Rain Alert: ಕರ್ನಾಟಕದಲ್ಲಿ ತಗ್ಗಿದ ಮುಂಗಾರು! ಈ ಜಿಲ್ಲೆಗಳಷ್ಟೇ ಭಾರೀ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್
Karnataka Rains: ಕರ್ನಾಟಕದಾದ್ಯಂತ ಕವಿದಿದ್ದ ಮಬ್ಬು ಕೊನೆಯಾಗಲಿದೆ. ಇಂದಿನಿಂದ ರಾಜ್ಯಾದ್ಯಂತ ಬಿಸಿಲಿನ ದರ್ಶನವಾಗಲಿದೆ. ಕಳೆದ ಕೆಲವು ವಾರಗಳಿಂದ ಸುರಿಯುತ್ತಿದ್ದ ಹಗುರ, ಸಾಧಾರಣ ಮತ್ತು ಭಾರೀ ಮಳೆಯ ವಾತಾವರಣ ಇಳಿಕೆಯಾಗಿದೆ. ಚಂಡಮಾರುತ ಪ್ರಸರಣ ತಗ್ಗಿದ್ದರಿಂದ ಹವಾಮಾನದ ಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ. ರಾಜ್ಯದ ಒಂದೆರಡು ಜಿಲ್ಲೆಗಳಿಗೆ ಮಾತ್ರವೇ ಸಾಧಾರಣದಿಂದ ಭಾರೀ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸುಮಾರು ಒಂದು ತಿಂಗಳಿನಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂಗಾರು ಮಳೆ ಅಬ್ಬರಿಸಿತ್ತು. ವಾಯುಭಾರ ಕುಸಿತ, ಹವಾಮಾನದ ತೀವ್ರ ಸ್ವರೂಪದ ಬದಲಾವಣೆಯಿಂದ ರಾಜ್ಯದೆಲ್ಲಡೆ ಮಳೆ ಹಾಗೂ ವ್ಯಾಪಕ ಚಳಿ ಉಂಟಾಗಿತ್ತು. ಇದೀಗ ಮಳೆ ತಗ್ಗಿದೆ. ಜುಲೈ 30 ರವರೆಗೆ ನಾಲ್ಕು ಜಿಲ್ಲೆಗಳಿಗೆ ಭಾರೀ ಮಳೆ ಆಗಲಿದೆ. ಗರಿಷ್ಠ 115 ಮಿಲಿ ಮೀಟರ್ ಮಳೆ ದಾಖಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಹೀಗಾಗಿ ಇಂದಿನಿಂದ ಎರಡು ದಿನ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ನಗರ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಸೇರಿದಂತೆ ಕೆಲವು ಕಡೆಗಳಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ. ಉಳಿದೆಡೆ ಮಳೆ ಸಂಪೂರ್ಣ ಕಡಿಮೆಯಾಗಿ ಬಿಸಿಲಿನ ದರ್ಶನವಾಗಲಿದೆ. ಚಳಿ ಕಡಿಮೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಸಾಮಾನ್ಯ ಮಳೆ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಪ್ರದೇಶಗಳಾದ ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರು ಹವಾಮಾನ ಮುನ್ಸೂಚನೆ
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ಏರಿಕೆ ಆಗಲಿದೆ. ಎರಡು ವಾರಗಳಿಂದ ಇದ್ದ ಚಳಿಗೆ ಮುಕ್ತಿ ಸಿಗಲಿದೆ. ಕೆಲವೆಡೆ ಸೋನೆ ಮಳೆ ಬಂದರೆ ಬರಬಹುದು. ಇನ್ನೂ ಮೂರು ದಿನಗಳ ಕಾಲ ಕೊಂಚ ಚಳಿ ದಾಖಲಾಗಬಹದು. ಇಷ್ಟು ಬಿಟ್ಟರೆ ಭಾರೀ ಮಳೆ ಬರುವ ಸೂಚನೆ, ಲಕ್ಷಣಗಳು ಸದ್ಯಕ್ಕೆ ಇಲ್ಲ. ನಗರದಲ್ಲಿ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ವರೆಗೂ ತಾಪಮಾನ ದಾಖಲಾಗಲಿದೆ ಎಂದು ರಾಜ್ಯ ಹವಾಮಾನ ಕೇಂದ್ರದ ಮಂಗಳವಾರದ ಮುನ್ಸೂಚನೆ ತಿಳಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ











Click it and Unblock the Notifications