ್ಲಿ Yellow Alert
ಬೆಂಗಳೂರು, ಅಕ್ಟೋಬರ್ 15 : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ Yellow Alert ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ನೈಋತ್ಯ ಮುಂಗಾರು ವೇಗವಾಗಿ ಬೀಸುತ್ತಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂಗಾರು ಅಂತ್ಯ; ಕರ್ನಾಟಕದಲ್ಲಿ ಶೇ 23ರಷ್ಟು ಅಧಿಕ ಮಳೆ
Recommended Video
ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ದಕ್ಷಿಣ ಒಳನಾಡಿನಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗದಗ, ಹಾವೇರಿ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ತೂಫಾನಿಗೆ ತತ್ತರಿಸಿದ ಜಪಾನ್: ಭಾರಿ ಮಳೆ ಗಾಳಿಯಿಂದ ಅನಾಹುತ
ನೈಋತ್ಯ ಮುಂಗಾರು ವೇಗವಾಗಿ ಬೀಸುತ್ತಿದೆ. ಆದ್ದರಿಂದ, ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ. ಶನಿವಾರ, ಭಾನುವಾರ ಮತ್ತು ಸೋಮವಾರವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.
ಮಳೆ ಬಂದರೆ ಶವರ್ ಆಗುತ್ತದೆ ಗುಡೇನಕಟ್ಟಿ ಮಾರ್ಗದ ಈ ಏಕೈಕ ಬಸ್!
ಸೋಮವಾರ ಹಾಸನದಲ್ಲಿ 8, ಸಾಗರದಲ್ಲಿ 7, ಚಿಂಚೋಳಿಯಲ್ಲಿ 6, ಧರ್ಮಸ್ಥಳದಲ್ಲಿ 5, ತಾಳಗುಪ್ಪ ಮತ್ತು ಕೆ. ಆರ್. ಪೇಟೆಯಲ್ಲಿ 3 ಸೆಂ. ಮೀ. ಮಳೆಯಾಗಿದೆ.
ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ದೇಶದಲ್ಲಿ ಮುಂಗಾರು ಚಾಲ್ತಿಯಲ್ಲಿ ಇರುತ್ತದೆ. ಈ ವರ್ಷದ ಮುಂಗಾರು ಋತುವಿನಲ್ಲಿ ಕರ್ನಾಟಕದಲ್ಲಿ ಶೇ 23ರಷ್ಟು ಹೆಚ್ಚು ಮಳೆಯಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದ್ದು ಜನರು ಆತಂಕಗೊಂಡಿದ್ದಾರೆ. ಈಗಾಗಲೇ ಮಳೆ, ಪ್ರವಾಹದಿಂದ ಹಲವು ಜಿಲ್ಲೆಗಳಲ್ಲಿ ರೈತರಿಗೆ ಬೆಳೆ ನಷ್ಟವಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಮುಂದುವರೆದಿದೆ.