ಹಿಂದಿ ಹೇರಿಕೆ. ಕರವೇ ನಾರಾಯಣ ಗೌಡ್ರ ಲೇಖನ - 4
ನರೇಂದ್ರ ಮೋದಿಯವರು ಪ್ರಧಾನಿಯಾದ ಸಂದರ್ಭದಲ್ಲಿ ನಾನು ಅವರಿಗೆ ಬರೆದ ಬಹಿರಂಗ ಪತ್ರದಲ್ಲಿ 'ಹಿಂದಿಹೇರಿಕೆ'ಯ ವಿಷಯವನ್ನು ಪ್ರಸ್ತಾಪಿಸಿದ್ದೆ. ಅದರ ಕೆಲವು ಸಾಲುಗಳು ಹೀಗಿವೆ-" ದೇಶವನ್ನು ಕಟ್ಟುವ ಬಗೆಯ ಕುರಿತು ಹಲವು ಬಗೆಯ ಅಭಿಪ್ರಾಯಗಳು, ನಿಲುವುಗಳು ಇವೆ. 'ವಿವಿಧತೆಯಲ್ಲಿ ಏಕತೆ' ನಮ್ಮ ಪ್ರಜಾಪ್ರಭುತ್ವದ ವಿಶೇಷ ಗುಣ ಎಂದು ಸಂವಿಧಾನ ಸಾರುತ್ತದೆ.
ನನ್ನಂಥವರು ನಂಬುವುದು ಈ 'ವಿವಿಧತೆಯಲ್ಲಿ ಏಕತೆ' ಎಂಬ ಮೂಲಮಂತ್ರವನ್ನು. ಈ ದೇಶ ಬಹುಭಾಷಿಕರ ನಾಡು, ಬಹು ಸಂಸ್ಕೃತಿಗಳ ನೆಲೆವೀಡು. ಈ ಸಾಂಸ್ಕೃತಿಕ ವೈವಿಧ್ಯತೆ ಜೀವಂತವಾಗಿದ್ದಷ್ಟು ಕಾಲ ಈ ದೇಶ ಒಂದಾಗಿರಲು ಸಾಧ್ಯ. ಒಂದು ವೇಳೆ ಈ 'ಬಹುತ್ವ'ವನ್ನು ಹೊಸಕಿ ಹಾಕಿ 'ಏಕತ್ವ'ವನ್ನು ದೇಶದ ಮೇಲೆ ಹೇರಲು ಹೊರಟರೆ ಅದರ ಪರಿಣಾಮ ಭೀಕರವಾಗುತ್ತದೆ.

ಈ ದೇಶ ಒಂದಾಗಿ ಉಳಿಯುವುದೇ ಕಷ್ಟಸಾಧ್ಯವಾಗುತ್ತದೆ. ಕನ್ನಡಿಗರು ಕನ್ನಡಿಗರಾಗಿಯೇ, ಕನ್ನಡ ಸಂಸ್ಕೃತಿಯನ್ನು ಮುಂದುವರೆಸಿಕೊಂಡೇ ದೇಶದ ಭಾಗವಾಗಿರುವ ಅವಕಾಶ ನೀಡಬೇಕು. ಅದೇ ರೀತಿ ಗುಜರಾತಿಗಳು ಗುಜರಾತಿಗಳಾಗಿಯೇ ಗುಜರಾತಿ ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತ ದೇಶದ ಭಾಗವಾಗಬೇಕು. ಆದರೆ ದೇಶವನ್ನು ಆಳಿಕೊಂಡು ಬಂದ, ದೇಶವನ್ನು ನಿಯಂತ್ರಿಸಿಕೊಂಡು ಬಂದ ಶಕ್ತಿಗಳು 'ಬಹುತ್ವ'ದ ಶತ್ರುಗಳಂತೆಯೇ ವರ್ತಿಸುತ್ತಿವೆ.
ಅದಕ್ಕೆ ಅತ್ಯಂತ ಪರಿಣಾಮಕಾರಿಯಾದ ಉದಾಹರಣೆಯೆಂದರೆ ಈಗಲೂ ಆಂತರಿಕ ದಂಗೆಯಿಂದ ಬಸವಳಿದಿರುವ ಈಶಾನ್ಯ ರಾಜ್ಯಗಳು. ಈಶಾನ್ಯ ರಾಜ್ಯಗಳ ಭಾಷೆ, ಸಂಸ್ಕೃತಿಯ ಮೇಲೆ ಸವಾರಿ ಮಾಡಿದ ಪರಿಣಾಮವನ್ನು ನಾವು ಈಗ ಕಣ್ಣಾರೆ ನೋಡುತ್ತಿದ್ದೇವೆ. ಏಕಧರ್ಮ, ಏಕ ಸಂಸ್ಕೃತಿ, ಏಕಭಾಷೆಯನ್ನು ಯಾವುದೇ ಸಮುದಾಯದ ಮೇಲೆ ಹೇರಲು ಯತ್ನಿಸುವುದು ಅತ್ಯಂತ ಅಮಾನವೀಯ ಮತ್ತು ಕ್ರೂರತನ. ಇದು ದೇಶ ಕಟ್ಟುವ ಕೆಲಸ ಅಲ್ಲವೇ ಅಲ್ಲ."
ಕೇಂದ್ರ ಸರ್ಕಾರದ ಮುಂದೆ ಈಗ ಇರುವುದು ಎರಡು ಆಯ್ಕೆ. ಒಂದು ಎಲ್ಲ ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತ, ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ಈ ದೇಶದ ಬಹುತ್ವವನ್ನು ಆ ಮೂಲಕ ಸಾರ್ವಭೌಮತೆಯನ್ನು ಕಾಪಾಡುವುದು.
ಎರಡನೇ ಆಯ್ಕೆ ಆತ್ಮಘಾತಕನದ್ದು, ಹಿಂದಿಯನ್ನು ಬಲವಂತವಾಗಿ ಎಲ್ಲ ರಾಜ್ಯಗಳ ಮೇಲೂ ಹೇರುವ ಮೂಲಕ ಈ ದೇಶದಲ್ಲಿ ಒಡಕಿಗೆ ಕಾರಣವಾಗುವುದು, ಅಖಂಡತೆಗೆ ಕುತ್ತು ತಂದುಕೊಳ್ಳುವುದು.
ಕೇಂದ್ರ ಸರ್ಕಾರ ದೇಶವನ್ನು ಅಖಂಡವಾಗಿ ಉಳಿಸುವ ನಿರ್ಧಾರವನ್ನೇ ಕೈಗೊಳ್ಳುತ್ತದೆ ಎಂಬ ಆಶಾಭಾವನೆ ನನ್ನದು. ಇಲ್ಲದೇ ಹೋದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಂತೂ ಯಾವುದೇ ಸ್ವರೂಪದ ಹೋರಾಟಕ್ಕೂ ಸಜ್ಜಾಗಿಯೇ ಇರುತ್ತದೆ.
-
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications