ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣ ಹೆಚ್ಚಳ: ಮಾನವ ಕಳ್ಳಸಾಗಣೆ ಆಕ್ಟೀವ್ ಸೂಚನೆ?
ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿದಿನ ಐದು ಮಕ್ಕಳನ್ನು ಅಪಹರಿಸಲಾಗುತ್ತಿದೆ ಎಂಬ ಮಾಹಿತಿ ಹೊಬಿದ್ದಿದ್ದು, ಮಾನವ ಕಳ್ಳಸಾಗಣೆ ತಂಡ ಆಕ್ಟೀವ್ ಆಗಿರುವ ಸೂಚನೆ ಇದೆ.
2018ರಿಂದ 2023 ಜೂನ್ 15ರ ನಡುವೆ ಕರ್ನಾಟಕದಲ್ಲಿ 10,687 ಮಕ್ಕಳು ಕಾಣೆಯಾಗಿದ್ದಾರೆ. ಇದರಲ್ಲಿ, ಪೊಲೀಸರು 9,109 ಮಕ್ಕಳನ್ನು ಪತ್ತೆ ಮಾಡಿದ್ದಾರೆ. ಇದು ಪ್ರತಿ 10 ಪ್ರಕರಣಗಳಲ್ಲಿ ಸರಿಸುಮಾರು ಒಂಬತ್ತು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ವಿಧಾನಮಂಡಲದ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡಿಸಿದ ಅಂಕಿಅಂಶಗಳು ತಿಳಿಸಿವೆ.

ಈ ಅವಧಿಯಲ್ಲಿ 1,578 ಮಕ್ಕಳ ನಾಪತ್ತೆ ಪ್ರಕರಣಗಳನ್ನು ಭೇದಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ನಾಪತ್ತೆಯಾಗುವ ಮಕ್ಕಳ ಸಂಖ್ಯೆ ಅದರಲ್ಲೂ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚುತ್ತಿದ್ದು, ಇದು ಮಾನವ ಕಳ್ಳಸಾಗಾಣಿಕೆ ಜಾಲವನ್ನು ಸಕ್ರಿಯವಾಗಿರುವುದನ್ನು ಸೂಚಿಸುತ್ತದೆ ಎಂದು ಡಿಎಚ್ ವರದಿ ಮಾಡಿದೆ.
ಯಾವುದೇ ನಾಪತ್ತೆ ಪ್ರಕರಣವನ್ನು 60 ದಿನಗಳಲ್ಲಿ ಪತ್ತೆ ಮಾಡದಿದ್ದರೆ, ಅದನ್ನು ಹೆಚ್ಚು ಪರಿಣಾಮಕಾರಿ ತನಿಖೆಗಾಗಿ ವಿಶೇಷ ಮಾನವ ಕಳ್ಳಸಾಗಣೆ ವಿರೋಧಿ ಘಟಕಕ್ಕೆ ವರ್ಗಾಯಿಸಲಾಗುತ್ತದೆ. ರಾಜ್ಯದಲ್ಲಿ 35 ಮಾನವ ಕಳ್ಳಸಾಗಣೆ ತಡೆ ಘಟಕಗಳಿವೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಮಕ್ಕಳು ಕಾಣೆಯಾದ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳನ್ನು ವಿವರಿಸಿದ ಪರಮೇಶ್ವರ, ಪೊಲೀಸರು ಮಕ್ಕಳ ಸಂಬಂಧಿಕರು ಮತ್ತು ಸ್ನೇಹಿತರನ್ನು ವಿಚಾರಿಸುವುದರ ಹೊರತಾಗಿ ಮಿಸ್ಸಿಂಗ್ ಗೆಜೆಟ್ ಅನ್ನು ಬಿಡುಗಡೆ ಮಾಡುತ್ತಾರೆ. ಅಪರಿಚಿತ ಶವಗಳನ್ನೂ ಪರಿಶೀಲಿಸಲಾಗುತ್ತಿದೆ. ಅನಾಥಾಶ್ರಮಗಳು, ಆಶ್ರಮಗಳು, ಆಧ್ಯಾತ್ಮಿಕ ಸ್ಥಳಗಳು ಮತ್ತು ಬಾಲ ಮಂದಿರಗಳನ್ನು ಹುಡುಕಲಾಗುತ್ತದೆ. ನೆರೆಯ ಜಿಲ್ಲೆಗಳಳಲ್ಲೂ ತನಿಖೆಗೆ ಕ್ರಮ ವಹಿಸಲಾಗುತ್ತದೆ ಎಂದು ಅವರು ಹೇಳಿದರು.
ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀಟ್ ಸಿಬ್ಬಂದಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಾನವ ಕಳ್ಳಸಾಗಣೆ ಪ್ರಕರಣಗಳ ಕುರಿತು ಮಾಹಿತಿ ಸಂಗ್ರಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ನಗರದಲ್ಲೇ ಹೆಚ್ಚಿನ ಮಕ್ಕಳ ನಾಪತ್ತೆ ಪ್ರಕರಣ ಇದೆ. ಕಾಣೆಯಾದ ಮಕ್ಕಳ ಪ್ರತಿ 10 ಪ್ರಕರಣಗಳಲ್ಲಿ ನಾಲ್ಕು ಬೆಂಗಳೂರಿನಲ್ಲಿ ಇದೆ ಎಂದರು.
ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ಕಾಣೆಯಾಗುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಕೊರೋನಾ ವೈರಸ್ ನಂತರದ ವಲಸೆಯಿಂದಾಗಿ ಪ್ರಕರಣಗಳು ಹೆಚ್ಚಾಗಿದೆ. ಅಲ್ಲದೆ, ಕೋವಿಡ್ -19 ಮಕ್ಕಳನ್ನು ಮನೆಯಲ್ಲಿಯೇ ಸೀಮಿತಗೊಳಿಸಿರುವುದನ್ನು ನಾವು ನೋಡಿದ್ದೇವೆ. ಇದರಿಂದ ಅವರು ತಮ್ಮದೇ ನಿರ್ಧಾರದ ಮೇಲೆ ಹೊರಡುವಷ್ಟು ನಿರಾಶೆಗೊಂಡಿದ್ದಾರೆ ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್ ತಿಳಿಸಿದೆ.
ಪೋಷಕರು ಈಗ ಹೆಚ್ಚು ಜಾಗೃತರಾಗಿದ್ದಾರೆ. ಹಿಂದೆ, ಕಾಣೆಯಾದ ಮಗು ಪತ್ತೆಯಾದ ನಂತರ, ಪೋಷಕರು ಮತ್ತೆ ಪೊಲೀಸರಿಗೆ ವರದಿ ಮಾಡುತ್ತಿರಲಿಲ್ಲ. ಈಗ ಮಗು ನಾಪತ್ತೆಯಾಗಿದೆ ಎಂದು ಹೆಚ್ಚಿನ ಪೋಷಕರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ. ಆದರೂ ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳು ಕಾಣೆಯಾಗಿರುವ ಬಗ್ಗೆ ಪಾಲಕರು ಪೊಲೀಸರಿಗೆ ದೂರು ನೀಡಲು ಹಿಂಜರಿಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಾಣೆಯಾದ ಹೆಚ್ಚಿನ ಮಕ್ಕಳನ್ನು ಪತ್ತೆಹಚ್ಚುವಲ್ಲಿ ಪೋಲೀಸ್ ಮಾಹಿತಿಯು ನಂಬಲರ್ಹವಾಗಿದೆ. ಈಗ ಸ್ಥಳದಲ್ಲಿ ರಚನೆಗಳಿವೆ. ಸರ್ಕಾರೇತರ ಸಂಸ್ಥೆಗಳು ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತವೆ ಎಂದು ಚೈಲ್ಡ್ ರೈಟ್ಸ್ ಟ್ರಸ್ಟ್ ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications