ಕೆಳದರ್ಜೆ ನೌಕರರ ಮಾಸಿಕ ಅನುಕಂಪ ಭತ್ಯೆ ಹೆಚ್ಚಳ: ದೇಶಪಾಂಡೆ
ಬೆಂಗಳೂರು, ಜನವರಿ 10: ರಾಜ್ಯದ ಕೆಳದರ್ಜೆ ನೌಕರರಾದ ತೋಟಿ, ತಳವಾರ, ನೀರಗಂಟಿ, ವಾಲೀಕಾರ ಸನದಿ ಮತ್ತಿತರರಿಗೆ ಹಾಲಿ ಕೊಡುತ್ತಿರುವ ಮಾಸಿಕ 800 ರೂ.ಗಳ ಅನುಕಂಪ ಭತ್ಯೆಯನ್ನು 1,600 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಒಟ್ಟು ನಾಲ್ಕು ಕಂದಾಯ ವಿಭಾಗಗಳಲ್ಲಿ ಒಟ್ಟು 2,869 ಕೆಳದರ್ಜೆ ನೌಕರರಿದ್ದಾರೆ. ಈ ಪೈಕಿ ಬೆಂಗಳೂರು ಕಂದಾಯ ವಿಭಾಗದಲ್ಲಿ 1,925, ಮೈಸೂರು ವಿಭಾಗದಲ್ಲಿ 56, ಬೆಳಗಾವಿ ವಿಭಾಗದಲ್ಲಿ 281 ಮತ್ತು ಕಲಬುರಗಿ ವಿಭಾಗದಲ್ಲಿ 607 ಮಂದಿ ಇದ್ದಾರೆ. ಇವರೆಲ್ಲರಿಗೂ ಈ ಹೆಚ್ಚಳದ ಲಾಭ ಸಿಗಲಿದ್ದು, ಈ ಸಂಬಂಧ ಆದೇಶ ಹೊರಡಿಸಲಾಗಿದೆ,'' ಎಂದು ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಮೀಸಲಾತಿ ನೀಡುವ ಕ್ರಮವನ್ನು ಸ್ವಾಗತಿಸಿರುವ ಆರ್.ವಿ.ದೇಶಪಾಂಡೆ ಉದ್ದೇಶಿತ ಮೀಸಲನ್ನು ಜಾರಿಗೆ ತರಲು ತಿದ್ದುಪಡಿ ಮಸೂದೆ ಮಂಡಿಸಿ, ಸಂಸತ್ತಿನ ಉಭಯ ಸದನಗಳ ಅನುಮೋದನೆ ಪಡೆದಿರುವುದು ಸ್ವಾಗತಾರ್ಹವಾದುದಾಗಿದೆ,'' ಎಂದು ಹೇಳಿದ್ದಾರೆ.

ಕಾಯ್ದೆಯಿಂದ ಆರ್ಥಿಕವಾಗಿ ಹಿಂದುಳಿದವರಿಗೆ ನೀಡುವ ಯಾವುದೇ ಬಗೆಯ ಮೀಸಲು ಸೌಲಭ್ಯಕ್ಕೆ ಒಳಪಡದಿರುವಂತಹ ವರ್ಗಗಳ ಬಡವರಿಗೆ ಅನುಕೂಲವಾಗಲಿದೆ. ವಾರ್ಷಿಕ ಆದಾಯ 8 ಲಕ್ಷ ರೂ. ಮೀರದೆ ಇರುವಂಥವರಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಇದರಿಂದ ಮೀಸಲಾತಿ ಸಿಗಲಿದ್ದು, ಸಾಕಷ್ಟು ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬಗಳಿಗೆ ಅನುಕೂಲವಾಗಲಿದೆ. ಈ ಶೇಕಡ 10ರಷ್ಟು ಮೀಸಲಿನಿಂದ ಒಟ್ಟು ಮೀಸಲಾತಿ ಪ್ರಮಾಣ ಶೇಕಡ 50ರಿಂದ 60ಕ್ಕೆ ಏರಲಿದೆ. ಎಂದು ದೇಶಪಾಂಡೆ ಅಭಿಪ್ರಾಯ ಪಟ್ಟಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications