ಶಕ್ತಿ ಯೋಜನೆ ಪರಿಣಾಮ: ರೈಲು ಪ್ರಯಾಣದಿಂದ ಶೇ 20 ರಷ್ಟು ಮಹಿಳೆಯರು ದೂರ- ಗ್ರೌಂಡ್ ರಿಪೋರ್ಟ್
ಬೆಂಗಳೂರು, ಜೂನ್ 13: ಕರ್ನಾಟಕ ರಾಜ್ಯ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ 'ಶಕ್ತಿ' ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಹೆಚ್ಚು ಪ್ರಚಾರ ಪಡೆಯುತ್ತಿರುವ ಶಕ್ತಿ ಯೋಜನೆಯು ಮಹಿಳೆಯರಿಗೆ ಸಬಲೀಕರಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಆದರೆ, ಶಕ್ತಿ ಯೋಜನೆಯಿಂದ ಪ್ರಮುಖ ನಗರಗಳ ರೈಲ್ವೆ ಮತ್ತು ಉನ್ನತ ದರ್ಜೆಯ ವೋಲ್ವೋ ಬಸ್ಗಳಿಗೆ ನಷ್ಟ ಉಂಟು ಮಾಡಿದೆ. ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಉತ್ಸುಕರಾಗಿದ್ದಾರೆ. ಈ ಕಾರಣ ರೈಲುಗಳ ಮಹಿಳಾ ಪ್ರಯಾಣಿಕರಲ್ಲಿ ಶೇ 20ರಷ್ಟು ಇಳಿಕೆಯಾಗಿರುವುದು ಗಮನಕ್ಕೆ ಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಉದಾಹರಣೆಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸುಗಳು, ಮಲೆ ಮಹದೇಶ್ವರ ಬೆಟ್ಟ ಹಾಗೂ ಇತರೆ ಯಾತ್ರಾ ಕೇಂದ್ರಗಳಿಗೆ ಮಹಿಳೆಯರಿಂದ ತುಂಬಿ ತುಳುಕುತ್ತಿರುವುದು ಕಂಡುಬಂದಿದೆ.
ಶಕ್ತಿ ಯೋಜನೆಯ ಎರಡನೇ ದಿನ, ಅನೇಕ ವೋಲ್ವೋ ಬಸ್ಗಳು ಪ್ರಯಾಣಿಕರನ್ನು ತುಂಬಿಸಿಕೊಳ್ಳಲು ಬಹಳ ಸಮಯ ಕಾಯಬೇಕಾಯಿತು. ಆದರೆ, ಕೆಎಸ್ಆರ್ಟಿಸಿ ಅಧಿಕಾರಿಗಳು ಗುಂಪು ಗುಂಪಾಗಿ ಬಸ್ ನಿಲ್ದಾಣಗಳಿಗೆ ಬಂದ ಮಹಿಳೆಯರಿಗೆ ಹೆಚ್ಚುವರಿ ಸಾಮಾನ್ಯ ಬಸ್ಗಳನ್ನು ನಿಗದಿಪಡಿಸಲು ಹರಸಾಹಸ ಪಡಬೇಕಾಯಿತು.
ಈ ಕುರಿತು 'ನ್ಯೂ ಇಂಡಿಯನ್ ಎಕ್ಸ್ಪ್ರೆಸ್'ಗೆ ಪ್ರತಿಕ್ರಿಯಿಸಿರುವ ಕೆಎಸ್ಆರ್ಟಿಸಿ ಚಾಲಕ ರವಿ, ಬೆಂಗಳೂರು-ಎಂಎಂ ಹಿಲ್ಸ್ ಬಸ್ ಸಾಮರ್ಥ್ಯಕ್ಕಿಂತ ಹೆಚ್ಚು ತುಂಬಿ ತುಳುಕುತ್ತಿತ್ತು. ಬೆಂಗಳೂರಿನಿಂದ ಮಲೆ ಮಹದೇಶ್ವರ ಯಾತ್ರಾ ಕೇಂದ್ರದವರೆಗೆ ಅನೇಕ ಮಹಿಳೆಯರು ನಿಂತಿದ್ದರು ಎಂದು ಹೇಳಿದ್ದಾರೆ.
ಮದುವೆ ಸಮಾರಂಭಗಳಿಗೆ ತೆರಳುವವರು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ತಮ್ಮ ಲಗೇಜ್ ಮತ್ತು ಆಧಾರ್ ಕಾರ್ಡ್ಗಳೊಂದಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಕ್ಕೆ ಹೋಗಲು ಮಹಿಳೆಯರು ಬಂದಿದ್ದರಿಂದ ಈ ಯೋಜನೆಯು ಭಾರೀ ಪ್ರಮಾಣದಲ್ಲಿ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.
ಕೇವಲ ಎರಡು ಗಂಟೆಗಳಲ್ಲಿ ದೂರವನ್ನು ಕ್ರಮಿಸುವ ಕಾರಣ ಯಾವಾಗಲೂ ತುಂಬಿರುತ್ತಿದ್ದ ಒಡೆಯರ್ ಎಕ್ಸ್ಪ್ರೆಸ್ ಸೇರಿದಂತೆ ಮೈಸೂರು ಮತ್ತು ಬೆಂಗಳೂರು ನಡುವಿನ ರೈಲುಗಳು ಗಮನಾರ್ಹವಾಗಿ ಖಾಲಿ ಉಳಿದಿದ್ದವು. ಮುಂಜಾನೆ ನಗರದಿಂದ ಹೊರಡುವ ರೈಲುಗಳನ್ನು ಹೊರತುಪಡಿಸಿ, ಸೀಸನ್ ಟಿಕೆಟ್ಗಳೊಂದಿಗೆ ಕಚೇರಿಗೆ ಹೋಗುವವರಿಂದ ಕಿಕ್ಕಿರಿದು ತುಂಬಿರುತ್ತದೆ. ಉಳಿದೆಲ್ಲ ರೈಲುಗಳು 'ಶಕ್ತಿ' ಯೋಜನೆ ಪೂರ್ವ ಸಮಯಕ್ಕೆ ಹೋಲಿಸಿದರೆ ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಸೆಳೆಯಲು ಯಶಸ್ವಿಯಾಗಿವೆ.












Click it and Unblock the Notifications