Karnataka Rain: ಕರಾವಳಿ-ಒಳನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ, ಹವಾಮಾನ ವರದಿ
ಬೆಂಗಳೂರು, ಆಗಸ್ಟ್ 29: ಕರ್ನಾಟಕದಲ್ಲಿ ಬಿಸಿಲ ಧಗೆಗೆ ತತ್ತರಿಸುತ್ತಿರುವ ಕರ್ನಾಟಕದ ಜನರಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಸಕ್ರಿಯವಾಗಲಿದೆ. ಈ ಹಿನ್ನೆಲೆ ಹಲವೆಡೆ ವ್ಯಾಪಕ ಮಳೆ ಆಗಲಿದೆ. ಒಳನಾಡು ಜಿಲ್ಲೆಗಳಿಗೂ ಉತ್ತಮ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಂದು ತಿಂಗಳು ತಡವಾಗಿ ಆರಂಭವಾದ ಮುಂಗಾರು ರಾಜ್ಯ ಅನೇಕ ಜಿಲ್ಲೆಗಳಲ್ಲಿ ಜುಲೈ ತಿಂಗಳಲ್ಲಿ ಅಬ್ಬರಿಸಿತ್ತು. ಅದಾದ ಬಳಿಕ ಪೂರ್ತಿ ಆಗಸ್ಟ್ ತಿಂಗಳ ಕಳೆದರೂ ಇದವರೆಗೆ ಎಲ್ಲಿಯೂ ಹೇಳಿಕೊಳ್ಳುವಂತಹ ಮಳೆ ದಾಖಲಾಗಿದೆ. ತುಂತುರು ಮಳೆ ಅಲ್ಲಲ್ಲಿ ಕಂಡು ಬಂದಿದೆ ಹೊರತು ಉತ್ತಮ ಮಳೆ ಆಗಿಲ್ಲ. ಇದರಿಂದ ಬೆಳೆ ಬೆಳೆದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಮಳೆಗಾಗಿ ಮುಗಿಲು ನೋಡುವ ಸ್ಥಿತಿ ಅವರದ್ದಾಗಿದೆ.

ಸದ್ಯ ಐಎಂಡಿ ಮುನ್ಸೂಚನೆ ಪ್ರಕಾರ, ಸೆಪ್ಟಂಬರ್ 03ರವರೆಗೆ ರಾಜ್ಯದ ಎಲ್ಲ ಭಾಗದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಜೋರು ಮಳೆ ಆಗಲಿದೆ. ಇಲ್ಲಿ ಗಾಳಿಯ ತೀವ್ರತೆ ಹೆಚ್ಚಿರಲಿದೆ ಎಂದು ತಿಳಿದು ಬಂದಿದೆ.
ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮಳೆ
ಇತ್ತ ಅತ್ಯಧಿಕ ಬಿಸಿಲು ದಾಖಲಾಗುತ್ತಿರುವ ಉತ್ತರ ಒಳನಾಡಿಗೂ ಗುರುವಾರದಿಂದ ನಾಲ್ಕು ದಿನ ಮಳೆ ಆಗಲಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಬೀದರ್, ಯಾದಗಿರಿ, ಕಲುಬುರಗಿ ಮತ್ತು ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸಂಭವವಿದೆ. ನಿರೀಕ್ಷೆಯಂತೆ ಈ ಜಿಲ್ಲೆಗಳಲ್ಲಿ ಮಳೆಯಾದರೂ ಇನ್ನೇನು ಒಣಗಿ ಹಾಳಾಗುವ ಹಂತದಲ್ಲಿರುವ ಬೆಳೆಗಳಿಗೆ ಮರುಜೀವ ಬರಲಿದೆ. ರೈತರಿಗೆ ತುಸು ನೆಮ್ಮದಿ ಸಿಗಲಿದೆ.

ಪ್ರತಿ ಭಾರಿ ಆಗಸ್ಟ್ ತಿಂಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಪ್ರಯಾಣದಲ್ಲಿ ಮಳೆ ಆಗುತ್ತಿತ್ತು. ಆದರೆ ಈ ಬಾರಿ ಎಲ್ಲವು ತದ್ವಿರುದ್ಧವಾಗಿದೆ. ಮಳೆಗಾಲ ಎಂಬ ವಾತಾವರಣವೇ ಮರೆಯಾಗಿ ಬಿಸಿಲ ಝಳ, ಶಾಖದ ಅಲೆ ಪ್ರಮಾಣದಲ್ಲಿ ಏರಿಕೆ ಆಗಿದೆ. ಎಲ್ಲೆಲ್ಲೂ ಗರಿಷ್ಠ ತಾಪಮಾನವು ಹೆಚ್ಚಳವಾಗಿದೆ.
ದಕ್ಷಿಣ ಒಳನಾಡಿಗೂ ಉತ್ತಮ ಮಳೆ ಸಂಭವ
ಬೆಂಗಳೂರಿನಲ್ಲಿ ಆಗಸ್ಟ್ 30ರಿಂದ ಐದು ದಿನಗಳ ಕಾಲ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ರಾಮನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ತುಮಕೂರು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಯಾದ್ಯಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಹೇಳಿದೆ.
ಈ ಮಳೆ ಮುನ್ಸೂಚನೆ ವರದಿಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏರಿಕೆಯಾಗಿರುವ ತಾಪಮಾನ ಮುಂದಿನ ದಿನಗಳಲ್ಲಿ ಇಳಿಕೆ ಆಗುವ ಮತ್ತು ಸಹಜ ಮಳೆಗಾಲದ ವಾತಾವರಣಕ್ಕೆ ಮರಳುವ ಸಾಧ್ಯತೆಗಳು ಇವೆ. ಇನ್ನು ಸೆಪ್ಟಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಮುಂಗಾರು ಚುರುಕಾಗುವ, ಭಾರಿ ಮಳೆ ಸುರಿಯುವ ಸಂಭವ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ












Click it and Unblock the Notifications