ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳಲ್ಲಿ : ಧರ್ಮಸ್ಥಳದಲ್ಲಿ ಸಮವಸರಣ ಪೂಜೆ

By ಸಚಿತ್ರ ವರದಿ : ಜನನಿ, ಧರ್ಮಸ್ಥಳ
|
Google Oneindia Kannada News

ಬೆಳ್ತಂಗಡಿ, ಡಿ.9: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇತ್ತೀಚೆಗೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು. ಕೈವಲ್ಯ ಜ್ಞಾನ ಪಡೆದ ತೀರ್ಥಂಕರರು ತಮ್ಮ ದಿವ್ಯ ಧ್ವನಿಯ ಮೂಲಕ ಧರ್ಮೋಪದೇಶ ನೀಡುವ ಸಭೆಗೆ ಸಮವಸರಣ ಎನ್ನುತ್ತಾರೆ. ಜೈನ ಸಂಪ್ರದಾಯದ ಪ್ರಕಾರ ಬಸದಿಗಳು ಸಮವಸರಣದ ಪ್ರತೀಕವಾಗಿವೆ.

ಹೆಗ್ಗಡೆಯವರ ಬೀಡಿನಿಂದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಮೂರ್ತಿಯನ್ನು ಮಹೋತ್ಸವ ಸಭಾ ಭವನಕ್ಕೆ ಭವ್ಯ ಮೆರವಣಿಗೆಯಲ್ಲಿ ಕೊಂಡುಹೋದ ಬಳಿಕ ಅಲ್ಲಿ ಸ್ಥಳೀಯ ಶ್ರಾವಕ - ಶ್ರಾವಿಕೆಯರಿಂದ ಅಷ್ಟವಿಧಾರ್ಚನೆ ಪೂಜೆ, ಸಂಗೀತ ಪೂಜೆ, ಪಂಚ ನಮಸ್ಕಾರ ಮಂತ್ರ ಪಠಣ ನಡೆಯಿತು. ಹೇಮಾವತಿ ವಿ. ಹೆಗ್ಗಡೆ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು.

ಶಿವಮೊಗ್ಗದ ಗಿರಿಜಮ್ಮ ದಾಸ್ ಆದಿಪುರಾಣ ಮಹಾಕಾವ್ಯದ ವಾಚನವನ್ನು ಮಾಡಿದರೆ, ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ.ಪಿ. ಸಂಪತ್ ಕುಮಾರ್ ಪ್ರವಚನ ಮಾಡಿದರು. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಡಿ. ಶ್ರೇಯಸ್ ಕುಮಾರ್ ಇದ್ದರು. ಸಮವಸರಣ ಪೂಜೆ ಚಿತ್ರಗಳು ಇಲ್ಲಿವೆ

ಭವ್ಯ ಮೆರವಣಿಗೆ

ಭವ್ಯ ಮೆರವಣಿಗೆ

ಹೆಗ್ಗಡೆಯವರ ಬೀಡಿನಿಂದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಮೂರ್ತಿಯನ್ನು ಮಹೋತ್ಸವ ಸಭಾ ಭವನಕ್ಕೆ ಭವ್ಯ ಮೆರವಣಿಗೆಯಲ್ಲಿ ಕೊಂಡುಹೋಗಲಾಯಿತು.

ಧರ್ಮೋಪದೇಶ

ಧರ್ಮೋಪದೇಶ

ತೀರ್ಥಂಕರರು ತಮ್ಮ ದಿವ್ಯ ಧ್ವನಿಯ ಮೂಲಕ ಧರ್ಮೋಪದೇಶ ನೀಡುವ ಸಭೆಗೆ ಸಮವಸರಣ ಎನ್ನುತ್ತಾರೆ. ಜೈನ ಸಂಪ್ರದಾಯದ ಪ್ರಕಾರ ಬಸದಿಗಳು ಸಮವಸರಣದ ಪ್ರತೀಕವಾಗಿವೆ.

ಮಂತ್ರ ಪಠಣ

ಮಂತ್ರ ಪಠಣ

ಹೆಗ್ಗಡೆಯವರ ಬೀಡಿನಿಂದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಮೂರ್ತಿಯನ್ನು ಮಹೋತ್ಸವ ಸಭಾ ಭವನಕ್ಕೆ ಭವ್ಯ ಮೆರವಣಿಗೆಯಲ್ಲಿ ಕೊಂಡುಹೋದ ಬಳಿಕ ಅಲ್ಲಿ ಸ್ಥಳೀಯ ಶ್ರಾವಕ - ಶ್ರಾವಿಕೆಯರಿಂದ ಅಷ್ಟವಿಧಾರ್ಚನೆ ಪೂಜೆ, ಸಂಗೀತ ಪೂಜೆ, ಪಂಚ ನಮಸ್ಕಾರ ಮಂತ್ರ ಪಠಣ ನಡೆಯಿತು.

ಪೂಜಾ ಕಾರ್ಯಕ್ರಮಗಳು

ಪೂಜಾ ಕಾರ್ಯಕ್ರಮಗಳು

ಹೇಮಾವತಿ ವಿ. ಹೆಗ್ಗಡೆ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಶಿವಮೊಗ್ಗದ ಗಿರಿಜಮ್ಮ ದಾಸ್ ಆದಿಪುರಾಣ ಮಹಾಕಾವ್ಯದ ವಾಚನವನ್ನು ಮಾಡಿದರೆ, ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ. ಸಂಪತ್ ಕುಮಾರ್ ಪ್ರವಚನ ಮಾಡಿದರು.

ಧರ್ಮಾಧಿಕಾರಿ ಉಪಸ್ಥಿತರಿದ್ದರು

ಧರ್ಮಾಧಿಕಾರಿ ಉಪಸ್ಥಿತರಿದ್ದರು

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಡಿ. ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.

English summary
In Jainism, Samavasarana or Samosarana "Refuge to All" is a term for the divine preaching hall or the assembly of the Tirthankara after attaining perfect knowledge or Kevala Jnana. The theme of Samavasaranas has been popular in Jain art. Here is a report on Samavasarana pooja held at Dharmasthala, Karnataka
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X