Covid Rise: ರಾಜ್ಯದಲ್ಲಿ ಸೋಂಕು ಹೆಚ್ಚಾದರೂ 'ಜಿನೋಮ್ ಸಿಕ್ವೆನ್ಸಿಂಗ್' ಆರಂಭಿಸಿಲ್ಲ
ಬೆಂಗಳೂರು, ಡಿಸೆಂಬರ್ 24: ಕರ್ನಾಟಕದಲ್ಲಿ ಕಳೆದ ಒಂದೇ ವಾರದಲ್ಲಿ ಕೊರೊನಾ ತೀವ್ರಗತಿಯಲ್ಲಿ ಏರಿಕೆ ಆಗುತ್ತಿದೆ. ಕೇರಳದಲ್ಲಿ ಕೋವಿಡ್ 19 ಉಪತಳಿ ಪತ್ತೆ ಆದ ಮೇಲಂತೂ ಈ ಎರಡು ರಾಜ್ಯಗಳಲ್ಲಿ ಪಾಸಿಟಿವಿಟಿ ನಿಧಾನಕ್ಕೆ ಏರಿಕೆ ಆಗುತ್ತಲೇ ಇದೆ. ದೇಶದಲ್ಲೇ ಕೊರೊನಾ ಏರಿಕೆ ಪ್ರಕರಣಗಳಲ್ಲಿ ಎರಡನೇ ಸ್ಥಾನ ದಾಖಲಿಸಿರುವ ಕರ್ನಾಟಕ ಈವರೆಗೆ 'ಸೋಂಕು ಉಪತಳಿ ಪತ್ತೆ ಲ್ಯಾಬ್' ಅನ್ನು ಪುನಾರಂಭಕ್ಕೆ ಮುಂದಾಗಿಲ್ಲ. ಕಾರಣವೇನು? ಇಲ್ಲಿ ತಿಳಿಯೋಣ.
ಕೊರೊನಾ ಮೊದಲ ಅಲೆಯ ಆರ್ಭಟ ನಂತರ ಈ ಜಿನೋಮ್ ಸಿಕ್ವೆನ್ಸಿಂಗ್ ತೆರೆಯಲಾಗಿತ್ತು. ಇದಕ್ಕೆ ಹೊರ ಗುತ್ತಿಗೆ ಆಧಾರದಲ್ಲಿ ಆರೋಗ್ಯ ಸಿಬ್ಬಂದಿ ಮತ್ತು ತಂತ್ರಜ್ಞರನ್ನು ನೇಮಕ ಮಾಡಿಕೊಂಡಿತ್ತು. ಕೋವಿಡ್ ಕಡಿಮೆ ಆದ ಬಳಿಕ ಕೆಲಸ ನಿಲ್ಲಿಸಿದ್ದ ಪ್ರಯೋಗಾಲಯ ಇದೀಗ ಕೋವಿಡ್ ಏರಿಕೆ ಆದರೂ ಪುನಾರಂಭಗೊಂಡಿಲ್ಲ.

ಕೇರಳದಲ್ಲಿ ಕೊರೊನಾ ಉಪತಳಿ ಜೆಎನ್ 1 ಅಬ್ಬರ ಹೆಚ್ಚಾಗಿದೆ. ಇತ್ತ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಕೊರೊನಾ ಅಲೆ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲಿ ಅಧಿಕ ಕೇಸುಗಳು ದಾಖಲಾಗುತ್ತಿವೆ. ಈವರೆಗೆ ರಾಜ್ಯದಲ್ಲಿ ಹರುಡುತ್ತಿರುವ ಸೋಂಕು ಯಾವುದು ಎಂಬುದರ ಬಗ್ಗೆ ಖಚಿತತೆ ಇಲ್ಲ ಎನ್ನಲಾಗುತ್ತಿದೆ.
ಜಿನೋಮ್ ಸಿಕ್ವೆನ್ಸಿಂಗ್ ಪುನಾರಂಭವಾಗಬೇಕು
ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (BMCRI) ನಲ್ಲಿ ರಾಜ್ಯ ಸರ್ಕಾರ ಎರಡನೇ ಅಲೆ ವೇಳೆ ತೆರೆದಿದ್ದ ಸೋಂಕು ಉಪತಳಿ ಪತ್ತೆ ಕೇಂದ್ರ ಮತ್ತೆ ಆರಂಭಿಸಬೇಕಿದೆ. ಈ ಹಿಂದೆ ಸರ್ಕಾರ ಕೋವಿಡ್ ಕಡಿಮೆ ಆದ ಹಿನ್ನೆಲೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಸಿಬ್ಬಂದಿಯನ್ನು ಕೈ ಬಿಟ್ಟಿತ್ತು. ಇದೀಗ ಅವರನ್ನು ಮತ್ತೆ ನೇಮಿಸುವ ಕೆಲಸವಾಗಬೇಕಿದೆ.
ವೈದ್ಯಾಧಿಕಾರಿಗಳು ಹೇಳುವ ಪ್ರಕಾರ, ಈ ಲ್ಯಾಬ್ ಗೆ ಸೋಂಕಿಗೆ ಸಂಬಂಧಿಸಿದ ಸುಮಾರು ಕನಿಷ್ಠ 50 ಮಾದರಿಗಳು ಬರಬೇಕು. ಎದೆಯ ಸಿಟಿ ಸ್ಕ್ಯಾನ್ ಮಾಡಿದಾಗ ಸಿಟಿ ವ್ಯಾಲ್ಯೂ 30ಕ್ಕಿಂತ ಕಡಿಮೆ ಬಂದರೆ ಮಾತ್ರ ಜಿನೋಮ್ ನಲ್ಲಿ ಪತ್ತೆ ಕಾರ್ಯ ನಡೆಸಬೇಕು. ಅಲ್ಲದೇ ಒಂದೇ ಪ್ರದೇಶದಲ್ಲಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿದೆ. ಆಗ ಅಗತ್ಯವಾಗಿ ಜಿನೋಮ್ ಸಿಕ್ವೆನ್ಸಿಂಗ್ ಮಾಡಲಾಗುತ್ತದೆ.

ಕನಿಷ್ಠ ಮಾದರಿಗಳು ಬಂದಿಲ್ಲ
ಸದ್ಯದ ಪರಿಸ್ಥಿತಿಯಲ್ಲಿ ಇದ್ಯಾವುದು ಆಗುತ್ತಿಲ್ಲ. ಕನಿಷ್ಠ ಮಾದರಿಗಳು ಬಂದಿಲ್ಲ. ಕೊರೊನಾ ಏರಿಕೆ ಇದ್ದರೂ ಸಹ ಈ ಮೇಲಿನ ಮಾನದಂಡಗಳು ಇರುವ ಹಿನ್ನೆಲೆಯಲ್ಲಿ ಅವುಗಳ ಆದಾರದಲ್ಲಿ ಪರೀಕ್ಷೆ ಮಾಡಬೇಕಿರುತ್ತದೆ. ಅದು ಆಗದ ಹಿನ್ನೆಲೆ ಲ್ಯಾಬ್ ತೆರೆಯಲಾಗಿಲ್ಲ ಎಂದು ತಿಳಿಸಿದ್ದಾರೆ.
ಸದ್ಯ ಕೊರೊನಾ ಹೆಚ್ಚಾಗಿದ್ದರಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಒಟ್ಟು 20ಕ್ಕೂ ಅಧಿಕ ಮಂದಿಯ ಮಾದರಿಗಳನ್ನು ಪುಣೆಯಲ್ಲಿನ ಸೋಂಕು (ವೈರಾಣು) ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಇದೀಗ ಸೋಂಕು ಹೆಚ್ಚಾಗುತ್ತಿರುವ ಸಂಬಂಧ ಕರ್ನಾಟಕದಲ್ಲಿ ಈ ಪರೀಕ್ಷೆ ಮಾಡಬಹುದಾಗಿದೆ ಎಂದು ವೈದ್ಯಾಧಿಕಾರಿಗಳು ಅಭಿಪ್ರಾಯಪಟ್ಟರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications