ಅಂಗಾಂಗ ದಾನ: ಕರ್ನಾಟಕದಲ್ಲಿ 1 ವರ್ಷದಲ್ಲಿ ನೂರಾರು ಮಂದಿಗೆ ಮರುಜೀವ, ಮಾಹಿತಿ ನೀಡಿದ ಆರೋಗ್ಯ ಸಚಿವರು
ಬೆಂಗಳೂರು ಜನವರಿ 17: ಅಂಗಾಂಗ ದಾನ ಶ್ರೇಷ್ಠ ದಾನವೆಂದೇ ಪರಿಗಣಿಸಲಾಗುತ್ತದೆ. ಇತ್ತೀಚೆಗೆ ಅಂಗಾಂಗ ದಾನ ಮಾಡುವರರ ಸಂಖ್ಯೆ ಹೆಚ್ಚಾಗುತ್ತಿದೆ. ಪರಿಣಾಮ ಒಂದೇ ವರ್ಷದಲ್ಲಿ 389 ಜನರಿಗೆ ಮರು ಜೀವ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು ಮೆಡಿಕಲ್ ಸರ್ವಿಸಸ್ ಟ್ರಸ್ಟ್ (BMST) ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ 'ಅನ್ಸಂಗ್ ಹೀರೋಸ್ʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಟ್ಟು 19 ಅಂಗಾಂಗ ದಾನ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇದಕ್ಕೂ ಮೊದಲು ರಾಜ್ಯದಲ್ಲಿ ಒಂದೇ ಅಂಗಾಗ ದಾನ ಕೇಂದ್ರ ಇತ್ತು ಎಂದರು.
ಕರ್ನಾಟಕದಲ್ಲಿ ಇತರರ ಜೀವ ಉಳಿಸಬಹುದಾದ ಅಂಗಾಂಗ ದಾನದ ಪ್ರಮಾಣ ಹೆಚ್ಚುತ್ತಿರುವುದು ಸಂತಸದ ಸಂಗತಿ. ಕಳೆದ ವರ್ಷ ನಡೆದ ಅಂಗಾಂಗ ದಾನಗಳಿಂದ ಸಂಕಷ್ಟದಲ್ಲಿ 389 ಮಂದಿಗೆ ಮರು ಜೀವ ಸಿಕ್ಕಿದೆ.ಈ ನಿಟ್ಟಿನಲ್ಲಿ ಜನರು ಇನ್ನೂ ಹೆಚ್ಚು ಜಾಗೃತರಾಗಬೇಕು ಎಂದು ಅವರು ಅಂಗಾಂಗ ದಾನದ ಮಹತ್ವ ತಿಳಿಸಿದರು.

ಅಂಗಾಂಗ ದಾನದ ನಿರ್ವಹಣೆಗೆ ರಾಜ್ಯದಲ್ಲಿ ಸೊಟ್ಟೊ ಎಂಬ ಸಂಸ್ಥೆ ಇದೆ. ಕಳೆದ ಮೂರು ವರ್ಷಗಳಲ್ಲಿ ಅಂಗಾಂಗ ದಾನಕ್ಕೆ ಹೆಚ್ಚು ಒತ್ತು ನೀಡಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಹೀಗಾಗಿ ದಾನಿಗಳ ಸಂಖ್ಯೆ ಏರಿಕೆ ಆಗಿದೆ. ಅಂಗಾಂಗ ದಾನ ಮಾಡುವವರು ಸಾವಿನ ನಂತರವೂ ಮತ್ತೊಬ್ಬರ ಬದುಕಿಗೆ ದಾರಿ ದೀಪವಾಗುತ್ತದೆ. ಇಂತಹ ಪುಣ್ಯದ ಕೆಲಸ ಮತ್ತೊಂದಿಲ್ಲ. ಕೋವಿಡ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಈ ಬಗ್ಗೆ ಕೂಡ ಜಾಗೃತಿ ಕಾರ್ಯಕ್ರಮಗಳಿಂದಾಗಿ ಅಂಗಾಂಗ ದಾನ ನಡೆದಿದೆ. ಹಾಗೆಯೇ ದಾನಕ್ಕೆ ಹೆಸರು ನೋಂದಣಿ ಪ್ರಕ್ರಿಯೆ ಕೂಡ ನಡೆದಿದೆ ಎಂದು ವಿವರಿಸಿದರು.
ಒಬ್ಬ ವ್ಯಕ್ತಿ ಅಂಗಾಂಗ ದಾನ: 8 ಮಂದಿಗೆ ಉಪಯೋಗ
ರಕ್ತದಾನ ಮಹಾದಾನ ಎಂದು ಹೇಳಲಾಗುತ್ತದೆ. ಹಾಗೆಯೇ, ಅಂಗಾಂಗ ದಾನ ಸರ್ವಶ್ರೇಷ್ಠ ದಾನವಾಗಿದೆ. ಒಬ್ಬ ವ್ಯಕ್ತಿ ಮರಣದ ಬಳಿಕ 8 ಜನರಿಗೆ ಅಂಗಾಂಗಗಳನ್ನು ದಾನ ಮಾಡಬಹುದು. ವ್ಯಕ್ತಿ ಮೃತಪಟ್ಟಾಗ ಕುಟುಂಬದವರು ಬಹಳ ದುಃಖದಲ್ಲಿರುತ್ತಾರೆ. ಅಂತಹ ಸಂದರ್ಭದಲ್ಲಿ ವೈದ್ಯರು ಕುಟುಂಬದವರ ಮನ ಒಲಿಸಿ ಅಂಗಾಂಗ ದಾನ ಮಾಡಿಸುತ್ತಾರೆ. ಹಾಗೆಯೇ ಕಡಿಮೆ ಸಮಯದೊಳಗೆ ಮಾಡುವ ಕಸಿಗಾಗಿ ಸಂಚಾರಿ ಪೊಲೀಸರು ಗ್ರೀನ್ ಕಾರಿಡಾರ್ ನಿರ್ಮಿಸುತ್ತಾರೆ. ಕೆಲ ಸಂದರ್ಭದಲ್ಲಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದು ಹೇಳಿದರು.

ನಾನು ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗ, ರಾಜ್ಯದಲ್ಲಿ ಒಂದೇ ಒಂದು ಅಂಗಾಂಗ ಪಡೆಯುವ ಕೇಂದ್ರ ಇತ್ತು. ಬಳಿಕ ಮೆಡಿಕಲ್ ಕಾಲೇಜು, ಸೂಪರ್ ಸ್ಪೆಷಾಲಿಟಿ ಸೇರಿದಂತೆ ಹಲವೆಡೆ ಒಟ್ಟು 19 ಕೇಂದ್ರಗಳನ್ನು ನಿರ್ಮಿಸಲಾಗಿದೆ. ಇದು ಬಿಜೆಪಿ ಸರ್ಕಾರದಿಂದ ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications