ಸಮೀಕ್ಷೆ: 2018ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ 150 ಸ್ಥಾನ!
ಬೆಂಗಳೂರು, ಮಾರ್ಚ್ 15: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿರುವುದು ಗೊತ್ತಿರುವ ವಿಚಾರ. ಭಾರತದ ನಾನಾ ರಾಜ್ಯಗಳಲ್ಲಿ ಈಗಾಗಲೇ ಕೇಸರಿ ಧ್ವಜ ಹಾರಾಡುತ್ತಿದ್ದು, ಕರ್ನಾಟಕದಲ್ಲಿ ಭರ್ಜರಿ ಗೆಲುವು ದಾಖಲಿಸುವ ಆಲೋಚನೆಯಲ್ಲಿದೆ. ಈ ಹಿಂದೆ ಇಲ್ಲಿ ಚುಕ್ಕಾಣಿ ಹಿಡಿದಿದ್ದ ಕೇಸರಿ ಪಕ್ಷ, ಮತ್ತೆ ಗೆಲ್ಲುವ ಹವಣಿಕೆಯಲ್ಲಿದೆ. [ಕರ್ನಾಟಕದಲ್ಲಿ ಬಿಜೆಪಿ ತ್ವರಿತವಾಗಿ ಮಾಡಬೇಕಿರುವ 7 ಸಂಗತಿ]
ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾತನಾಡಿ, ನರೇಂದ್ರ ಮೋದಿ ಹಾಗೂ ಅಮಿತ್ ಶಾ ವರ್ಚಸ್ಸಿನಿಂದ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದೆ. ನಾನು ನೆಪಕ್ಕೆ ಮಾತ್ರ ಎಂದಿದ್ದರು. ಇಡೀ ಭಾರತದಲ್ಲಿರುವ ಬಿಜೆಪಿ ಅಲೆ ಮತ್ತು ಪಕ್ಷದ ಆಂತರಿಕ ಸಮೀಕ್ಷೆ ಪ್ರಕಾರ, 2018ರ ವಿಧಾನಸಭೆ ಚುನಾವಣೆಯಲ್ಲಿ 150-160 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂಬ ಸೂಚನೆ ಸಿಕ್ಕಿದೆಯಂತೆ.[ಪ್ರಧಾನಿ ಮೋದಿ 'ಅಶ್ವಮೇಧ'ದ ಕುದುರೆಯನ್ನು ನಾವು ಕಟ್ಟಿ ಹಾಕುತ್ತೇವೆ]

ಕರ್ನಾಟಕದ ಒಟ್ಟು 224 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿ ಸಮೀಕ್ಷೆ ಸೂಚಿಸುವಂತೆ 150 ಸ್ಥಾನಗಳನ್ನು ಗೆಲ್ಲಲಿದೆ. ಈ ಲೆಕ್ಕಾಚಾರದಲ್ಲಿ ಏನೇ ಹೆಚ್ಚು ಕಡಿಮೆ ಆದರೂ ಕನಿಷ್ಠ 129 ಸೀಟುಗಳನ್ನು ಬಿಜೆಪಿ ಪಡೆಯಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಅಧಿಕಾರ ಹಿಡಿಯಲು ಇಷ್ಟು ಪ್ರಮಾಣದ ಸ್ಥಾನ ಗೆದ್ದರೆ ಸಾಕು.

ಇನ್ನು ಕಾಂಗ್ರೆಸ್ 50, ಜೆಡಿಎಸ್ 22 ಇತರ ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವ ಸಾಧ್ಯತೆಗಳಿವೆಯಂತೆ. ಸನ್ನಿವೇಶ ಹಾಗಾದರೆ ಇತರರ ಬೆಂಬಲ ಇಲ್ಲದೆ ಸ್ವತಂತ್ರವಾಗಿ ಬಿಜೆಪಿ ಸರಕಾರ ರಚನೆ ಮಾಡಲಿದೆ. 2008ರ ಚುನಾವಣೆ ನಂತರ ಪಕ್ಷದಲ್ಲಿ ಭಿನ್ನಮತ, ಅಸಮಾಧಾನ ಬುಗಿಲೆದ್ದಿತ್ತು. ಈ ಬಾರಿ ಹಾಗಾಗದಂತೆ ಎಚ್ಚರದಿಂದ ಇರುವ ಭರವಸೆ ನೀಡಿದ್ದಾರೆ ರಾಜ್ಯ ಬಿಜೆಪಿ ನಾಯಕರು.[ಸಿದ್ರಾಮಯ್ಯನವರೇ ಕಾಂಗ್ರೆಸ್ ಗೆ ಅಧಿಕಾರ ಭಾಗ್ಯ ಕೊಡಿಸ್ತೀರಾ?]
ಪಕ್ಷದ ವರಿಷ್ಠರು ಈಗಾಗಲೇ ರಾಜ್ಯದ ನಾಯಕರಿಗೆ ಎಚ್ಚರಿಕೆ ನೀಡಿದ್ದು, ಒಗ್ಗಟ್ಟಾಗಿದ್ದು ಪಕ್ಷ ಗೆಲ್ಲುವಂತೆ ಸೂಚನೆ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications