Government employee; OPS ಜಾರಿಗೆ ಪ್ರಕ್ರಿಯೆ ಆರಂಭಿಸಿದ ರಾಜ್ಯ ಸರ್ಕಾರ
ಬೆಂಗಳೂರು, ನವೆಂಬರ್ 13; ಕರ್ನಾಟಕ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಸಹ ಈ ಕುರಿತು ಭರವಸೆ ನೀಡಿತ್ತು.
ಸರ್ಕಾರಿ ನೌಕರರು, ನೌಕರರ ವಿವಿಧ ಸಂಘನೆಗಳು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗಕ್ಕೆ ಸಹ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಮನವಿಯನ್ನು ಸಲ್ಲಿಕೆ ಮಾಡಿವೆ. ಸದ್ಯದ ಮಾಹಿತಿ ಪ್ರಕಾರ ಕರ್ನಾಟಕ ಸರ್ಕಾರ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಕುರಿತು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಗಳು ಆರ್ಥಿಕ ಇಲಾಖೆಗೆ ಪತ್ರವನ್ನು ಬರೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಎನ್ಪಿಎಸ್ ಯೋಜನೆ ರದ್ದು; ಪತ್ರದಲ್ಲಿ ಜಂಟಿ ಕಾರ್ಯದರ್ಶಿಗಳು ನೂತನ ಪಿಂಚಣಿ ಯೋಜನೆ (ಎನ್ಪಿಎಸ್)ನಲ್ಲಿ ಹಲವು ಸಮಸ್ಯೆಗಳಿವೆ. ಸರ್ಕಾರಿ ನೌಕರರಿಗೆ ಇದರಿಂದಾಗಿ ಸಮಸ್ಯೆಗಳಾಗಿವೆ. ಸರ್ಕಾರಿ ನೌಕರರ ಸಂಘದ ಮನವಿ ಹಿನ್ನಲೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ನಿಯಾಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ವಿವರಣೆ ನೀಡಲಾಗಿದೆ.
ಕರ್ನಾಟಕದ 2,65,715 ಸರ್ಕಾರಿ ನೌಕರರು ನೂತನ ಪಿಂಚಣಿ ಯೋಜನೆ ವ್ಯಾಪ್ತಿಯಲ್ಲಿದ್ದಾರೆ. ಈ ಯೋಜನೆಯ ಅಡಿ ಇದ್ದ 1169 ನೌಕರರು ಮರಣ ಹೊಂದಿದ್ದಾರೆ. 1463 ನಿವೃತ್ತ ನೌಕರರು ಸಹ ಈ ಯೋಜನೆ ವ್ಯಾಪ್ತಿಯಲ್ಲಿದ್ದಾರೆ. ಎನ್ಪಿಎಸ್ ನೌಕರರ ಸಮಾವೇಶ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ಪಿಎಸ್ ರದ್ದು ಮಾಡುವ ಕುರಿತು ಘೋಷಣೆ ಮಾಡುವ ನಿರೀಕ್ಷೆ ಇದೆ.
ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ ತೇಜ ಮಾತನಾಡಿ, "ಎನ್ಪಿಎಸ್ ರದ್ದುಗೊಳಿಸಿದರೆ ಸರ್ಕಾರಕ್ಕೆ ಯಾವುದೇ ಹೊರೆ ಆಗುವುದಿಲ್ಲ. ಸರ್ಕಾರ ಕಡಿತ ಮಾಡಿರುವ ಹಾಗೂ ಸರ್ಕಾರ ಪಾವತಿಸಿರುವ ಮೊತ್ತ ತಕ್ಷಣ ಅಭಿವೃದ್ಧಿ ಕಾರ್ಯಗಳಿಗೆ ಸಹಾಯಕವಾಗಲಿದೆ. ಸುಮಾರು 5 ಲಕ್ಷ ನೌಕರರು ಎನ್ಪಿಎಸ್ ರದ್ದುಗೊಳಿಸಲು ಕಾಯುತ್ತಿದ್ದಾರೆ" ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಸಚಿವಾಲಯಗಳ ನೌಕರರ ಸಂಘ 7ನೇ ರಾಜ್ಯ ವೇತನ ಆಯೋಗಕ್ಕೆ ಸಲ್ಲಿಕೆ ಮಾಡಿರುವ ವರದಿಯಲ್ಲಿಯೂ ಹೊಸ ಪಿಂಚಣಿ ವ್ಯವಸ್ಥೆ ರದ್ದು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿಯನ್ನು ಮಾಡಿದೆ. ಅಲ್ಲದೇ ಎನ್ಪಿಎಸ್ ಏಕೆ ಬೇಡ? ಎಂದು ಹಲವು ಅಂಶಗಳನ್ನು ಉಲ್ಲೇಖ ಮಾಡಿದೆ.
NPS ಯೋಜನೆ ಸರ್ಕಾರಿ ನೌಕರರ ಮಧ್ಯದಲ್ಲಿಯೇ ಎರಡು ಗುಂಪುಗಳನ್ನಾಗಿ ವಿಂಗಡಿಸುತ್ತದೆ. ಆದ್ದರಿಂದ NPS ಯೋಜನೆಯನ್ನು ಕೈಬಿಡಬೇಕು. NPS ನೌಕರರು, ಸದರಿ ಯೋಜನೆಯು ಮಾರುಕಟ್ಟೆ ಆಧಾರಿತ ಇರುವುದರಿಂದ, ಮುಂದೆ ಪೆನ್ಷನ್ ಪಡೆಯುವುದು ಬಹಳ ಅನಿಶ್ಚಿತವಾಗಿರುವುದರಿಂದ, NPS ಯೋಜನೆ ಕೈಬಿಟ್ಟು ಮೊದಲಿನಂತೆ ಸರ್ಕಾರವೇ ಪೆನ್ಷನ್ ನೀಡಬೇಕು ಎಂದು ವರದಿಯಲ್ಲಿ ಹೇಳಿದೆ.
ಎನ್ಪಿಎಸ್ಗೆ ನೌಕರರು ವೇತನದ 10% ವಂತಿಗೆ ನೀಡಬೇಕಾದುದರಿಂದ ಒಟ್ಟು ಪಡೆಯಬೇಕಾದ ವೇತನ ಕಡಿಮೆಯಾಗುತ್ತದೆ. ಇದು ತಾರತಮ್ಯದ ನೀತಿ ಎಂದು ತಮ್ಮ ಅಸಮಾಧಾನವನ್ನು ನೌಕರರು ವ್ಯಕ್ತಪಡಿಸಿರುತ್ತಾರೆ. ಈ ಯೋಜನೆಯಲ್ಲಿ ನೌಕರರಿಗೆ ನಿವೃತ್ತಿ ಸಮಯದಲ್ಲಿ DCRG ಹಾಗೂ ನಿಶ್ಚಿತ ಫ್ಯಾಮಿಲಿ, ಪೆನ್ಷ್ನ್ಗೆ ಅವಕಾಶವಿರುವುದಿಲ್ಲ. ಎನ್ಪಿಎಸ್ ಹೂಡಿಕೆದಾರರು GPF ನಲ್ಲಿ ಉಳಿತಾಯ ಮಾಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದೆ.
ಎನ್ಪಿಎಸ್ ಯೋಜನೆಯಲ್ಲಿ GPF ನಲ್ಲಿದ್ದಂತೆ ನೌಕರರು ತಮ್ಮ ಸಾಮಾಜಿಕ ಅಗತ್ಯಗಳಿಗೆ ಅನುಗುಣವಾಗಿ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ. ಇದರಿಂದಾಗಿ ನೌಕರರನ್ನು ಇನ್ನಷ್ಟು ಸಾಲಗಾರನಾಗುವ ಪರಿಸ್ಥಿತಿ ಉಂಟಾಗುತ್ತದೆ. ಹಣ ಹಿಂಪಡೆದಾಗ ಒಟ್ಟು ಆದಾಯಕ್ಕೆ ಪೆನ್ಷನ್ ಸೇರಿ ಟ್ಯಾಕ್ಸ್ ಕಟ್ಟಬೇಕಾಗುತ್ತದೆ. ಇದಲ್ಲದೆ ಸೇವಾ ಟ್ಯಾಕ್ಸ್ ಬೇರೆ ಕಟ್ಟಬೇಕಾಗುತ್ತದೆ. ಆದ್ದರಿಂದ ಒಪಿಎಸ್ ಜಾರಿಗೊಳಿಸಬೇಕು ಎಂದು ಬೇಡಿಕೆ ಇಡಲಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications