ವಿನೂತನ ಪ್ರತಿಭಟನೆ : ಸಿಎಂಗೆ ಒಂದು ಕೆಜಿ ಹಂದಿಮಾಂಸ ಪಾರ್ಸೆಲ್!
ವಿಜಯಪುರ, ನ 4: ಗೋಮಾಂಸ ವಿಚಾರದಲ್ಲಿ ಒಬ್ಬರು ರುಂಡ ಚೆಂಡಾಡುತ್ತೇನೆಂದು ಬಂಧನಕೊಳ್ಳಗಾದರೆ, ಹಿಂದೂಪರ ಸಂಘಟನೆಯೊಂದು ಗೋಮಾಂಸ ಭಕ್ಷಣೆಯ ಹೇಳಿಕೆಯ ವಿಚಾರದಲ್ಲಿ ಮುಖ್ಯಮಂತ್ರಿ ವಿರುದ್ದ ವಿನೂತನ ಪ್ರತಿಭಟನೆ ನಡೆಸಿದೆ.
ಶ್ರೀರಾಮಸೇನೆ ಸಿಎಂ ಸಿದ್ದರಾಮಯ್ಯನವರಿಗೆ ಒಂದು ಕೆಜಿ ಹಂದಿ ಮಾಂಸವನ್ನು ವಿಜಯಪುರದಿಂದ ಮುಖ್ಯಮಂತ್ರಿ ಕಚೇರಿಗೆ ಪಾರ್ಸೆಲ್ ಮಾಡಿದೆ.
ಬಿಜೆಪಿ ಮತ್ತು ಸಂಘಪರಿವಾರದವರು ಗಲಾಟೆ ಮಾಡುತ್ತಿರುವುದನ್ನು ನೋಡಿದರೆ ನನಗೂ ಗೋಮಾಂಸ ತಿನ್ನಬೇಕು ಎಂದನಿಸುತ್ತದೆ. ಇಷ್ಟಪಟ್ಟರೆ ಗೋಮಾಂಸ ಜೊತೆಗೆ ಹಂದಿಮಾಂಸವನ್ನೂ ತಿನ್ನುತ್ತೇನೆಂದು ಮುಖ್ಯಮಂತ್ರಿಗಳು ಹೇಳಿದ್ದರು. (ಗೋಮಾಂಸ ತಿನ್ನುವೆ ಎಂದ ಸಿ.ಎಂ ಕ್ಷಮೆ ಕೇಳಲಿ)
ಇದಕ್ಕೆ ನಗರದಲ್ಲಿ ಮಂಗಳವಾರ (ನ 3) ಪ್ರತಿಕ್ರಿಯಿಸುತ್ತಾ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಮುಖ್ಯಮಂತ್ರಿಗಳು ಅವರ ಸಂಪುಟ ಸಹದ್ಯೋಗಿಗಳ ಬಾಯಿಚಪಲ ತೀರಿಸಲು ವಿಜಯಪುರದಿಂದ ಒಂದು ಕೆಜಿ ಹಂದಿಮಾಸ ಪಾರ್ಸೆಲ್ ಕಳುಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ನಾವೇನಾದರೂ ಹೇಳಿಕೆ ನೀಡಿದರೆ ಅಥವಾ ಪ್ರತಿಭಟನೆ ನಡೆಸಿದರೆ ಅದು ಕೋಮು ಪ್ರಚೋದನೆಯಾಗುತ್ತದೆ. ಮುಖ್ಯಮಂತ್ರಿಗಳು ಗೋಮಾಂಸದ ಬಗ್ಗೆ ಮಾತನಾಡಿದರೆ ಅದು ಪ್ರಚೋದನಕಾರೀ ಆಗುವುದಿಲ್ಲವೇ ಎಂದು ಮುತಾಲಿಕ್ ಪ್ರಶ್ನಿಸಿದ್ದಾರೆ. ಮುಂದೆ ಓದಿ..

ಬಹುಸಂಖ್ಯಾತರಿಗೆ ನೋವಾಗಿದೆ
ರಾಜ್ಯದ ಮುಖ್ಯಮಂತ್ರಿಯಾಗಿ ಗೋಮಾಂಸ ಭಕ್ಷಣೆಯ ವಿಚಾರದಲ್ಲಿ ಅವರ ಹೇಳಿಕೆ ಬಹುಸಂಖ್ಯಾತ ಕೋಮಿನವರಿಗೆ ನೋವಾಗಿದೆ. ನಾವು ಮುಖ್ಯಮಂತ್ರಿಗಳ ವಿರುದ್ದ ಕೇಸ್ ದಾಖಲಿಸುತ್ತೇವೆ - ಪ್ರಮೋದ್ ಮುತಾಲಿಕ್.

ಗೋವಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ
ಗೋಮಾಂಸದ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ನಾವಲ್ಲ, ಕಾಂಗ್ರೆಸ್. ಗೋಮಾಂಸ ತಿನ್ನುತ್ತೇನೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆ ಖಂಡನಾರ್ಹ, ಅವರು ರಾಜ್ಯದ ಕ್ಷಮೆಯಾಚಿಸಲಿ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹಿಸಿದ್ದಾರೆ.

ಸಿ ಟಿ ರವಿ ಹೇಳಿಕೆ
ರಾಜ್ಯದ ಅಭಿವೃದ್ದಿ ಕಡೆಗೆ ಗಮನ ಕೊಡುವುದನ್ನು ಬಿಟ್ಟು, ಮುಖ್ಯಮಂತ್ರಿಗಳು ಸಮಾಜದ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಗೋಮಾಂಸ ಭಕ್ಷಣೆಯ ಬಗ್ಗೆ ಸಿಎಂ ಹೇಳಿಕೆ ನೋವು ತರುವಂತದ್ದು - ಸಿ ಟಿ ರವಿ.

ಬಿಜೆಪಿಯದ್ದು ವೋಟ್ ಬ್ಯಾಂಕ್ ರಾಜಕಾರಣ
ಆಹಾರ ಸಂಸ್ಕೃತಿ ಅವರವರ ಇಷ್ಟಕ್ಕೆ ಬಿಟ್ಟ ವಿಚಾರ, ಬಿಜೆಪಿಯವರಿಗೆ ಇದು ಅರ್ಥವಾಗುವುದಿಲ್ಲ. ಅವರಿಗೆ ರಾಜಕೀಯ ಮಾಡೋಕೆ ಏನಾದರೂ ಕಾರಣ ಬೇಕು. ಹಾಗಾಗಿ ಗೋಮಾಂಸದ ವಿಚಾರದಲ್ಲಿ ಗಲಾಟೆ ಮಾಡುತ್ತಿದ್ದಾರೆ - ವಿ ಎಸ್ ಉಗ್ರಪ್ಪ.

ಯು ಟಿ ಖಾದರ್
ತನ್ನ ಹಿಂದಿನ ಸರಕಾರದ ಅವಧಿಯಲ್ಲೂ ಬಿಜೆಪಿ ಗೋಹತ್ಯೆಯನ್ನು ಸಂಪೂರ್ಣ ನಿಷೇಧಿಸಲಿಲ್ಲ. ಕೇಂದ್ರ ಸರಕಾರದ್ದೂ ಈ ವಿಚಾರದಲ್ಲಿ ಸ್ಪಷ್ಟ ನಿಲುವಿಲ್ಲ. ಬಿಜೆಪಿಯವರಿಗೆ ಇದು ರಾಜಕೀಯದ ವಿಷಯವಾಗಿದ್ದು ಬೇಸರ ತಂದಿದೆ - ಆರೋಗ್ಯ ಸಚಿವ ಯು ಟಿ ಖಾದರ್.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications