Karnataka weather: ರಾಜ್ಯದಲ್ಲಿ ಚಳಿ ಮುಂದುವರಿಯುವ ಸಾಧ್ಯತೆ, ಮಳೆ ಮುನ್ಸೂಚನೆ ಇದಿಯೇ?
ಬೆಂಗಳೂರು, ಜನವರಿ 12: ಕರ್ನಾಟಕ ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿದಿದ್ದ ಮಳೆ ಈಗ ತುಸು ಬಿಡುವು ನೀಡಿದೆ. ರಾಜ್ಯದ ವಿವಿಧೆಡೆ ಅಧಿಕ ಚಳಿ ಮುಂದುವರೆಯುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಉತ್ತರ ಒಳನಾಡಿನಲ್ಲಿ ಮತ್ತೆ ಮೈ ಕೊರೆಯುವ ಚಳಿ ಉಂಟಾಗುವ ಸಾಧ್ಯತೆ ಇದೆ. ಯಾವ ಭಾಗಕ್ಕೆ ಏನೆಲ್ಲ ಮುನ್ಸೂಚನೆ ಇದೆ ಎಂಬ ಮಾಹಿತಿ ಇಲ್ಲಿದೆ.
ಹಲವು ದಿನಗಳಿಂದ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಿತ್ತು. ಇದರೊಂದಿಗೆ ಮೆಲನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಕೊಡಗು ಹಾಗೂ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಲ್ಲಿ ಆಗಾಗ ಮಳೆ ದಾಖಲಾಗಿತ್ತು.

ಈ ಪ್ರದೇಶಗಳಲ್ಲಿ ಇದೀಗ ಮತ್ತೆ ತೀವ್ರ ಚಳಿ ಸೃಷ್ಟಿಯಾಗುವ ಸಾಧ್ಯತೆಗಳು ಕಂಡು ಬಂದಿವೆ. ಉತ್ತರ ಒಳನಾಡಿನ ಭಾಗದ ವಿಜಯಪುರ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತೆ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಇದರೊಂದಿಗೆ ಧಾರವಾಡದಲ್ಲಿ 13.6 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆ 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಒಳನಾಡಿನಲ್ಲಿ ಚಳಿ, ಶುಷ್ಕ ವಾತಾವರಣ
ಈ ಭಾಗದ ಉಳಿದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಕೊಪ್ಪಳ, ಕಲಬುರಗಿ ಸೇರಿದಂತೆ ಮುಂತಾದೆಡೆ ಬೆಳಗ್ಗೆ ದಟ್ಟ ಮಂಜು, ಮೋಡ ಮುಸುಕಿನ ವಾತಾವರಣ ಕಂಡು ಬರಲಿದೆ. ಮಧ್ಯಾಹ್ನ ಗರಿಷ್ಠ ತಾಪಮಾನ ಮತ್ತು ಶುಷ್ಕ ವಾತಾವರಣ ಕಂಡು ಬರಲಿದೆ.
ಕರ್ನಾಟಕದ ಬಹುತೇಕ ಭಾಗದ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಚಳಿ, ಶುಷ್ಕ ವಾತಾವರಣ ಮುಂದುವರಿಯಲಿದೆ. ಒಂದೆರಡು ಕಡೆ ಸೋನೆ ಮಳೆ, ತುಂತುರು ಮಳೆ ಆಗಬಹುದು. ಇದರ ಹೊರತು ಯಾವ ಜಿಲ್ಲೆಗಳಿಗೂ ಗಂಭೀರ ಸ್ವರೂಪದ ಮಳೆ ಮುನ್ಸೂಚನೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ರಾಜಧಾನಿ ಹವಾಮಾನ ವರದಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ದಿನ ಉಂಟಾಗಿದ್ದ ತುಂತುರು ಮಳೆಯ ವಾತಾವರಣ ಮರೆಯಾಗಿದೆ. ಇಂದು ಶುಕ್ರವಾರದಿಂದ ನಗರದ ಎಲ್ಲ ಕಡೆಗಳಲ್ಲಿ ಉತ್ತಮ ಬಿಸಿಲಿನ ವಾತಾವರಣ ಕಂಡು ಬಂದಿದೆ. ಆದರೆ ಸದ್ಯಕ್ಕೆ ಚಳಿಯ ಪ್ರಮಾಣ ಈಗಿದ್ದಂತೆ ಇನ್ನೂ ಕೆಲವು ದಿನ ಮುಂದುವರಿಯಲಿದೆ.
ನಗರದ ಹಲವೆಡೆ ಬೆಳಗ್ಗೆ ದಟ್ಟ ಮಂಜು, ಆಗಾಗ ಮಬ್ಬು ವಾತಾವರಣ ಕಂಡು ಬರಲಿದೆ. ಇದರ ಹೊರತು ಮಳೆಯ ಮುನ್ಸುಚನೆ ಇಲ್ಲ. ಮುಂದಿನ ಒಂದು ನಗರದಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತವಾರಿ ಕೇಂದ್ರ ಮಾಹಿತಿ ನೀಡಿದೆ.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications