KGF ಬಾಬು ಅಲಿಯಾಸ್ ಸ್ಕ್ರಾಪ್ ಬಾಬು ಮನೆ ಮೇಲೆ ಇಡಿ ದಾಳಿ
ಬೆಂಗಳೂರು, ಮೇ. 28: ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕೆ ಇಳಿದು ಸೋಲನುಭವಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಕೆಜಿಎಫ್ ಬಾಬು ಅಲಿಯಾಸ್ ಯೂಸಫ್ ಶರೀಫ್ ಗೆ ಶನಿವಾರ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಶಾಕ್ ನೀಡಿದ್ದಾರೆ.
ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳ ತಂಡಗಳು ಬೆಳಗಿನ ಜಾವ ದಾಂಗುಡಿ ಇಟ್ಟು ದಾಖಲೆಗಳನ್ನು ವಶಕ್ಕೆ ಪಡೆದಿವೆ. ಸುಮಾರು ಎಂಟಕ್ಕೂ ಹೆಚ್ಚು ರಿಯಲ್ ಎಸ್ಟೇಟ್ ಬೋಗಸ್ ಕಂಪನಿಗಳು ಹುಟ್ಟಿಹಾಕಿರುವ ಕೆಜಿಎಫ್ ಬಾಬು ಸರ್ಕಾರದ ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ನಗರದ ಪ್ರಮುಖ ಪ್ರದೇಶದಲ್ಲಿ ಸರ್ಕಾರಿ ಜಮೀನನ್ನು ಆಕ್ಷನ್ ಹೆಸರಿನಲ್ಲಿ ಖರೀದಿಸಿ ಕೋಟಿ ಕೋಟಿ ಲೂಟಿ ಮಾಡಿದ ಆರೋಪ ಕೇಳಿ ಬಂದಿತ್ತು. ನಾನಾ ಕಂಪನಿಗಳ ಹೆಸರಿನಲ್ಲಿ ಸರ್ಕಾರಿ ಜಮೀನು ಕಬಳಿಸಿ ಅದನ್ನು ಅಭಿವೃದ್ಧಿ ಪಡಿಸುವ ಹೆಸರಿನಲ್ಲಿ ಬಾಬು ಅನ್ಯ ಕಂಪನಿಗಳಿಗೆ ಮಾರಾಟ ಮಾಡಿ ಕೋಟಿ ಕೋಟಿ ಗಳಿಸಿದ ಆರೋಪ ಕೇಳಿ ಬಂದಿತ್ತು.

ಕಳೆದ ಡಿಸೆಂಬರ್ ನಲ್ಲಿ ಬೆಂಗಳೂರು ನಗರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕೆ ಇಳಿದು ಬಿಜೆಪಿ ಅಭ್ಯರ್ಥಿ ಗೋಪಿನಾಥ ರೆಡ್ಡಿ ವಿರುದ್ಧ ಸೋಲುಂಡಿದ್ದರು. ರೋಲ್ಸ್ ರಾಯ್ ಕಾರಿನಲ್ಲಿ ಬಂದಿದ್ದ ಬಾಬು ಸೋಲು ಕಂಡು ಆಟೋದಲ್ಲಿ ತೆರಳುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಚುನಾವಣೆ ವೇಳೆ 1743 ಕೋಟಿ ರೂ. ಆಸ್ತಿಯನ್ನು ಚುನಾವಣಾ ಆಯೋಗದ ಮುಂದೆ ಘೋಷಣೆ ಮಾಡಿದ್ದರು. ಈ ಮೂಲಕ ರಾಜ್ಯದ ನಂಬರ್ ಒನ್ ಶ್ರೀಮಂತ ರಾಜಕಾರಣಿ ಎಂದೇ ಹೆಸರಾಗಿದ್ದರು.

ಕೆಜಿಎಫ್ ಬಾಬು ಅಲಿಯಾಸ್ ಸ್ಕ್ರಾಪ್ ಬಾಬು ಅಲಿಯಾಸ್ ಚಿಕ್ಕಳು ಬಾಬು ಅವರ ಆದಾಯದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದರು. ಕಳೆದ ಚುನಾವಣೆ ಈತ ಆಸ್ತಿ ಘೋಷಣೆ ಮಾಡಿದ್ದು ಎಲ್ಲರನ್ನು ದಿಗ್ರ್ಭಾಂತರನ್ನಾಗಿಸಿತ್ತು. ಕೇವಲ ಐದನೇ ತರಗತಿ ಓದಿರುವ ಬಾಬು 1700 ಕೋಟಿ ರೂ. ಒಡೆಯನಾದ ಬಗ್ಗೆ ಜನರೇ ಅಚ್ಚರಿಗೊಂಡಿದ್ದರು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications