ಹವಾಮಾನ ವರದಿ; ಎರಡು ದಿನ ಬೆಂಗಳೂರಿನಲ್ಲಿ ಸಂಜೆ ಮಳೆ ಸಾಧ್ಯತೆ
ಬೆಂಗಳೂರು, ಸೆಪ್ಟೆಂಬರ್ 10; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಆಗಸ್ಟ್ನಲ್ಲಿ ಮಳೆಯ ಕೊರತೆಯಿಂದ ಕಂಗಾಲಾಗಿದ್ದ ಜನರು ಸೆಪ್ಟೆಂಬರ್ನಲ್ಲಿ ಸುರಿಯುತ್ತಿರುವ ಮಳೆಯಿಂದ ತುಸು ನೆಮ್ಮದಿ ಕಂಡಿದ್ದಾರೆ. ಸೆಪ್ಟೆಂಬರ್ 10 ಮತ್ತು 11ರಂದು ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಚದುರಿದಂತೆ ಸಾಧಾರಣೆ ಮಳೆಯ ಮುನ್ಸೂಚನೆಯನ್ನು ಕೊಡಲಾಗಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯಲಿದ್ದು, ಗಾಳಿಯ ಆರ್ಭಟವೂ ಜೋರಾಗಿ ಇರಲಿದೆ. ಗಂಟೆಗೆ 40 ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿಯೂ ಮಳೆ; ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ವ್ಯಾಪ್ತಿಯ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇದೆ. ಶನಿವಾರ ಸಹ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಉತ್ತರ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ನಗರಕ್ಕೆ ಸಹ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ವಾರದ ಕೆಲವು ದಿನ ಸುರಿದಂತೆ ಸಂಜೆ ಅಥವ ರಾತ್ರಿ ನಗರದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಉಳಿದಂತೆ ಉಷ್ಣಾಂಶ ಸಹ ಕಡಿಮೆ ಇರಲಿದ್ದು, ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಜೂನ್ ತಿಂಗಳಿನಲ್ಲಿ ನೈಋತ್ಯ ಮುಂಗಾರು ಆರಂಭದಿಂದಲೂ ಕೈ ಕೊಟ್ಟಿತು. ಆದ್ದರಿಂದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಉಂಟಾಯಿತು. ಆದರೆ ಜುಲೈ ತಿಂಗಳ ಮೊದಲ 15 ದಿನ ಸುರಿದ ಮಳೆ ಜನರಿಗೆ ನೆಮ್ಮದಿ ತಂದಿತು. ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿತ್ತು.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ತಾಪಮಾನ ಏರಿಕೆ ಕಂಡಿದೆ. ಒಣಹವೆ ನೋಡಿ ಜನರು ಇದು ಮಳೆಗಾಲವೋ?, ಬೇಸಿಗೆಯೋ? ಎಂದು ಕೇಳುವಂತಾಗಿದೆ. ಆದರೆ ಸೆಪ್ಟೆಂಬರ್ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಸಹ ಸಹಕಾರಿಯಾಗಿದೆ.
ಸೆಪ್ಟೆಂಬರ್ನಲ್ಲಿ ಉತ್ತಮ ಮಳೆಯಾದರೆ ಮಾತ್ರ ರಾಜ್ಯದಲ್ಲಿ ಕೃಷಿ ಚಟುವಟಿಕೆಗೆ ಸಹಾಯಕವಾಗಲಿದ್ದು, ಕುಡಿಯವ ನೀರಿನ ಸಮಸ್ಯೆಗೂ ಪರಿಹಾರ ಸಿಗಲಿದೆ. ಇಲ್ಲವಾದಲ್ಲಿ ಈ ವರ್ಷ ಕುಡಿಯುವ ನೀರಿನ ಕೊರತೆ ಎದುರಾಗುವುದರಲ್ಲಿ ಅನುಮಾನವೇ ಉಳಿದಿಲ್ಲ. ರಾಜ್ಯದ ಯಾವುದೇ ಜಲಾಶಯಗಳು ಸಹ ಬೇಸಿಗೆಯಲ್ಲಿ ನೀರು ಒದಗಿಸುವಷ್ಟು ಭರ್ತಿಯಾಗಿಲ್ಲ.
ಆಗಸ್ಟ್ ತನಕ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಶೇ 12ರಷ್ಟು ಮಳೆ ಕೊರತೆ ಉಂಟಾಗಿದೆ. ಬಿತ್ತನೆ ಕಾರ್ಯವೂ ತಡವಾಗಿ ಆಗಿದ್ದು, ಈಗ ರೈತರು ಬೆಳೆಗಳಿಗೆ ನೀರಿಲ್ಲ ಎಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜುಲೈ ತಿಂಗಳಿನಲ್ಲಿ ತುಂಬಿ ಹರಿದಿದ್ದ ನದಿಗಳಲ್ಲಿ ಈಗ ಮತ್ತೆ ನೀರಿನ ಪ್ರಮಾಣ ಇಳಿಮುಖವಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮುಂತಾದ ಜಿಲ್ಲೆಗಳಲ್ಲಿ ನದಿಗಳ ನೀರಿನ ಮಟ್ಟ ನೋಡಿ ಜನರು ಕಂಗಾಲಾಗಿದ್ದಾರೆ.
ಹವಾಮಾನ ಇಲಾಖೆಯ ತಜ್ಞರು ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತದೆ ಎಂದು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದಾರೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹದಲ್ಲಿ ಕೊರತೆ ಉಂಟಾಗಿದೆ. ಕಾವೇರಿ ಕೊಳ್ಳದ ಜಲಾಶಯಗಳು ಭರ್ತಿಯಾಗದೇ ಇದ್ದರೂ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ











Click it and Unblock the Notifications