Government Employees: ರಜೆ ನಿರ್ವಹಣೆ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು, ನವೆಂಬರ್ 06: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ Leave Management System ಅನುಷ್ಠಾನ ಕುರಿತು ಕರ್ನಾಟಕ ಸರ್ಕಾರ ನವೆಂಬರ್ 04 ರಂದು ಮಹತ್ವದ ಆದೇಶ ಹೊರಡಿಸಿದೆ.
eLeave ಒಂದು ಸರಳ ಹಾಗೂ ಅನುಕೂಲಕರ workflow ಆಧಾರಿತ ವ್ಯವಸ್ಥೆಯಾಗಿದ್ದು, ಇದರ ಮೂಲಕ ಆನ್ಲೈನ್ನಲ್ಲಿ ರಜೆಗೆ ಅರ್ಜಿ ಸಲ್ಲಿಸಬಹುದು, ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು, ತೆಗೆದುಕೊಂಡ ರಜೆಗಳ ವಿವರ ಹಾಗೂ ಬಾಕಿ ರಜೆಗಳ ಮಾಹಿತಿಯನ್ನು ಪಡೆಯಬಹುದು. ಪೂರ್ವ ನಿರ್ಧಾರಿತ workflow ನಲ್ಲಿರುವ ಶ್ರೇಣಿಯ ಮೂಲಕ ಸ್ವಯಂಚಾಲಿತವಾಗಿ ರಜೆ ಮಂಜೂರಾತಿ ಪ್ರಕ್ರಿಯೆ ನಡೆಯುತ್ತದೆ.

ಸರ್ಕಾರದ ಪ್ರಸ್ತುತ ನಿಯಮಾವಳಿಗಳ ಪ್ರಕಾರ ರಜೆ ನಿಯಮಗಳನ್ನು ಹೊಂದಿಸಲಾಗಿದ್ದು, ಪಾತ್ರಾಧಾರಿತ ರಜೆ ಪ್ರಕ್ರಿಯೆಯನ್ನು ಅಳವಡಿಸಲಾಗಿದೆ. ಈ ವ್ಯವಸ್ಥೆಯು ಕಾಗದ ಅಧಾರಿತ ಅರ್ಜಿಗಳನ್ನು ತೊಡೆದುಹಾಕಿ. ವೇಗವಾದ ಮತ್ತು ಸಮಯಬದ್ಧ ಪ್ರಕ್ರಿಯೆಗೆ ನೆರವಾಗುತ್ತದೆ. ಮಂಜೂರಾತಿ ಪ್ರಾಧಿಕಾರವು ರಜೆ ಮಂಜೂರು ಮಾಡುವ ಮೊದಲು ನೌಕರರ ಬಾಕಿ ರಜೆ ಮತ್ತು ರಜೆ ವಿವರಗಳನ್ನು ವೀಕ್ಷಿಸಬಹುದಾಗಿದೆ.
ಇನ್ನೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ Leave Management System ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ, ಈ ಕೆಳಕಂಡ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
1. ನೋಡಲ್ ಅಧಿಕಾರಿ: ಮುಖ್ಯ ಆಡಳಿತ ಅಧಿಕಾರಿಗಳು, HFWS
2. ಸಹಾಯಕ ನೋಡಲ್ ಅಧಿಕಾರಿಗಳು:
* ಗ್ರೂಪ್ ಎ ಅಧಿಕಾರಿಗಳಿಗೆ: ಸಹಾಯಕ ಆಡಳಿತ ಅಧಿಕಾರಿಗಳು (JRO/HRO)
* ಗ್ರೂಪ್ ಬಿ ಅಧಿಕಾರಿಗಳಿಗೆ: ಆಡಳಿತ ಅಧಿಕಾರಿಗಳು ಸಾಮಾನ್ಯ (AOG)
* ಗ್ರೂಪ್ ಸಿ ನೌಕರರುಗಳಿಗೆ: ಆಡಳಿತ ಅಧಿಕಾರಿಗಳು ಸಾರಿಗೆ (AOT)
* ಗ್ರೂಪ್ ಡಿ ನೌಕರರುಗಳಿಗೆ: ಆಡಳಿತ ಅಧಿಕಾರಿಗಳು ಕುಟುಂಬ ಕಲ್ಯಾಣ (AOFW)
ಪ್ರಮುಖ ಸೂಚನೆಗಳೇನು?
1. ಸಹಾಯಕ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅಧಿಕಾರಿ/ನೌಕರರ ಖಾತೆಯಲ್ಲಿರುವ ರಜೆಗಳನ್ನು Leave Management System ನಲ್ಲಿ ದಿನಾಂಕ 08.11.2024 ರೊಳಗೆ ನಮೂದಿಸತಕ್ಕದ್ದು.
2. ನೋಡಲ್ ಅಧಿಕಾರಿಗಳು ಈ ಎಲ್ಲ ಚಟುವಟಿಕೆಗಳ ಮೇಲ್ವಿಚಾರಣೆ ನಡೆಸತಕ್ಕದ್ದು.
3. 3. ದಿನಾಂಕ 11.11.2024 ರಿಂದ ಎಲ್ಲಾ ಅಧಿಕಾರಿ/ನೌಕರರ ರಜೆ ನಿರ್ವಹಣೆಯನ್ನು ಕಡ್ಡಾಯವಾಗಿ Leave Management System ಮೂಲಕವೇ ನಿರ್ವಹಿಸತಕ್ಕದ್ದು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications