ಚಿತ್ರಗಳು : ಕಬ್ಬಾಳಮ್ಮನಿಗೆ ನಮೋಃ ನಮಃ ಎಂದ ಡಿಕೆ ಶಿವಕುಮಾರ್
Recommended Video

ರಾಮನಗರ, ಆಗಸ್ಟ್ 30 : ಇಂಧನ ಸಚಿವ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಕಬ್ಬಾಳಮ್ಮ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಆದಾಯ ತೆರಿಗೆ ಇಲಾಖೆ ದಾಳಿ ನಡೆದ ಬಳಿಕ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್ ಮನೆ ದೇವರ ದರ್ಶನ ಪಡೆದರು.
ಬುಧವಾರ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಜೊತೆಗೆ ಕನಕಪುರದ ಸಾತನೂರು ರಸ್ತೆಯಲ್ಲಿರುವ ಕಬ್ಬಾಳು ಕ್ಷೇತ್ರಕ್ಕೆ ಭೇಟಿ ನೀಡಿದರು. ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, 'ಎಲ್ಲಾ ದುಷ್ಟ ಶಕ್ತಿಗಳಿಂದ ಮುಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ನಮಗೆ ಆಗದವರು ನಮ್ಮ ವಿರುದ್ಧ ಹರಕೆ ಹೊತ್ತಿರುತ್ತಾರೆ. ಅದರಿಂದ ಕಾಪಾಡುವಂತೆ ನಮನ ಸಲ್ಲಿಸಿದ್ದೇನೆ' ಎಂದರು.
ಡಿ.ಕೆ.ಶಿವಕುಮಾರ್ ಅವರು ಆದಾಯ ತೆರಿಗೆ ಇಲಾಖೆ ದಾಳಿ ಮುಗಿದ ಬಳಿಕ ಆಗಸ್ಟ್ 5ರಂದು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು. ಆದರೆ, ಅಂದು ಗುಜರಾತ್ನ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಇದ್ದ ಕಾರಣ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ದೇವಾಲಯಕ್ಕೆ ಭೇಟಿ ಚಿತ್ರಗಳು....

ಕಬ್ಬಾಳಮ್ಮನ ಶಕ್ತಿ ಅಪಾರ
ಕಬ್ಬಾಳಮ್ಮ ದೇವಿ ಭಕ್ತರ ಕಷ್ಟಗಳನ್ನು ದೂರ ಮಾಡುತ್ತಾಳೆ. ಆದ್ದರಿಂದ, ನೂರಾರು ಜನರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಕಬ್ಬಾಳಮ್ಮ ದೇವಿ ಭಕ್ತರ ಹರಕೆಗೆ ಮೆಚ್ಚಿ, ಬಲಗಡೆ ಹೂ ನೀಡಿದರೆ ಕೆಲಸ ಖಂಡಿತವಾಗಿಯೂ ನಡೆಯುತ್ತದೆ ಎಂಬ ನಂಬಿಕೆ ಇದೆ.

ಡಿಕೆ ಶಿವಕುಮಾರ್ಗೆ ಮನೆಯ ದೇವರು
ಕನಕಪುರದವರಾದ ಡಿ.ಕೆ.ಶಿವಕುಮಾರ್ ಅವರಿಗೆ ಕಬ್ಬಾಳಮ್ಮ ದೇವಿ ಮನೆಯ ದೇವರು. ಹಿಂದಿನಿಂದಲೂ ಅವರ ಕುಟುಂಬದವರು ಈ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಡಿ.ಕೆ.ಶಿವಕುಮಾರ್ ಅವರು ಸಹ ಇಲ್ಲಿಗೆ ನಡೆದುಕೊಳ್ಳುತ್ತಾರೆ.

ಕಬ್ಬಾಳಮ್ಮ ದೇವಾಲಯ ಎಲ್ಲಿದೆ?
ಶ್ರೀ ಕಬ್ಬಾಳಮ್ಮ ದೇವಿಯ ದೇವಸ್ಥಾನ ರಾಮನಗರ ಜಿಲ್ಲೆಯ ಕನಕಪುರದಿಂದ ಸಾತನೂರು ರಸ್ತೆಯಲ್ಲಿ 20 ಕಿ.ಮೀ.ಕ್ರಮಿಸಿದರೆ ಸಿಗುತ್ತದೆ. ಇದೊಂದು ಪುರಾತನ ಇತಿಹಾಸವಿರುವ ಸ್ಥಳವಾಗಿದೆ. ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ತಪ್ಪಿತಸ್ಥರನ್ನು ಇಲ್ಲಿಗೆ ಕರೆತಂದು ಬೆಟ್ಟದ ಮೇಲಿಂದ ತಳ್ಳಿ ಸಾಯಿಸಲಾಗುತ್ತಿತ್ತು ಎನ್ನುತ್ತದೆ ಇತಿಹಾಸ.

ದೇವಾಲಯದಲ್ಲಿ ನಂದಿ ಇದೆ
ಕಬ್ಬಾಳಮ್ಮ ದೇವಾಲಯದಲ್ಲಿ ನಂದಿ ಇದೆ. ಹಲವು ಭಕ್ತರು ಇದಕ್ಕೂ ಹರಕೆಯನ್ನು ಹೊರುತ್ತಾರೆ. ದೇವಿಗೆ ಹೊದಿಸಿದ ಸೀರೆಯನ್ನು ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡಲಾಗುತ್ತದೆ, ಆ ಸೀರೆಯನ್ನು ಮನೆಯಲ್ಲಿ ಪೂಜಿಸಿದವರಿಗೂ ಒಳಿತಾಗುತ್ತದೆ ಎಂಬ ನಂಬಿಕೆ ಇದೆ.

ಪ್ರಸಾದ ವಿತರಣೆ
ಡಿ.ಕೆ.ಶಿವಕುಮಾರ್ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ಮಾಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications