ಇ-ಆಫೀಸ್ ಯೋಜನೆ ಅನುಷ್ಠಾನ; ಜಿಲ್ಲೆ, ತಾಲೂಕುಗಳಿಗೆ ಸೂಚನೆಗಳು
ಬೆಂಗಳೂರು, ಮೇ 19: ಕರ್ನಾಟಕ ಸರ್ಕಾರ ಇ-ಆಫೀಸ್ ಯೋಜನೆ ಅನುಷ್ಠಾನ ಮಾಡುವ ಕುರಿತು ಪತ್ರವೊಂದನ್ನು ಬರೆದಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು ಎಲ್ಲಾ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿದೆ.
ಈ ಕುರಿತು ಉಜ್ವಲ್ ಕುಮಾರ್ ಘೋಷ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ (ಇ-ಆಡಳಿತ) ಹಾಗೂ ಸಕಾಲ ಪತ್ರವನ್ನು ಬರೆದಿದ್ದಾರೆ. ಪತ್ರವು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಛೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸುವ ಕುರಿತು ಎಂಬ ವಿಷಯ ಒಳಗೊಂಡಿದೆ.

ಪತ್ರದ ವಿವರಗಳು: ಈ ಪತ್ರದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ)ಯ ಸರ್ಕಾರಿ ಆದೇಶದಲ್ಲಿ ಇ- ಆಫೀಸ್ ತಂತ್ರಾಂಶವನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳ ಕಛೇರಿ/ ಪ್ರಾದೇಶಿಕ ಆಯುಕ್ತರುಗಳ ಕಛೇರಿ/ ಜಿಲ್ಲಾಧಿಕಾರಿಗಳ ಕಛೇರಿ/ ಜಿಲ್ಲಾ ಪಂಚಾಯತ್ ಕಛೇರಿ/ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ (ಪ್ರಾದೇಶಿಕ ಮತ್ತು ಸಾಮಾಜಿಕ)ಗಳಲ್ಲಿ ಕಡ್ಡಾಯವಾಗಿ ಇ-ಆಫೀಸ್ ಅನುಷ್ಠಾನಗೊಳಿಸಿ, ತಾಲೂಕು ಮಟ್ಟದ ಕಛೇರಿಗಳಲ್ಲಿ ಅನುಷ್ಠಾನ ಪ್ರಕ್ರಿಯೆ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿರುತ್ತದೆ ಎಂದು ಹೇಳಿದೆ.
ಎಲ್ಲಾ ಜಿಲ್ಲಾಧಿಕಾರಿಗಳ ಕಛೇರಿ ಮತ್ತು ಜಿಲ್ಲಾ ಪಂಚಾಯತ್ ಕಛೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಂಡಿರುವ ಮೇರೆಗೆ, ಆಯಾಯ ಜಿಲ್ಲೆಗಳ ಉಪ ವಿಭಾಗಾಧಿಕಾರಿಗಳ ಕಛೇರಿ ಮತ್ತು ಎಲ್ಲಾ ತಾಲ್ಲೂಕು ಮಟ್ಟದ ತಹಶೀಲ್ದಾರ್ ಕಛೇರಿ ಹಾಗೂ ತಾಲ್ಲೂಕು ಪಂಚಾಯತ್ ಕಛೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ದಿನಾಂಕ 01/04/2021ರಿಂದ ಅನುಷ್ಠಾನಗೊಳಿಸುವಂತೆ ಆದೇಶಿಸಲಾಗಿರುತ್ತದೆ.
ಅದರಂತೆ, ತಾಲ್ಲೂಕು ಮಟ್ಟದ ಎಲ್ಲಾ ತಹಶೀಲ್ದಾರ್ ಕಛೇರಿ, ತಾಲ್ಲೂಕು ಪಂಚಾಯತ್ ಕಛೇರಿ, ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗಳು ಹಾಗೂ ಉಪನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಇ-ಕಛೇರಿ ತಂತ್ರಾಂಶವನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿರುತ್ತದೆ ಹಾಗೂ ರಾಜ್ಯದ ಎಲ್ಲಾ ನಿಗಮ/ ಮಂಡಳಿ/ ಆಯೋಗ/ ನಿಯಮಿತ ಕಂಪನಿ ಮತ್ತು ಇತರೆ ಸ್ಯಾಯುತ್ತ ಸಂಸ್ಥೆಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗಳಿಸಲು ಆದೇಶಿಸಲಾಗಿರುತ್ತದೆ.
ಅದಾಗ್ಯೂ ಈವರೆಗೂ ಹಲವಾರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಛೇರಿಗಳು, ನಿಗಮ/ ಮಂಡಳಿ ಆಯೋಗ/ ನಿಯಮಿತ ಕಂಪನಿ ಮತ್ತು ಇತರೆ ಸ್ನಾಯುತ್ತ ಸಂಸ್ಥೆಗಳಲ್ಲಿ ಇ-ಕಛೇರಿ ತಂತ್ರಾಂಶದ ಅನುಷ್ಠಾನ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದಿಲ್ಲ. ಆದ್ದರಿಂದ, ತಮ್ಮ ಸಚಿವಾಲಯದ ಅಧೀನದಲ್ಲಿ ಬರುವ ಯಾವ ಇಲಾಖೆಗಳು/ ಜಿಲ್ಲಾ ಮಟ್ಟದ ಕಛೇರಿಗಳು/ ತಾಲ್ಲೂಕು ಮಟ್ಟದ ಕಛೇರಿಗಳು/ ನಿಗಮ/ ಮಂಡಳಿ/ ವಿಶ್ವವಿದ್ಯಾಲಯಗಳು/ ಇತರೆ ಸ್ನಾಯುತ್ತ ಸಂಸ್ಥೆಗಳಲ್ಲಿ ಇ-ಆಫೀಸ್ ತಂತ್ರಾಂಶವು ಅನುಷ್ಠಾನಗೊಂಡಿರುವುದಿಲ್ಲವೋ ಅಂತಹ ಕಛೇರಿಗಳಲ್ಲಿ ತುರ್ತಾಗಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಡ್ಡಾಯವಾಗಿ ನಿರ್ವಹಣೆಯನ್ನು ಇ-ಆಫೀಸ್ ತಂತ್ರಾಂಶದ ಮೂಲಕವೇ ನಿರ್ವಹಿಸಬೇಕು ಎಂದು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಪತ್ರ ಹೇಳಿದೆ.
ಈ ಹಿಂದೆಯೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ರಾಜ್ಯದ ಎಲ್ಲಾ ವಿಭಾಗ/ ಜಿಲ್ಲಾ ಮಟ್ಟದ ಕಚೇರಿ ಹಾಗೂ ತಾಲ್ಲೂಕು ಮಟ್ಟದ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅಳವಡಿಸಲು ಅವರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ DDO (Drawing and Disbursement Officer) ಗಳನ್ನು ಹಾಗೂ ಮುಖ್ಯಸ್ಥರು/ ಆಡಳಿತಾಧಿಕಾರಿ/ ಮ್ಯಾನೇಜರ್ಗಳನ್ನು ಇ-ಆಫೀಸ್ ಅನುಷ್ಠಾನಕ್ಕೆ Local Admin (ಸ್ಥಳೀಯ ನಿರ್ವಹಣಾ ಅಧಿಕಾರಿ) ಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು.
Local Adminಗಳು ತಮ್ಮ ಇಲಾಖೆಯಲ್ಲಿನ ಎಲ್ಲಾ ಸಿಬ್ಬಂದಿಗಳ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಕಲೆ ಹಾಕಬೇಕು ಹಾಗೂ ಎಲ್ಲರ ಇ-ಮೇಲ್ ಐಡಿ ಸೃಜಿಸಲು ಆನ್ ಲೈನ್ ಮೂಲಕ https://eforms.nic.in ನಲ್ಲಿ ಅಪ್ ಲೋಡ್ ಮಾಡಬೇಕು. ಇ-ಆಡಳಿತ ಕೇಂದ್ರದ ಜೊತೆ ಸಂವಹಿಸಿ ಎಲ್ಲಾ ಉದ್ಯೋಗಿಗಳ User ID & Password ಪಡೆದುಕೊಂಡು ಸಂಬಂಧಪಟ್ಟ ಸಿಬ್ಬಂದಿಗೆ ನೀಡಬೇಕು ಹಾಗೂ ಪಾಸ್ ವರ್ಡ್ ಬದಲಿಸಿಕೊಳ್ಳಲು ಸೂಚಿಸಬೇಕು ಎಂದು ಹೇಳಿತ್ತು.
ಕಛೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಕ್ಕೆ ಅಗತ್ಯವಿರುವ ನೆಟ್ ವರ್ಕ್ ಪಡೆದುಕೊಂಡು ದೈನಂದಿನ ಕಾರ್ಯನಿರ್ವಹಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳುವುದು. ಯಾವುದೇ ಸಿಬ್ಬಂದಿ ವರ್ಗಾವಣೆ/ ನಿವೃತ್ತಿ/ ಸೇವಾ ವಿಮುಕ್ತಿ ಹೊಂದಿದಾಗ ಅವರ ಖಾತೆಯನ್ನು ವರ್ಗಾಯಿಸುವುದು ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವುದು. ವರದಿ ಮಾಡಿಕೊಳ್ಳುವ ನೂತನ ಸಿಬ್ಬಂದಿಗೆ User ID ಸೃಜಿಸಬೇಕು ಎಂದು ಹೇಳಿತ್ತು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications