ಶ್ರೀಗಳ ಮೇಲೆ ಹವ್ಯಕ ಸಮಾಜಕ್ಕಿರುವ ಗೌರವ: 'ಬದ್ಧತಾ ಸಮಾವೇಶ'
ಬೆಂಗಳೂರು, ನ 27: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಬಗ್ಗೆ ಸಮಾಜಕ್ಕಿರುವ ಬದ್ಧತೆಯನ್ನು ಬಹಿರಂಗವಾಗಿ ಸಾರಿ ಹೇಳುವ ಸಲುವಾಗಿ ಹವ್ಯಕ ಮಹಾಮಂಡಲದ ಸಾರಥ್ಯದಲ್ಲಿ ಶನಿವಾರ (ನ 28) ಬೆಳಗ್ಗೆ ಹನ್ನೊಂದು ಗಂಟೆಗೆ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದ ಆವರಣದಲ್ಲಿ "ಬದ್ಧತಾ ಸಮಾವೇಶ"ವನ್ನು ಆಯೋಜಿಸಲಾಗಿದೆ.
ಶ್ರೀಗಳು ಎರಡು ದಶಕಗಳಿಂದ ಸಮಾಜದ ಹಿತಚಿಂತನೆಯ ಹಲವು ಕಾರ್ಯ ಯೋಜನೆಗಳನ್ನು ಹಾಕಿಕೊಂಡು, ಸಾವಿರಾರು ಸೇವಾಬಿಂಧುಗಳಿಗೆ ಕಾರ್ಯಕರ್ತರಾಗಿ ಸೇವೆಸಲ್ಲಿಸಲು ಅವಕಾಶವನ್ನು ನೀಡಿ ಸಮಾಜವನ್ನು ಸಂಘಟಿಸುತ್ತಾ, ಸಮಾಜದ ಶ್ರೇಯೋಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದ್ದಾರೆ.

ಲಕ್ಷಾಂತರ ಶಿಷ್ಯ ಭಕ್ತರನ್ನು ಪ್ರತಿನಿಧಿಸಿ ಶ್ರೀಮಠದ ಬಗೆಗಿನ ಬದ್ಧತೆಯನ್ನು ಬಹಿರಂಗವಾಗಿ ಸಾರಿ ಹೇಳುವ ಅಪರೂಪದ ಸಮಾವೇಶ ಈ ಬದ್ಧತಾ ಸಮಾವೇಶ. (ಶ್ರೀಗಳ ಕೇಸ್ ಬಗ್ಗೆ ಕೆಲವು ಅನುಮಾನಗಳು)
ಸಮಸ್ತ ಹವ್ಯಕ ಶಿಷ್ಯ ಭಕ್ತರನ್ನು ಪ್ರತಿನಿಧಿಸುವ ಹವ್ಯಕ ಮಹಾಮಂಡಲದ ನೇತೃತ್ವದಲ್ಲಿ ಶ್ರೀಸಂಸ್ಥಾನದ ಶಾಸನತಂತ್ರ ವ್ಯವಸ್ಥೆಯ ಕಾರ್ಯದರ್ಶಿಗಳು, ಮಹಾಮಂಡಲ-ಮಂಡಲ-ವಲಯಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಅಲ್ಲದೇ, ಗುರಿಕ್ಕಾರರು, ಶ್ರೀಕಾರ್ಯಕರ್ತರು ಹಾಗೂ ವಿವಿಧ ಅಂಗಸಂಸ್ಥೆಗಳ ಪದಾಧಿಕಾರಿಗಳು ಒಂದೆಡೆ ಸೇರಿ ಸಂಘಟನೆಯ ವಿರಾಟ್ ಸ್ವರೂಪವನ್ನು ಪ್ರಕಟಿಸಲಿದ್ದಾರೆ.
ಬದ್ಧತಾ ಸಮಾವೇಶದಲ್ಲಿ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications