ರಾಜ್ಯದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳು ಗಮನಿಸಬೇಕಾದ ಪ್ರಮುಖಾಂಶಗಳು
ಬೆಂಗಳೂರು, ಜುಲೈ, 04: ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಇದ್ದು, 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲಾ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಮುಖಾಂಶಗಳು ಇಲ್ಲಿವೆ ನೋಡಿ.
2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿಗೆ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಉಲ್ಲೇಖಗಳನ್ವಯ ಹೊರಡಿಸಲಾಗಿದ್ದು, ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಈ ಕೆಳಕಂಡಂತೆ ಸೂಚಿಸಲಾಗಿದೆ.

* ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೇ 29, 2024ರಿಂದ ಶೈಕ್ಷಣಿಕ ವರ್ಷ ಪ್ರಾರಂಭ ಆಗಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ ಉಪಕ್ರಮವನ್ನು ಮತ್ತು 2023-24ನೇ ಸಾಲಿನಲ್ಲಿ "ಕಲಿಕಾ ಬಲವರ್ಧನೆ" ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ "ಸೇತುಬಂಧ" ಕಾರ್ಯಕ್ರಮವನ್ನು ಜೂನ್ನಲ್ಲಿ ನಡೆಸುವುದು. 1ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT websiteನಲ್ಲಿ ಅಳವಡಿಕೆ ಮಾಡಲಾಗಿದೆ. ಕಾರ್ಯಕ್ರಮ ಅನುಷ್ಠಾನಕ್ಕೆ ತರುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.
* ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1ರ ಪಠ್ಯ ಶೇಕಡ 50 ಹಾಗೂ ಭಾಗ-2ರ ಪಠ್ಯ ಶೇಕಡ 50 ಒಟ್ಟು ಸೇರಿ ಶೇಕಡ 100ರಷ್ಟು ಪಠ್ಯವನ್ನು ಮೌಲ್ಯಾಂಕನಕ್ಕೆ ಒಳಪಡಿಸುವ ವಿಧಾನವನ್ನು ನೀಡಲಾಗಿದ್ದು, ಅದರಂತೆಯೇ ಕ್ರಮವಹಿಸುವುದು.
* ಉಲ್ಲೇಖಿತ ಸುತ್ತೋಲೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನಾಧರಿಸಿ, ವಾರ್ಷಿಕ ಪಾಠ ಹಂಚಿಕೆ ಮಾಡಿಕೊಂಡು, ಕಲಿಕೆಯನ್ನು ಅನುಕೂಲವಾಗಿಸಲು, ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಮೌಲ್ಯಾಂಕನ ಕೈಗೊಂಡು, ಮಕ್ಕಳ ಕಲಿಕೆಯ ಪ್ರಗತಿಯನ್ನು ದಾಖಲಿಸಿಕೊಳ್ಳಬೇಕಾಗಿದೆ. ಈ ಕುರಿತು ಮಕ್ಕಳ ಕಲಿಕೆಗೆ ಪೂರಕವಾಗಿ ಶಿಕ್ಷಕರು ಅಗತ್ಯ ಪೂರ್ವ ತಯಾರಿಯೊಂದಿಗೆ ವಾರ್ಷಿಕ ಕ್ರಿಯಾಯೋಜನೆಯನ್ನು ರೂಪಿಸಿಕೊಳ್ಳುವುದು.
* 2024-2025ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸೇತುಬಂಧ ಕಾರ್ಯಕ್ರಮ, ರೂಪಣಾತ್ಮಕ ಹಾಗೂ ಸಂಕಲನಾತ್ಮಕ ಮೌಲ್ಯಾಂಕನ ನಿರ್ವಹಿಸಲು ಅನುವಾಗುವಂತೆ ಮಾಹಿತಿಯನ್ನು ನೀಡಲಾಗಿರುತ್ತದೆ. ಅದರಂತೆಯೇ, ಶಾಲಾ ಹಂತದಲ್ಲಿ ನಿಗದಿತ ಕಾಲಾವಧಿಯೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications