ಐಟಿ ಅಧಿಕಾರಿಗಳಿಂದ ಕೆಂಪಯ್ಯ ವಿಚಾರಣೆ
ಬೆಂಗಳೂರು, ಮೇ 05 : ಗೃಹ ಸಚಿವರ ಸಲಹೆಗಾರ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮಾರ್ಚ್ನಲ್ಲಿ ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಗೆ ಸಂಬಂಧಿಸಿದಂತೆ ಈ ವಿಚಾರಣೆ ನಡೆದಿದೆ.
ಬುಧವಾರ ವಿಚಾರಣೆಗೆ ಹಾಜರಾಗುವಂತೆ ಕೆಂಪಯ್ಯ ಅವರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ಬುಧವಾರ ಸಂಜೆ ಅವರು ವಿಚಾರಣೆಗೆ ಹಾಜರಾಗಿದ್ದರು. ಸುಮಾರು ಮೂರು ತಾಸುಗಳ ಕಾಲ ಅಧಿಕಾರಿಗಳು ಕೆಂಪಯ್ಯ ವಿಚಾರಣೆ ನಡೆಸಿ, ಮಾಹಿತಿ ಸಂಗ್ರಹಣೆ ಮಾಡಿದ್ದಾರೆ. [ಗೃಹ ಸಚಿವರ ಸಲಹೆಗಾರರಾಗಿ ಕೆಂಪಯ್ಯ ನೇಮಕ]

ವಿಚಾರಣೆ ಏಕೆ? : 2016ರ ಮಾರ್ಚ್ 15ರಂದು ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿತ್ತು. ವಿಧಾನಪರಿಷತ್ ಸದಸ್ಯರಾದ ಸಿ.ಆರ್.ಮನೋಹರ್ (ಜೆಡಿಎಸ್), ಕೆ.ಗೋವಿಂದರಾಜು (ಕಾಂಗ್ರೆಸ್), ಡಿ.ಯು ಮಲ್ಲಿಕಾರ್ಜುನ (ಪಕ್ಷೇತರ) ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. [MLC ಗಳ ಮನೆ ಮೇಲೆ ಐಟಿ ದಾಳಿ]
ಕೆ.ಗೋವಿಂದರಾಜು ಅವರು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳೂ ಹೌದು. ಅವರ ಮನೆಯಿಂದ ಜಪ್ತಿ ಮಾಡಲಾದ ಡೈರಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಸಲಹೆಗಾರ ಕೆಂಪಯ್ಯ ಅವರ ಹೆಸರಿತ್ತು. ಈ ಬಗ್ಗೆ ವಿವರಣೆ ಪಡೆಯಲು ಅಧಿಕಾರಿಗಳು ಕೆಂಪಯ್ಯ ವಿಚಾರಣೆ ನಡೆಸಿದ್ದಾರೆ. [ಕೆಂಪಯ್ಯ ನೇಮಕ : ಗೃಹ ಸಚಿವ ಜಾರ್ಜ್ ಸ್ಪಷ್ಟನೆಗಳು]
2014ರ ಆಗಸ್ಟ್ನಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಗೃಹ ಸಚಿವರ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು. ಆಗ ಕೆ.ಜೆ.ಜಾರ್ಜ್ ಗೃಹ ಸಚಿವರಾಗಿದ್ದರು. ಈಗ ಡಾ.ಜಿ.ಪರಮೇಶ್ವರ ಅವರು ಗೃಹ ಸಚಿವರಾಗಿದ್ದು, ಕೆಂಪಯ್ಯ ಅವರು ಸಲಹೆಗಾರರಾಗಿ ಮುಂದುವರೆದಿದ್ದಾರೆ.
ಮಾಧ್ಯಮಗಳ ವಿರುದ್ಧ ಕೆಂಪಯ್ಯ ಗರಂ : ಇನ್ಫೆಂಟ್ರಿ ರಸ್ತೆಯಲ್ಲಿನ ಆದಾಯ ತೆರಿಗೆ ಇಲಾಖೆ ಕಚೇರಿಯಿಂದ ವಿಚಾರಣೆ ಮುಗಿಸಿ ಹೊರಬಂದ ಕೆಂಪಯ್ಯ ಅವರು ಮಾಧ್ಯಮಗಳ ವಿರುದ್ಧ ಗರಂ ಆದರು. ವಿಚಾರಣೆಗೆ ಏಕೆ ಬಂದಿದ್ದೇಕೆ? ಎಂದು ಪ್ರಶ್ನಿಸಿದ್ದಕ್ಕೆ 10 ರಿಂದ 15 ನಿಮಿಷ ಮಾಧ್ಯಮಗಳ ವಿರುದ್ಧ ಹರಿಹಾಯ್ದರು.
'ಸತ್ಯವನ್ನು ಸುಳ್ಳು ಮಾಡುವ ಜನ ನೀವು. ಸುಳ್ಳುಗಾರರು, ಬ್ಲಾಕ್ ಮೇಲ್ ಮಾಡುವವರು. ನಿಮ್ಮನ್ನು ನೋಡಿಕೊಳ್ಳಲು ದೇವರು ಇದ್ದಾನೆ. ಮೀಡಿಯಾ ಈಸ್ ವೆರಿ ಬ್ಯಾಡ್. ಬೆಳಗ್ಗೆಯಿಂದ ಸಂಜೆ ತನಕ ಸುಳ್ಳು ತೋರಿಸುತ್ತೀರಿ. ನೆಮ್ಮದಿಯಾಗಿ ಬದುಕುವುದಕ್ಕೆ ಬಿಡುವುದಿಲ್ಲ' ಎಂದು ಉದ್ದದ ಹೇಳಿಕೆ ನೀಡಿ ಕಾರು ಹತ್ತಿದರು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications