ಕರ್ನಾಟಕಕ್ಕೆ ಮತ್ತೆ ಮಳೆ ಆತಂಕ: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ
ಬೆಂಗಳೂರು ಜುಲೈ 28: ಕರ್ನಾಟಕದಲ್ಲಿ ಮತ್ತೆ ಮುಂಗಾರು ಆರ್ಭಟಿಸವು ಮನ್ಸೂಚನೆ ನೀಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳ ಜನರಲ್ಲಿ ಮಳೆ ಆತಂಕ ಎದುರಾಗಿದೆ.
ಹವಾಮಾನಗಳಲ್ಲಿ ಉಂಟಾದ ವೈಪರಿತ್ಯಗಳ ಪರಿಣಾಮವಾಗಿ ಮುಂದಿ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿಯಿಂದ ಅತೀ ಬಾರಿ ಮಳೆ ಬೀಳಲಿದೆ. ರಾಜ್ಯದ ಇನ್ನಿತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆ ಆಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಜೂನ್ ಅಂತ್ಯಕ್ಕೆ ಮುಂಗಾರಿನ ಅಬ್ಬರ ಆರಂಭವಾಗಿ ಸುಮಾರು 15-20ದಿನ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಾದ್ಯಂತ ಧಾರವಾಕಾವಾಗಿ ಸುರಿದಿತ್ತು. ಪ್ರವಾಹ, ನೆರೆ ಭೀತಿ ಸೃಷ್ಟಿಸಿ ಕೆಲವು ದಿನಗಳಿಂದ ಮಳೆ ಕ್ಷಿಣಿಸಿತ್ತು. ಇದೀಗ ಮತ್ತೆ ಮುಂದಿನ ಐದು ದಿನ (ಆಗಸ್ಟ್ 2ರವರೆಗೆ) ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕರಾವಳಿ-ಮಲೆನಾಡಿಗೆ ಅತಿ ಭಾರಿ ಮಳೆ
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 29ರಂದು ಒಂದು ಅತೀ ಭಾರಿ ಮಳೆ ಸುರಿಯಲಿದ್ದು, 'ಆರೆಂಜ್ ಅಲರ್ಟ್' ನೀಡಲಾಗಿದೆ. ಈ ಭಾಗದಲ್ಲಿ ಈ ವೇಳೆ 11.5ಸೆಂ.ಮೀ.ನಿಂದ 20ಸೆಂ.ಮೀ.ಮಷ್ಟು ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ.

ವಿವಿಧ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ
ಜುಲೈ 29ರ ನಂತರ ದಿನಗಳಲ್ಲಿ ಮಲೆನಾಡಿನ ಮಡಿಕೇರಿ, ಹಾಸನ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಜೋರು ಮಳೆ ಆಗುವ ನಿರೀಕ್ಷೆ ಇದು ನಾಲ್ಕು ದಿನ (ಆಗಸ್ಟ್ 2) 'ಯೆಲ್ಲೋ ಅಲರ್ಟ್' ಮತ್ತುಕರಾವಳಿ ಮೂರು ಜಿಲ್ಲೆಗಳಿಗೆ ಜುಲೈ 30ರಂದು ಒಂದು 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಈ ವೇಳೆ ಕರಾವಳಿಯಲ್ಲಿ ಗಾಳಿಯ ವೇಗೆ ಹೆಚ್ಚಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ-ಉತ್ತರ ಒಳನಾಡಿಗೂ ಭಾರಿ ಮಳೆ
ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಬಹುತೇಕ ಈಭಾಗದ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆ ನಿರೀಕ್ಷೆ ಇದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ಆಗಸ್ಟ್ 2ರವರೆಗೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಜುಲೈ 29ರಂದು 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿಗೆ ಉತ್ತಮ ಮಳೆ ನಿರೀಕ್ಷೆ ಇದೆ ಎನ್ನಲಾಗಿದೆ.

ಹವಾಮಾನ ವೈಪರಿತ್ಯದಿಂದ ಮತ್ತೆ ಮಳೆ ಆತಂಕ
ಉತ್ತರ ಒಳನಾಡಿನಿಂದ ಕನ್ಯಾಕುಮಾರಿವರೆಗೆ ಭೂಮಿ ಮೇಲ್ಮೈನಲ್ಲಿ ಗಾಳಿ ತೀವ್ರಗೆ (ಸ್ಟ್ರಫ್) ಹೆಚ್ಚಾಗಿದ್ದು, ಇದು ಸಮುದ್ರ ಮಟ್ಟದಿಂದ ಸುಮಾರು 900ಮೀಟರ್ ಎದತ್ತದಲ್ಲಿದೆ. ಅಲ್ಲದೇ ತಮಿಳುನಾಡು ರಾಜ್ಯದ ಒಳನಾಡಿನ ಭಾಗದಲ್ಲಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ ತೀವ್ರಗೊಂಡಿದೆ. ಇದು ಸಮುದ್ರ ಮಟ್ಟದಿಂದ 1.5ಕಿ.ಮೀ.ಇರಲಿದೆ.
ಇವುಗಳ ಪ್ರಭಾವ ಮುಂದಿನ ಐದು ದಿನಗಳವರೆಗೆ ಇರಲಿದೆ. ಅಲ್ಲಿವರೆಗೆ ರಾಜ್ಯದ ಅನೇಕ ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಮತ್ತು ಅತೀ ಭಾರಿ ಮಳೆ ನಿರೀಕ್ಷಿಸಬಹುದಾಗಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಅಧಿಕಾರಿ ಮತ್ತು ವಿಜ್ಞಾನಿ ಪ್ರಸಾದ್ ಅವರು ಮಾಹಿತಿ ನೀಡಿದರು.
ಈಗಾಗಲೇ ಕಳೆದ ಬಾರಿ ಬಂದ ಮಳೆಯಿಂದಾಗಿ ಕರ್ನಾಟಕ ಕರಾವಳಿ ಹಾಗೂ ಮಲೆನಾಡಿ ಜಿಲ್ಲೆಗಳ ಅಕ್ಷರಶಃ ತತ್ತರಿಸಿದ್ದವು. ಕೆಲವು ಪ್ರದೇಶಗಳು ದ್ವೀಪದಂತಾಗಿದ್ದವು. ರಸ್ತೆ, ಗುಡ್ಡಗಳು, ಮನೆ ಹಾಗೂ ಸೇತುವೆಗಳು ಕುಸಿದು ಜನ ಜೀವನವೇ ಅಸ್ತವೆಸ್ತವಾಗಿತ್ತು. ಉತ್ತರ ಒಳನಾಡಿನ ನದಿ ತೀರದ ಪ್ರದೇಶ ಗ್ರಾಮವಾಸಿಗಳು ನೆರೆ ಭೀತಿ ಅನುಭವಿಸಿದ್ದರು. ಈ ಭಾರಿಯ ಮಳೆ ಮನ್ಸೂಚನೆ ಮತ್ತೆ ಆತಂಕ ಮೂಡಿಸಿದೆ.
Recommended Video
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ












Click it and Unblock the Notifications