ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹವಾಮಾನ ಇಲಾಖೆ ವರದಿ: ಹತ್ತು ಜಿಲ್ಲೆಗಳಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಮೇ 27: ರಾಜ್ಯದ 10 ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗಲಿದ್ದು ಒಂದೆರಡು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಕೋಲಾರ ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆ ಬೀಳಲಿದೆ.[ರಣ ಬಿಸಿಲಿಗೆ ಸುಡುತ್ತಿದೆ ಉತ್ತರ ಕರ್ನಾಟಕ]

rain

ಬೆಂಗಳೂರಿನಲ್ಲಿ ಸಂಜೆ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಬುಧವಾರ ಬೆಳಗ್ಗಡೆಯಿಂದಲೇ ಮೋಡ ಕವಿದ ವಾತಾವರಣ ಇದೆ.

ಬೆಂಗಳೂರಿನಲ್ಲಿ ಗರಿಷ್ಠ 32.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ ಕನಿಷ್ಠ 22.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ವಾತಾವರಣದ ಬಿಸಿ ಏರುತ್ತಿದ್ದು ಹಲವೆಡೆ ಕುಡಿವ ನೀರಿಗೆ ತೊಂದರೆ ಉಂಟಾಗಿದೆ.[ಈ ಬಾರಿ ಮುಂಗಾರಿಗೂ ಎಲ್ ನಿನೋ ಕಾಟ]

ಮಂಗಳವಾರ ಕಲಬುರಗಿಯಲ್ಲಿ ಅತಿ ಹೆಚ್ಚು ಅಂದರೆ 42.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬಿಜಾಪುರ, ಕೊಪ್ಪಳ, ಬೀದರ್, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವಾತಾವರಣ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.

English summary
Karnataka weather updates : Indian meteorological department (IMD) predicts heavy to very heavy Rain fall (pre monsoon) across 10 districts of Karnataka for Wednesday 27th May. The districts are - Dakshina Kannada, Udupi, Belagavi, Haveri, Bengaluru, Chikkamagalur, Kodagu, Kolar, Shivamogga and Tumakuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X